AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ

ಹಬ್ಬದ ಸಮಯದಲ್ಲಿ ಸಿಹಿ ತಿಂಡಿಗಳು ಜೊತೆಗೆ ಕರಿದ ಪದಾರ್ಥಗಳ ಅತಿಯಾದ ಸೇವನೆಯು ನಿಮ್ಮ ಆರೋಗ್ಯವನ್ನು ಹಾನಿಗೊಳಿಸಬಹುದು. ಹಾಗಿರುವಾಗ ನೀವು ಸೇವಿಸುವ ಆಹಾರದ ಬಗೆಗೆ ಹೆಚ್ಚು ಗಮನವಿರಲಿ.

Health Tips: ಈ ಕೆಲವು ಪೌಷ್ಟಿಕಾಂಶಯುಕ್ತ ಪಾನೀಯಗಳು ನಿಮ್ಮ ಆರೋಗ್ಯಕ್ಕೆ ಉತ್ತಮ
ಸಂಗ್ರಹ ಚಿತ್ರ
TV9 Web
| Updated By: shruti hegde|

Updated on: Nov 04, 2021 | 12:50 PM

Share

ಹಬ್ಬದ ಸಮಯದಲ್ಲಿ ನಿಮ್ಮ ದೇಹ ಆರೋಗ್ಯವಾಗಿರುವಂತೆ ನೋಡಿಕೊಳ್ಳುವುದು ಉತ್ತಮ. ಹಬ್ಬದ ಸಮಯದಲ್ಲಿ ಅನೇಕ ವಿಧದ ಭಕ್ಷ್ಯಗಳು, ಸಿಹಿ ತಿಂಡಿಗಳು ಜೊತೆಗೆ ಕರಿದ ಪದಾರ್ಥಗಳ ಅತಿಯಾದ ಸೇವನೆಯು ನಿಮ್ಮ ಆರೋಗ್ಯವನ್ನು ಹಾನಿಗೊಳಿಸಬಹುದು. ಹಾಗಿರುವಾಗ ನೀವು ಸೇವಿಸುವ ಆಹಾರದ ಬಗೆಗೆ ಹೆಚ್ಚು ಗಮನವಿರಲಿ. ಹಸಿವಾದಾಗ ಪೌಷ್ಟಿಕಾಂಶಯುಕ್ತ ಪಾನೀಯಗಳನ್ನು ಸೇವಿಸುವ ಮೂಲಕ ದೇಹದಲ್ಲಿ ಶಕ್ತಿ ಪಡೆದುಕೊಳ್ಳಬಹುದಾಗಿದೆ. ನೀವು ಸೇವಿಸಬಹುದಾದ ಪೌಷ್ಟಿಕಾಂಶಯುಕ್ತ ಪಾನೀಯಗಳು ಈ ಕೆಳಗಿನಂತಿದೆ.

ಅರಿಶಿಣ ಹಾಲು ಹಬ್ಬ ಹರಿದಿನಗಳ ಸಮದಯದಲ್ಲಿ ದೇಹವನ್ನು ನಿರ್ವಿಷಗೊಳಿಸಲು ಅರಿಶಿಣ ಹಾಲು ಉತ್ತಮ ಮಾರ್ಗವಾಗಿದೆ. ಇದನ್ನು ತಯಾರಿಸಲು ಕುದಿಯುವ ಹಾಲಿನಲ್ಲಿ ಒಂದು ಚಿಟಿಕೆ ಅರಿಶಿಣ ಬೆರೆಸಿ ಸೇವಿಸಿ. ಈ ಅರಿಶಿಣ ಹಾಲನ್ನು ಸೇವಿಸುವುದರಿಂದ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ.

ನಿಂಬೆ- ಶುಂಠಿ ಪಾನೀಯ ನಿಂಬೆ – ಶುಂಠಿ ಕೂಡಾ ದೇಹದಿಂದ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ. ಇದಕ್ಕಾಗಿ ಒಂದು ಲೋಟ ನೀರಿಗೆ ಅರ್ಧ ನಿಂಬೆ ಹಣ್ಣನ್ನು ಹಿಂಡಿ ಅದಕ್ಕೆ ಒಂದು ಚೂರು ಶುಂಠಿ ಚೂರು ಬೆರೆಸಿ. ಅದನ್ನು ಚೆನ್ನಾಗಿ ಕುದಿಸಿ. ಬಳಿಕ ಆ ನೀರನ್ನು ಸೇವಿಸಿ. ಇದು ನಿಮ್ಮ ಜೀರ್ಣಕ್ರಿಯೆಗೂ ತುಂಬಾ ಪ್ರಯೋಜನಕಾರಿ.

ಬಿಟ್ರೂಟ್ ಜ್ಯೂಸ್ ಬಿಟ್ರೂಟ್ ಜ್ಯೂಸ್ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಬಿಟ್ರೂಟ್ ಜ್ಯೂಸ್ ನಿಮ್ಮ ದೇಹಕ್ಕೆ ಶಕ್ತಿಯನ್ನು ನೀಡುತ್ತದೆ. ಜೊತೆಗೆ ಅಯಾಸ, ಒತ್ತಡದಿಂದ ಪರಿಹಾರ ಕಂಡುಕೊಳ್ಳಲು ಸಹಾಯ ಮಾಡುತ್ತದೆ. ಬಿಸಿಲಿನ ಬೇಗೆ ಮತ್ತು ಆಯಾಸವಾದಾಗ ಬಿಟ್ರೂಟ್​ ಜ್ಯೂಸ್​ ನಿಮ್ಮ ಆರಾಮಗೊಳಿಸುತ್ತದೆ.

ಹಸಿರು ಚಹಾ ಗ್ರೀನ್ ಟೀ ಆರೋಗ್ಯಕ್ಕೆ ಒಳ್ಳೆಯದು. ದಿನಕ್ಕೆ ಎರಡರಿಂದ ಮೂರು ಬಾರಿ ಗ್ರೀನ್ ಟೀ ಸೇವಿಸಬಹುದು. ನೀವು ನಿಂಬೆ ಮತ್ತು ಜೇನುತುಪ್ಪದಿಂದ ಗ್ರೀನ್ ಟೀ ತಯಾರಿಸಿಕೊಳ್ಳಬಹುದು. ಜೀರ್ಣಕ್ರಿಯೆಯನ್ನು ಸುಧಾರಿಸಲು ಶುಂಠಿ ಸೇರಿಸಿ ಗ್ರೀನ್​ ಟೀ ತಯಾರಿಸಿಕೊಂಡು ಸವಿಯಿರಿ.

ಇದನ್ನೂ ಓದಿ:

Health Tips: ಜೀರ್ಣಕ್ರಿಯೆ ಚೆನ್ನಾಗಿರಲು 9 ಆಯುರ್ವೇದ ಸಲಹೆಗಳು ಇಲ್ಲಿವೆ

Health Tips: ಎಲೆ ಅಡಿಕೆ ಸೇವನೆಯಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ ಗೊತ್ತಾ?

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?