AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮಹಿಳೆಯರ ಆರೋಗ್ಯ ಕೆಡಲು ಈ ಕೆಲವು ಅಂಶಗಳು ಕಾರಣ

ಮಹಿಳೆಯರ ಆರೋಗ್ಯ ಯಾವ ಕೆಲವು ಅಂಶಗಳಿಂದ ಕೆಡುತ್ತಿದೆ ಎಂಬುದಕ್ಕೆ ಇಲ್ಲಿವೆ ಕೆಲವು ಕಾರಣಗಳು. ಇವುಗಳನ್ನು ಹೆಚ್ಚು ಗಮನದಲ್ಲಿಟ್ಟುಕೊಳ್ಳುವ ಮೂಲಕ ಮಹಿಳೆಯರು ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

Women Health: ಮಹಿಳೆಯರ ಆರೋಗ್ಯ ಕೆಡಲು ಈ ಕೆಲವು ಅಂಶಗಳು ಕಾರಣ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 31, 2021 | 9:52 PM

Share

ಮಹಿಳೆಯರು ಅತ್ಯಂತ ಸೂಕ್ಷ್ಮ ಮನಸ್ಸುಳ್ಳವರು. ಆಧುನಿಕ ಜೀವನಶೈಲಿಯಲ್ಲಿ ಬೆಳಗ್ಗಿನಿಂದ ಸಂಜೆಯವರೆಗಿನ ಒತ್ತಡದ ಕೆಲಸ, ಚಿಂತೆ ಅವರ ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕೆಡಿಸುತ್ತಿದೆ. ಹೀಗಿರುವಾಗ ಮಹಿಳೆಯರು ಹೆಚ್ಚು ಆರೋಗ್ಯದ ಕುರಿತಾಗಿ ಗಮನವಹಿಸಲೇಬೇಕು. ಮಹಿಳೆಯರ ಆರೋಗ್ಯ ಯಾವ ಕೆಲವು ಅಂಶಗಳಿಂದ ಕೆಡುತ್ತಿದೆ ಎಂಬುದಕ್ಕೆ ಇಲ್ಲಿವೆ ಕೆಲವು ಕಾರಣಗಳು. ಇವುಗಳನ್ನು ಹೆಚ್ಚು ಗಮನದಲ್ಲಿಟ್ಟುಕೊಳ್ಳುವ ಮೂಲಕ ಮಹಿಳೆಯರು ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಕೋಪ ಬೆಳಗ್ಗಿನಿಂದ ಸಂಜೆಯವರೆಗಿನ ಒತ್ತಡದ ಕೆಲಸ ಮಹಿಳೆಯರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಜತೆಗೆ ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಅವರ ಆರೋಗ್ಯವನ್ನು ಕೆಡಿಸುತ್ತಿದೆ. ಹೀಗಿರುವಾಗ ಹೆಚ್ಚು ಚಿಂತೆ ಮಾಡುವುದು, ಜತೆಗೆ ಸಿಟ್ಟಿಗೇಳುವುದನ್ನು ಕಡಿಮೆ ಮಾಡಿಕೊಳ್ಳುವುದು ಉತ್ತಮ. ಒತ್ತಡವಿದ್ದಾಗ ಸಿಟ್ಟು ಬರುವುದು ಮಾಮೂಲಿ. ಆದರೆ ಅದನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಪ್ರಯತ್ನಿಸಿ. ಇದರಿಂದ ನಿಮ್ಮ ಆರೋಗ್ಯ ಸುಧಾರಿಸುತ್ತದೆ.

ಒತ್ತಡದ ಕೆಲಸ ಬೆಳಲಗ್ಗೆ ಎದ್ದಾಗಿನಿಂದ ಮಹಿಳೆಯರು ಗಡಿಬಿಡಿಯಲ್ಲಿಯೇ ಕೆಲಸ ಮಾಡಬೇಕು. ಮಕ್ಕಳಿಂದ ಹಿಡಿದು ಮನೆಯಲ್ಲಿರುವ ವಯಸ್ಕರ ಜವಾಬ್ದಾರಿ ಅವಳದ್ದು. ಮನೆಗೆಲಸದ ಜತೆಗೆ ಮನೆಯವರ ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿವಹಿಸಿ ತಾಳ್ಮೆಯಿಂದ ದಿನವಿಡೀ ದುಡಿಯುತ್ತಾಳೆ. ಹಾಗಿರುವಾಗ ಕೆಲಸದ ಒತ್ತಡ ಅವಳ ಮಾನಸಿಕ ಆರೋಗ್ಯವನ್ನು ಹಾನಿಗೊಳಿಸುತ್ತದೆ. ಇದರ ಕುರಿತಾಗಿ ಮಹಿಳೆ ಯೋಚಿಸಬೇಕು. ಜತೆಗೆ ಪ್ರತಿನಿತ್ಯ ವ್ಯಾಯಾಮ, ಧ್ಯಾನದ ಅಭ್ಯಾಸ ಮಾಡುವ ಮೂಲಕ ಮಾನಸಿಕ ಒತ್ತಡದಿಂದ ಹೊರ ಬರಬಹುದಾಗಿದೆ.

ವ್ಯಾಯಾಮದ ಕೊರತೆ ಮಹಿಳೆಯರು ವ್ಯಾಯಾಮದಲ್ಲಿ ತೊಡಗಿಕೊಳ್ಳುವುದು ಅತ್ಯವಶ್ಯಕ. ಮಾನಸಿಕ ಅಥವಾ ದೈಹಿಕ ಒತ್ತಡದಿಂದ ಹೊರಬರಲು ಮಹಿಳೆಯರಿಗೆ ವ್ಯಾಯಾಮ ಮುಖ್ಯ. ಇದು ಆರೋಗ್ಯವನ್ನು ಸುಧಾರಿಸುವುದರ ಜತೆಗೆ ದಿನಪೂರ್ತಿ ಚಟುವಟಿಕೆಯಿಂದ ಇರುವಂತೆ ಮಾಡುತ್ತದೆ. ಸಣ್ಣ ಪುಟ್ಟ ದೈಹಿಕ ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳುತ್ತದೆ.

ಇದನ್ನೂ ಓದಿ:

Women Health: ಗರ್ಭಿಣಿಯರಿಗೆ ಜಂಕ್ ಫುಡ್ ಸೇವನೆ ಆರೋಗ್ಯಕ್ಕೆ ಹಿತವಲ್ಲ; ಏಕೆ ಗೊತ್ತಾ?

Women Health: ಒತ್ತಡ ಮತ್ತು ಆತಂಕದಿಂದ ದೂರವಾಗಲು ಮಹಿಳೆಯರಿಗೆ ಸಲಹೆಗಳು

ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?