AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Women Health: ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ಹೊಟ್ಟೆ ನೋವಿನ ಪರಿಹಾರಕ್ಕೆ ಹೀಗೆ ಮಾಡಿ

ಹೊಟ್ಟೆ ಹಿಡಿದಂತಾಗುವುದು, ಸ್ನಾಯು ಸೆಳೆತ, ಅಶಕ್ತತೆ ಜತೆಗೆ ತಲೆ ತಿರುಗುವುದು, ವಾಂತಿ ಬಂದಂತಾಗುವುದು ಇವೆಲ್ಲವೂ ಮುಟ್ಟಿನ ಸಮಯದಲ್ಲಿ ಕಂಡು ಬರುವ ಸಮಸ್ಯೆಗಳು. ಇದಕ್ಕೆ ಪರಿಹಾರವೇನು? ಎಂಬುದನ್ನು ತಿಳಿಯೋಣ.

Women Health: ಮುಟ್ಟಿನ ಸಮಯದಲ್ಲಿ ಕಾಣಿಸಿಕೊಳ್ಳುವ ಹೊಟ್ಟೆ ನೋವಿನ ಪರಿಹಾರಕ್ಕೆ ಹೀಗೆ ಮಾಡಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 03, 2021 | 8:30 PM

Share

ಮಹಿಳೆಯರಲ್ಲಿ ಪ್ರತಿ ತಿಂಗಳು ಕಾಣಿಸಿಕೊಳ್ಳುವ ಮುಟ್ಟಿನ ಸಮಯದಲ್ಲಿ ಹೊಟ್ಟೆ ನೋವಿನ ಸಮಸ್ಯೆ ಕೆಲವರಿಗೆ ಕಾಡುತ್ತದೆ. ಮಹಿಳೆಯರು ಹೊಟ್ಟೆ ನೋವಿನ ಸಮಸ್ಯೆ ಹೋಗಲಾಡಿಸಲು ಅದೆಷ್ಟೋ ಔಷಧಿಗಳನ್ನು ಹುಡುಕುತ್ತಿರುತ್ತಾರೆ. ಕೆಲವರಿಗೆ ಒಂದೇ ಸಮನೆ ಹೊಟ್ಟೆ ಸೆಳೆಯುವಂತಾಗುತ್ತದೆ, ಇನ್ನು ಕೆಲವರು ಕಿಬ್ಬೊಟ್ಟೆ ನೋವು ಎನ್ನುವವರೂ ಇದ್ದಾರೆ. ಹೊಟ್ಟೆ ಹಿಡಿದಂತಾಗುವುದು, ಸ್ನಾಯು ಸೆಳೆತ, ಅಶಕ್ತತೆ ಜತೆಗೆ ತಲೆ ತಿರುಗುವುದು, ವಾಂತಿ ಬಂದಂತಾಗುವುದು ಇವೆಲ್ಲವೂ ಮುಟ್ಟಿನ ಸಮಯದಲ್ಲಿ ಕಂಡು ಬರುವ ಸಮಸ್ಯೆಗಳು. ಇದಕ್ಕೆ ಪರಿಹಾರವೇನು? ಎಂಬುದನ್ನು ತಿಳಿಯೋಣ.

ಮುಟ್ಟಿನ ಸಮಯದಲ್ಲಿ ಅಶಕ್ತತೆ ಕಾಣಿಸಿಕೊಳ್ಳುವುದು ಸಾಮಾನ್ಯ. ಹಾಗಾಗಿಯೇ ಆ ಸಮಯದಲ್ಲಿ ಮಹಿಳೆಯರಿಗೆ ವಿಶ್ರಾಂತಿಯ ಅಗತ್ಯತೆ ಇದೆ. ಅತಿ ಭಾರದ ವಸ್ತುಗಳನ್ನು ಎತ್ತುವುದು ಜತೆಗೆ ಹೆಚ್ಚಿಗೆ ಒತ್ತಡ ಉಂಟಾಗುವ ಕೆಲಸವನ್ನು ಮಾಡಬಾರದು ಎಂದು ತಜ್ಞರು ಸಲಹೆ ನೀಡುತ್ತಾರೆ. ಅತ್ಯಂತ ಸೂಕ್ಷ್ಮವಾದ ಆರೋಗ್ಯವನ್ನು ಹೆಚ್ಚು ಕಾಳಜಿಯಿಂದ ನೋಡಿಕೊಳ್ಳುವುದರ ಜತೆಗೆ ಯಾವುದೇ ಸಮಸ್ಯೆಯನ್ನು ನಿರ್ಲಕ್ಷ್ಯ ಮಾಡದಿರುವುದು ಒಳ್ಳೆಯದು.

ಶುಂಠಿ ಸೇವಿಸಿ ಶುಂಠಿ ನೀರು ಹೊಟ್ಟೆ ನೋವಿನ ಸಮಸ್ಯೆಗೆ ರಾಮಬಾಣ. ಶುಂಠಿಯನ್ನು ನೀರಿಗೆ ಸೇರಿಸಿ ಚೆನ್ನಾಗಿ ಕುದಿಸಿ. ಆ ನೀರನ್ನು ಪ್ರತಿನಿತ್ಯ ಎರಡು ಲೋಟ ಸೇವಿಸುವ ಮೂಲಕ ಹೊಟ್ಟೆ ನೋವಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಶುಂಠಿ ಕೇವಲ ಹೊಟ್ಟೆ ನೋವಿನ ಸಮಸ್ಯೆಗೆ ಮಾತ್ರವಲ್ಲದೆ ತಲೆನೋವು, ಗ್ಯಾಸ್ಟ್ರಿಕ್, ಜೀರ್ಣಕ್ರಿಯೆ ಸಮಸ್ಯೆಗೂ ಸಹ ಪರಿಹಾರವಾಗಿ ಕಾರ್ಯನಿರ್ವಹಿಸುತ್ತದೆ.

ಜೀರಿಗೆ ನೀರು ಜೀರಿಗೆ ಸೇವನೆಯೂ ಸಹ ಹೊಟ್ಟೆ ನೋವಿನ ಸಮಸ್ಯೆಗೆ ಉತ್ತಮ ಪರಿಹಾರ. ಎರಡು ಕಪ್ ನೀರಿಗೆ ಒಂದು ಚಮಚ ಜೀರಿಗೆ ಬೆರೆಸಿ ಚೆನ್ನಾಗಿ ಕುದಿಸಿ. ಆ ನೀರನ್ನು ಹಸಿದ ಹೊಟ್ಟೆಯಲ್ಲಿ ಸೇವಿಸುವ ಅಭ್ಯಾಸ ಒಳ್ಳೆಯದು. ಬೆಳಿಗ್ಗೆ ಎದ್ದ ತಕ್ಷಣ ಮತ್ತು ಸಂಜೆಯ ವೇಳೆ ಒಂದೊಂದು ಕಪ್ ಜೀರಿಗೆ ನೀರನ್ನು ಸೇವಿಸಿ.

ತುಳಸಿ ಎಲೆ ಮಸಾಲೆಯೊಂದಿಗೆ ತುಳಸಿ ಎಲೆಯ ಚಹಾ ತಯಾರಿಸಿ ಸವಿಯುವ ಮೂಲಕ ಹೊಟ್ಟೆ ನೋವಿನ ಸಮಸ್ಯೆ ಪರಿಹಾರ ಕಂಡುಕೊಳ್ಳಬಹುದು. ತುಳಸಿಯಲ್ಲಿ ನೋವು ನಿವಾರಕ ಶಕ್ತಿಯಾದ ಕೆಫಿನ್ ಆಮ್ಲವಿರುವುದರಿಂದ ಇದು ಹೊಟ್ಟೆ ನೋವಿನ ಸಮಸ್ಯೆಗೆ ಪರಿಹಾರ ನೀಡುತ್ತದೆ.

ಇದನ್ನೂ ಓದಿ:

Women Health: ಗರ್ಭಿಣಿಯರಿಗೆ ಜಂಕ್ ಫುಡ್ ಸೇವನೆ ಆರೋಗ್ಯಕ್ಕೆ ಹಿತವಲ್ಲ; ಏಕೆ ಗೊತ್ತಾ?

Women Health: ಒತ್ತಡ ಮತ್ತು ಆತಂಕದಿಂದ ದೂರವಾಗಲು ಮಹಿಳೆಯರಿಗೆ ಸಲಹೆಗಳು

(These remedies for periods stomach pain check in kannada)

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್