AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು

ಗಂಟಲು ನೋವು ನಿವಾರಣೆ ಆಗಲು ಮನೆಮದ್ದುಗಳು ಯಾವುವು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ಕೆಲವು ಪರಿಹಾರ ಮಾರ್ಗಗಳು. ಈ ಮನೆ ಮದ್ದುಗಳನ್ನು ಮಾಡಿ ಕುಡಿಯುವುದರಿಂದ ಬಹುಬೇಗ ಗಂಟಲು ನೋವು ನಿವಾರಣ ಮಾಡಿಕೊಳ್ಳಬಹುದು.

Health Tips: ಗಂಟಲು ನೋವೇ? ಇಲ್ಲಿದೆ ಮನೆಮದ್ದು
TV9 Web
| Edited By: |

Updated on: Nov 05, 2021 | 9:31 AM

Share

ಹಬ್ಬದ ಸಮಯದಲ್ಲಿ ಸಿಹಿ ತಿಂಡಿಗಳು, ನಾನಾ ಬಗೆಯ ಭಕ್ಷ್ಯಗಳನ್ನು ಸೇವಿಸಿ ಗಂಟಲು ನೋವು ಸಮಸ್ಯೆ ಕಾಡಬಹುದು. ಹೀಗಿರುವಾಗ ಮನೆ ಮದ್ದುಗಳನ್ನು ಬಳಸಿ ಗಂಟಲು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಗಂಟಲು ನೋವು ನಿವಾರಣೆ ಆಗಲು ಮನೆಮದ್ದುಗಳು ಯಾವುವು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ಕೆಲವು ಪರಿಹಾರ ಮಾರ್ಗಗಳು. ಈ ಮನೆ ಮದ್ದುಗಳನ್ನು ಮಾಡಿ ಕುಡಿಯುವುದರಿಂದ ಬಹುಬೇಗ ಗಂಟಲು ನೋವು ನಿವಾರಣ ಮಾಡಿಕೊಳ್ಳಬಹುದು.

ಅರಿಶಿಣವು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನಿಮಗೆ ಗಂಟಲು ನೋವು ಇದ್ದರೆ ಒಂದು ಕಪ್ ಬೆಚ್ಚಗಿನ ನೀರಿನಲ್ಲಿ ಅರ್ಧ ಚಮಚ ಅರಿಶಿಣ ಮತ್ತು ರುಚಿಗೆ ಚಿಟಿಕೆ ಉಪ್ಪನ್ನು ಮಿಶ್ರಣ ಮಾಡಿ ಸೇವಿಸಿ. ಇಲ್ಲವೇ, ಉಗುರು ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ನಿಂಬೆ ರಸವನ್ನು ಮಿಶ್ರಣ ಮಾಡಿ ಕುಡಿಯುವ ಮೂಲಕ ಗಂಟಲು ನೀವು ನಿವಾರಣೆ ಮಾಡಿಕೊಳ್ಳಬಹುದಾಗಿದೆ.

ಗಂಟಲು ನೋವು ನಿವಾರಣೆಗೆ ಉಗುರು ಬೆಚ್ಚಗಿನ ನೀರಿನಲ್ಲಿ ಜೇನುತುಪ್ಪ ಮತ್ತು ಸ್ವಲ್ಪ ನಿಂಬೆ ರಸವನ್ನು ಮಿಶ್ರಣ ಮಾಡಿ. ಜೇನುತುಪ್ಪವು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿರುತ್ತದೆ. ಇದು ಗಂಟಲು ನೋವಿನಿಂದ ಪರಿಹಾರ ನೀಡುತ್ತದೆ. ಒಣ ಕೆಮ್ಮು ಮತ್ತು ನೋಯುತ್ತಿರುವ ಗಂಟಲು ಚಿಕಿತ್ಸೆಗಾಗಿ ಉಪ್ಪು ಮತ್ತು ಬೆಚ್ಚಗಿನ ನೀರಿನ್ನು ಕುಡಿಯಿರಿ. ಬಿಸಿ ಬಿಸಿ ನೀರಿಗೆ ಚಿಟಿಕೆ ಉಪ್ಪು ಸೇರಿಸಿ ಕುಡಿಯಿರಿ. ರುಚಿಗಾಗಿ ನಿಂಬೆ ರಸ ಕೂಡಾ ಸೇರಿಸಿಕೊಳ್ಳಬಹುದು. ಇದು ನಿಮ್ಮ ಗಂಟಲು ನೋವನ್ನು ಕಡಿಮೆ ಸಮಯದಲ್ಲಿ ಪರಿಹರಿಸುತ್ತದೆ.

ಹಸಿ ಬೆಳ್ಳುಳ್ಳಿ ನಂಜುನಿರೋಧಕ ಗುಣಗಳನ್ನು ಹೊಂದಿದೆ. ಇದು ಗಂಟಲು ನೋವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಹಸಿ ಬೆಳ್ಳುಳ್ಳಿಯನ್ನು ಜಜ್ಜಿ ಸೇವಿಸುವ ಮೂಲಕ ಗಂಟು ನೋವು ಬಹುಬೇಗ ಕಡಿಮೆ ಆಗುತ್ತದೆ. ಇಲ್ಲವೇ ಬೆಳ್ಳುಳ್ಳಿಯಿಂದ ತಯಾರಾದ ಪದಾರ್ಥಗಳನ್ನು ಸೇವಿಸುವ ಮೂಲಕ ಗಂಟಲು ನೋವನ್ನು ಗುಣಪಡಿಸಿಕೊಳ್ಳಬಹುದು.

ಇದನ್ನೂ ಓದಿ:

Covid Symptoms: ಕೊರೊನಾ ದೇಹವನ್ನು ಪ್ರವೇಶಿಸಿದ ಸರಾಸರಿ 5 ದಿನಗಳ ನಂತರ ಕಂಡುಬರುವ ಈ ಬದಲಾವಣೆಗಳನ್ನು ಕಡೆಗಣಿಸಲೇಬೇಡಿ

Mint Benefits: ಮನಸ್ಥಿತಿ ಸುಧಾರಣೆ ಜತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುವ ಪುದೀನಾ ಸೇವನೆಯ ಬಗ್ಗೆ ತಿಳಿಯಿರಿ

Follow Us
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಎಸ್. ಜಾನಕಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ಅಭಿಮಾನಿಗಳು
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ
ಜುಲೈ 13 ರಿಂದ 19 ರವರೆಗಿನ ದ್ವಾದಶ ರಾಶಿಗಳ ವಾರ ಭವಿಷ್ಯ ಇಲ್ಲಿದೆ