AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

Heart Health: ಈ ಹಣ್ಣುಗಳನ್ನು ತಿನ್ನಿ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಿ
Fruits
TV9 Web
| Edited By: |

Updated on:Jul 04, 2022 | 3:59 PM

Share

ಇಡೀ ದೇಹವು ಉತ್ತಮವಾಗಿ ಕಾರ್ಯನಿರ್ವಹಿಸಲು ಹೃದಯದ ಆರೋಗ್ಯ ತುಂಬಾ ಮುಖ್ಯವಾಗುತ್ತದೆ. ಹೃದಯಕ್ಕೆ ಹಾನಿಯಾದರೆ ಇಡೀ ದೇಹಕ್ಕೆ ನೇರವಾಗಿ ಅಥವಾ ಪರೋಕ್ಷವಾಗಿ ಪರಿಣಾಮ ಬೀರುತ್ತದೆ. ಹಾಗಾಗಿ ನೀವು ಹೃದಯದ ಆರೋಗ್ಯವನ್ನು ಕಾಪಾಡುಕೊಳ್ಳುವುದು ಬಹುಮುಖ್ಯ, ಆರೋಗ್ಯಕರವಾದ ಆಹಾರವನ್ನು ಸೇವಿಸುವುದರಿಂದ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಥವಾ ಕೊಬ್ಬಿನ ಶೇಖರಣೆಯಾಗುವುದು ತಪ್ಪುತ್ತದೆ.

ಕೆಲವು ಹಣ್ಣುಗಳು, ತರಕಾರಿಗಳನ್ನು ಸೇವಿಸುವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೃದಯದ ಆರೋಗ್ಯ ಮತ್ತು ರಕ್ತದೊತ್ತಡದ ಮಟ್ಟವನ್ನು ಕಾಪಾಡಿಕೊಳ್ಳಲು ಕೆಲಸ ಮಾಡುತ್ತದೆ. ಹಣ್ಣುಗಳು ಬಹಳಷ್ಟು ನೀರು ಮತ್ತು ಫೈಬರ್ ಅನ್ನು ಹೊಂದಿರುತ್ತವೆ.

ಇದು ನಿಮ್ಮ ಹೃದಯವನ್ನು ಆರೋಗ್ಯವಾಗಿಡಲು ಕೆಲಸ ಮಾಡುತ್ತದೆ. ಹೃದಯವನ್ನು ಆರೋಗ್ಯಕರವಾಗಿಡಲು, ನೀವು ಆಹಾರದಲ್ಲಿ ಕಲ್ಲಂಗಡಿ, ಮಾವು, ಬೆರ್ರಿ ಹಣ್ಣುಗಳು, ಆ್ಯಪಲ್ ಇತ್ಯಾದಿ ಹಣ್ಣುಗಳನ್ನು ಸೇರಿಸಿಕೊಳ್ಳಬಹುದು.

ಆ್ಯಪಲ್: ಆ್ಯಪಲ್​ನಿಂದ ಹಲವು ರೀತಿಯ ಆರೋಗ್ಯ ಪ್ರಯೋಜನಗಳಿವೆ. ಆ್ಯಪಲ್​ನಲ್ಲಿರುವ ನ್ಯೂಟ್ರಿಯಂಟ್ಸ್​ಗಳು ಹೃದಯ ಸಂಬಂಧಿ ಕಾಯಿಲೆ ಹಾಗೂ ಕೊಲೆಸ್ಟ್ರಾಲ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೃದಯಾಘಾತ ಹಾಗೂ ಪಾರ್ಶ್ವವಾಯುವಿನ ಆಪಾಯವನ್ನು ಕೂಡ ಕಡಿಮೆ ಮಾಡುತ್ತದೆ.

ಬೆರ್ರಿ: ಬೆರ್ರಿಯಲ್ಲಿರುವ ಆಂಟಿ ಆಕ್ಸಿಡೆಂಟ್ ಅಂಶವು ಹೃದಯಾಘಾತವನ್ನು ತಪ್ಪಿಸುತ್ತದೆ ಹಾಗೂ ನಿತ್ಯ ಸೇವನೆ ಮಾಡುವುದರಿಂದ ಪಾರ್ಶ್ವವಾಯುವಿನಿಂದ ದೂರ ಇರಬಹುದು.

ಕಿತ್ತಳೆ: ಕಿತ್ತಳೆ ಹಣ್ಣಿನಲ್ಲಿಯೂ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು, ಅಲ್ಲಿರುವ ಫ್ಲೇವನಾಯ್ಡ್​ ಅಂಶಗಳು ಆಕ್ಸಿಡೇಷನ್ ಪ್ರಮಾಣವನ್ನು ಕಡಿಮೆ ಮಾಡುತ್ತದೆ. ಹೀಗಾಗಿ ಹೃದಯಾಘಾತ ಅಪಾಯವು ಕಡಿಮೆಯಾಗುತ್ತದೆ. ರಕ್ತದ ಪರಿಚಲನೆ ಕೂಡ ಉತ್ತಮವಾಗುತ್ತದೆ.

ಪೀಚ್ : ಮ್ಮ ಹೃದಯದ ಆರೋಗ್ಯವನ್ನು ಕಾಪಾಡಿಕೊಳ್ಳಲು ಪೀಚ್‌ ತುಂಬಾ ಸಹಾಯ ಮಾಡುತ್ತದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್‌ಗಳು, ಫೈಬರ್, ಪೊಟ್ಯಾಸಿಯಮ್ ಮತ್ತು ವಿಟಮಿನ್ ಸಿ ನಂತಹ ಪೋಷಕಾಂಶಗಳಿವೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುವುದು ಮಾತ್ರವಲ್ಲದೆ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಇವುಗಳು ರುಚಿಕರ ಹಾಗೂ ಪೋಷಕಾಂಶಗಳಿಂದ ಕೂಡಿದ್ದು, ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ.

ಕಲ್ಲಂಗಡಿ: ಕಲ್ಲಂಗಡಿಯಲ್ಲಿ ಆಂಟಿ ಆಕ್ಸಿಡೆಂಟ್ಸ್​ಗಳಿದ್ದು ರಕ್ತಪರಚಲನೆಯನ್ನು ಉತ್ತಮಗೊಳಿಸಿ, ಹೃದಯದ ಅಪಾಯವನ್ನು ಕಾಪಾಡುತ್ತವೆ.

Published On - 3:58 pm, Mon, 4 July 22

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​