AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯನ್ನು ನೋಡಲು ಹೋಗುವಾಗ ತೆಗೆದುಕೊಂಡು ಹೋಗಬೇಕಾದ ಆಹಾರಗಳಿವು

ನಮಗೆ ಪರಿಚಯದವರು ಯಾರೋ ಒಬ್ಬರು ಆಸ್ಪತ್ರೆಗೆ ದಾಖಲಾಗಿರುತ್ತಾರೆ. ಅವರನ್ನು ನೋಡಲು ಹೋಗುವಾಗ ಏನು ತೆಗೆದುಕೊಂಡು ಹೋಗಬೇಕೆಂಬ ಗೊಂದಲದಲ್ಲಿ ನೀವಿದ್ದರೆ ಅದಕ್ಕೆ ಪರಿಹಾರ ಇಲ್ಲಿದೆ. ಆಸ್ಪತ್ರೆಯಲ್ಲಿರುವ ರೋಗಿಯ ಆರೋಗ್ಯಕ್ಕೆ ಉತ್ತಮವಾದ ಕೆಲವು ಆಹಾರಗಳ ಬಗ್ಗೆ ಮಾಹಿತಿ ಇಲ್ಲಿದೆ.

ರೋಗಿಯನ್ನು ನೋಡಲು ಹೋಗುವಾಗ ತೆಗೆದುಕೊಂಡು ಹೋಗಬೇಕಾದ ಆಹಾರಗಳಿವು
ತಾಜಾ ಜ್ಯೂಸ್
ಸುಷ್ಮಾ ಚಕ್ರೆ
|

Updated on: Mar 05, 2024 | 5:39 PM

Share

ಕೆಲವು ಆಹಾರಗಳನ್ನು ಜೀರ್ಣ ಮಾಡಿಕೊಳ್ಳುವುದು ದೇಹಕ್ಕೆ ಕಷ್ಟವಾಗುತ್ತದೆ. ಇನ್ನು ಕೆಲವು ಆಹಾರಗಳು ಸುಲಭವಾಗಿ ಜೀರ್ಣವಾಗುತ್ತವೆ. ಹೀಗಾಗಿ, ಅನಾರೋಗ್ಯಕ್ಕೊಳಗಾದ ವ್ಯಕ್ತಿಗಳಿಗೆ ಕೆಲವು ಆಹಾರಗಳನ್ನು ಸೇವಿಸದಂತೆ ವೈದ್ಯರು ಸೂಚನೆ ನೀಡುತ್ತಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ನೋಡಲು ಹೋಗುವಾಗ ಇದೇ ಕಾರಣಕ್ಕೆ ಬಹುತೇಕ ಜನರು ಬ್ರೆಡ್, ಹಣ್ಣುಗಳನ್ನು ತೆಗೆದುಕೊಂಡು ಹೋಗುತ್ತಾರೆ. ಆದರೆ, ಇವುಗಳು ಮಾತ್ರವಲ್ಲದೆ ಇನ್ನೂ ಕೆಲವು ಆಹಾರಗಳನ್ನು ರೋಗಿಗಳಿಗೆ ನೀಡಬಹುದು. ಅವುಗಳ ಬಗ್ಗೆ ಮಾಹಿತಿ ಇಲ್ಲಿದೆ.

ಸೂಪ್:

ಅನಾರೋಗ್ಯದಿಂದ ಬಳಲುತ್ತಿರುವವರಿಗೆ ಮತ್ತು ತ್ವರಿತವಾಗಿ ಚೇತರಿಸಿಕೊಳ್ಳಲು ಬಯಸುವವರಿಗೆ ಚಿಕನ್ ಅಥವಾ ತರಕಾರಿ ಸೂಪ್ ಉತ್ತಮ ಆಹಾರವಾಗಿದೆ. ಆದರೂ ಅದರಲ್ಲಿ ಕಡಿಮೆ ಪ್ರಮಾಣದ ಉಪ್ಪು ಹಾಕುವುದು ಉತ್ತಮ. ಇದರಿಂದ ಅಧಿಕ ಬಿಪಿ ಸಮಸ್ಯೆ ಇರುವ ರೋಗಿಗಳಿಗೆ ಉಪಯೋಗವಾಗುತ್ತದೆ. ಈ ಸೂಪ್ ಮೂಳೆಗಳನ್ನು ಬಲಪಡಿಸಲು ಸಹಾಯ ಮಾಡುವ ಪೋಷಕಾಂಶಗಳಿಂದ ಸಮೃದ್ಧವಾಗಿದೆ. ಕ್ಯಾಲ್ಸಿಯಂ, ಮೆಗ್ನೀಸಿಯಮ್, ಪೊಟ್ಯಾಸಿಯಮ್ ಮತ್ತು ರಂಜಕದಿಂದ ತುಂಬಿರುವ ಸೂಪ್ ಸಂಧಿವಾತದ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ಹೊಟ್ಟೆಯ ಬೊಜ್ಜು ಕರಗಿಸಲು ಸಹಾಯ ಮಾಡುವ 7 ತರಕಾರಿ ಜ್ಯೂಸ್​ಗಳಿವು

ಖಿಚಡಿ:

ಬೇಯಿಸಿದ ಅನ್ನ ಮತ್ತು ದಾಲ್ ಮಿಶ್ರಣವು ರೋಗಿಗಳಿಗೆ ಶಿಫಾರಸು ಮಾಡಲಾದ ಅತ್ಯಂತ ಸುಲಭವಾಗಿ ಜೀರ್ಣವಾಗುವ ಆಹಾರಗಳಲ್ಲಿ ಒಂದಾಗಿದೆ. ಖಿಚಡಿಯು ಸಮತೋಲಿತ ಊಟವಾಗಿರುವುದರಿಂದ ಪೌಷ್ಟಿಕಾಂಶದಿಂದ ತುಂಬಿರುತ್ತದೆ. ಇದನ್ನು ಜೀರ್ಣಿಸಿಕೊಳ್ಳಲು ಸುಲಭ. ಹೃದಯಕ್ಕೆ ಉತ್ತಮ, ಅಂಟು ಮುಕ್ತ, ತೂಕ ಇಳಿಸಲು ಸಹಾಯ ಮಾಡುತ್ತದೆ ಮತ್ತು ಮಧುಮೇಹದಿಂದ ಬಳಲುತ್ತಿರುವವರಿಗೆ ಉತ್ತಮ ಆಯ್ಕೆಯಾಗಿದೆ.

ಮೊಸರನ್ನ:

ಮೊಸರನ್ನವು ಪ್ರೋಬಯಾಟಿಕ್‌ಗಳಲ್ಲಿ ಸಮೃದ್ಧವಾಗಿದೆ. ಇದು ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ. ಮೊಸರಿನಲ್ಲಿರುವ ಲ್ಯಾಕ್ಟೋಬಾಸಿಲಸ್ ಬಲ್ಗರಿಕಸ್ ಎಂಬ ಬ್ಯಾಕ್ಟೀರಿಯಾ ಕರುಳಿನ ಮತ್ತು ಹೊಟ್ಟೆಯ ಒಳಪದರದ ಮೇಲೆ ಕಾರ್ಯನಿರ್ವಹಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಲಭಗೊಳಿಸುತ್ತದೆ ಮತ್ತು ನಿಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ.

ಹಣ್ಣುಗಳ ಸಲಾಡ್:

ಹಣ್ಣಿನ ಸಲಾಡ್‌ಗಳು ಅಗತ್ಯವಾದ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿವೆ. ಅದು ನಮ್ಮ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು ಮತ್ತು ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ರಸಂ:

ರಸಂ ತುಂಬಾ ರುಚಿಕರವಾದ ಆಹಾರ. ಇದು ಪೌಷ್ಟಿಕವಾಗಿರುತ್ತದೆ. ಹುಣಸೆಹಣ್ಣು, ಟೊಮ್ಯಾಟೊಗಳು ಮತ್ತು ಪರಿಮಳಯುಕ್ತ ಮಸಾಲೆಗಳ ಮಿಶ್ರಣದಿಂದ ತಯಾರಿಸಿದ ರಸಂ ಶೀತ ಮತ್ತು ಜ್ವರದಿಂದ ಚೇತರಿಸಿಕೊಳ್ಳಲು ಉತ್ತಮವಾಗಿದೆ. ಇದು ತೂಕ ನಿರ್ವಹಣೆಯಲ್ಲಿ ಸಹಾಯ ಮಾಡುತ್ತದೆ, ಉತ್ಕರ್ಷಣ ನಿರೋಧಕಗಳಿಂದ ತುಂಬಿರುತ್ತದೆ, ಕರುಳಿನ ಆರೋಗ್ಯವನ್ನು ಹೆಚ್ಚಿಸುತ್ತದೆ ಮತ್ತು ಕ್ಯಾನ್ಸರ್ ಅನ್ನು ಸಹ ತಡೆಯುತ್ತದೆ.

ಇದನ್ನೂ ಓದಿ: Constipation: ಮಲಬದ್ಧತೆಯಿಂದ ಬಳಲುತ್ತಿದ್ದರೆ ಈ ಜ್ಯೂಸ್​ಗಳನ್ನು ಸೇವಿಸಿ

ಬೇಯಿಸಿದ ಮೀನು:

ಮೀನುಗಳಲ್ಲಿ ಕಡಿಮೆ ಕೊಬ್ಬಿನ ಅಂಶವಿರುವ ಉತ್ತಮ ಗುಣಮಟ್ಟದ ಪ್ರೋಟೀನ್, ಒಮೆಗಾ-3 ಕೊಬ್ಬಿನಾಮ್ಲಗಳು, ವಿಟಮಿನ್ D ಮತ್ತು B2 ತುಂಬಿದೆ. ಮೀನಿನಲ್ಲಿ ಕ್ಯಾಲ್ಸಿಯಂ ಮತ್ತು ಫಾಸ್ಫರಸ್ ಸಮೃದ್ಧವಾಗಿದೆ. ಇದು ಕಬ್ಬಿಣ, ಸತು, ಅಯೋಡಿನ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಂನಂತಹ ಖನಿಜಗಳ ಉತ್ತಮ ಮೂಲವಾಗಿದೆ. ಇದು ತ್ವರಿತ ಚೇತರಿಕೆಗೆ ಉತ್ತಮವಾಗಿದೆ.

ಎಗ್ ಸ್ಯಾಂಡ್​ವಿಚ್:

ಎಗ್ ಸ್ಯಾಂಡ್‌ವಿಚ್‌ನಲ್ಲಿ ವಿಟಮಿನ್ ಎ, ಫೋಲೇಟ್, ವಿಟಮಿನ್ ಬಿ5, ಬಿ12, ಬಿ2, ಫಾಸ್ಫರಸ್, ಸೆಲೆನಿಯಮ್, ವಿಟಮಿನ್ ಡಿ, ಇ, ಕೆ, ಬಿ6, ಕ್ಯಾಲ್ಸಿಯಂ, ಒಮೆಗಾ-3 ಕೊಬ್ಬುಗಳು ಮತ್ತು ಸತುವು ಆರೋಗ್ಯಕರ ಪ್ರಮಾಣದಲ್ಲಿರುತ್ತದೆ. ಮೊಟ್ಟೆಗಳನ್ನು ಉತ್ತಮ ಗುಣಮಟ್ಟದ ಪ್ರೋಟೀನ್‌ನ ಮೂಲವೆಂದು ಪರಿಗಣಿಸಲಾಗುತ್ತದೆ, ಇದು ಅನಾರೋಗ್ಯದಿಂದ ಚೇತರಿಸಿಕೊಳ್ಳಲು ತುಂಬಾ ಒಳ್ಳೆಯದು.

ತಾಜಾ ಜ್ಯೂಸ್:

ತಾಜಾ ಜ್ಯೂಸ್​ ಆರೋಗ್ಯಕರವಾದ ಆಹಾರಗಳಲ್ಲಿ ಒಂದಾಗಿದೆ. ಏಕೆಂದರೆ ಅವುಗಳು ಪೌಷ್ಟಿಕಾಂಶ ಮತ್ತು ಆರೋಗ್ಯ ಪ್ರಯೋಜನಗಳಿಂದ ತುಂಬಿರುತ್ತವೆ. ಹಣ್ಣುಗಳು ಮತ್ತು ತರಕಾರಿಗಳ ಜ್ಯೂಸ್​ ಹೃದಯರಕ್ತನಾಳದ ಕಾಯಿಲೆ, ಟೈಪ್ 2 ಡಯಾಬಿಟಿಸ್ ಮತ್ತು ಕ್ಯಾನ್ಸರ್ ಸೇರಿದಂತೆ ಅನೇಕ ಸಮಸ್ಯೆಗಳನ್ನು ತಡೆಗಟ್ಟಲು ಮತ್ತು ಚೇತರಿಸಿಕೊಳ್ಳಲು ಸಹಾಯ ಮಾಡುತ್ತದೆ. ಏಕೆಂದರೆ ಅವುಗಳು ಜೀವಸತ್ವಗಳು, ಕಬ್ಬಿಣ, ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ಗಳಿಂದ ತುಂಬಿರುತ್ತವೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್