AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ

ತುಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಯಕವಾಗಿದೆ. ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ.

Health Tips: ಆಹಾರದಲ್ಲಿನ ಈ ಕೆಲವು ಮಸಾಲೆ ಪದಾರ್ಥಗಳು ನಿಮ್ಮ ದೇಹದಲ್ಲಿ ಕೊಲೆಸ್ಟ್ರಾಲ್​ ಮಟ್ಟವನ್ನು ನಿಯಂತ್ರಿಸುತ್ತದೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 18, 2021 | 9:43 AM

Share

ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳಿಂದ ನಮಗೆ ಆರೋಗ್ಯ ಪ್ರಯೋಜನಗಳು ಸಾಕಷ್ಟು ಸಿಗುತ್ತವೆ. ಈ ಮಸಾಲೆಗಳಿಂದ ನಮ್ಮಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಳವಾಗುತ್ತದೆ. ಆರೋಗ್ಯ ಮತ್ತು ರುಚಿಗೆ ಉತ್ತಮವಾದ ಕೆಲವು ಮಸಾಲೆ ಪದಾರ್ಥಗಳು ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಅರಿಶಿಣ, ದಾಲ್ಚಿನ್ನಿ, ಜೀರಿಗೆ, ಮೆಂತೆ ಹೀಗೆ ನಾನಾ ಪದಾರ್ಥಗಳು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ.

ಇಂತಹ ಕೆಲವು ಪದಾರ್ಥಗಳ ಸೇವನೆಯು ಹೃದಯ ಸಂಬಂಧಿತ ಅಪಾಯವನ್ನು ಕಡಿಮೆ ಮಾಡುವುದರ ಜತೆಗೆ ಮಧುವೇಹವನ್ನು ನಿಯಂತ್ರಿಸಲು ಸಹಾಯಕವಾಗಿದೆ. ಅರಿಶಿಣದಲ್ಲಿರುವ ಕರ್ಕ್ಯುಮಿನ್ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಒಂದು ಲೋಟ ಹಾಲಿಗೆ ಅಥವಾ ನೀರಿಗೆ ಅರಿಶಿಣ ಸೇರಿಸಿ ಕುಡಿಯುವ ಅಭ್ಯಾಸ ಮಾಡಿಕೊಳ್ಳಿ. ಇದು ನಿಮ್ಮ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ.

ಅಡುಗೆಯಲ್ಲಿ ಬಳಸುವ ಕರಿಮೆಣಸು ಕೂಡಾ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜತೆಗೆ ಲವಂಗದಿಂದಲೂ ಸಹ ಆರೋಗ್ಯ ಪ್ರಯೋಜನಗಳು ತುಂಬಾ ಇವೆ. ಇದು ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಇದು ದೇಹವನ್ನು ಮಧುಮೇಹ ಸಮಸ್ಯೆಯಿಂದ ರಕ್ಷಿಸಲು ಸಹಾಯಕವಾಗಿದೆ.

ದಾಲ್ಚಿನ್ನಿ ಆ್ಯಂಟಿಮೈಕ್ರೋಬಿಯಲ್ ಮತ್ತು ಆ್ಯಂಟಿಆ್ಯಕ್ಸಿಡೆಂಟ್​ಗಳಿಂದ ಸಮೃದ್ಧವಾಗಿದೆ. ಇದು ದೇಹದಲ್ಲಿನ ಉತ್ತಮ ಕೊಲೆಸ್ಟ್ರಾಲ್ ಸುಧಾರಿಸಲು ಸಹಾಯ ಮಾಡುತ್ತದೆ. ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿರುವುದರಿಂದ ರಕ್ತದಲ್ಲಿ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ.

ತುಳಸಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ತುಳಸಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಯಕವಾಗಿದೆ. ತುಳಸಿಯಲ್ಲಿರುವ ಉತ್ಕರ್ಷಣ ನಿರೋಧಕಗಳು ದೇಹದ ಒತ್ತಡವನ್ನು ಕಡಿಮೆ ಮಾಡುತ್ತದೆ. ಜತೆಗೆ ಇದು ಮಾನಸಿಕ ಆರೋಗ್ಯಕ್ಕೂ ಸಹ ಒಳ್ಳೆಯದು.

ಇದನ್ನೂ ಓದಿ:

Health Tips: ಸೂರ್ಯ ನಮಸ್ಕಾರದ ಜತೆಗೆ ಈ 5 ವ್ಯಾಯಾಮ; ಆರೋಗ್ಯಯುತ ಜೀವನಕ್ಕಾಗಿ ಈ ಅಭ್ಯಾಸ ಮುಂದುವರಿಸಿ

Health Tips: ಬಾಯಿಯಿಂದ ದುರ್ವಾಸನೆ ಬರುತ್ತಿದೆಯೇ? ಸಮಸ್ಯೆ ಪರಿಹಾರಕ್ಕಾಗಿ ಇಲ್ಲಿದೆ ಸರಳ ಸಲಹೆಗಳು

(These foods control your cholesterol and diabetes)

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?