AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು

ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು
Species
TV9 Web
| Edited By: |

Updated on: Dec 02, 2021 | 9:32 AM

Share

ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಆರೋಗ್ಯದ ಕುರಿತಾಗಿ ಎಷ್ಟು ಕಾಳಜಿ ಮಾಡಿದರೂ ಸಾಲದು. ಆರೋಗ್ಯ ಸುಧಾರಣೆಗೆ ನಾವು ಸೇವಿಸುವ ಆಹಾರದ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ತಿಳಿಯಬೇಕು. ಪೌಷ್ಟಿಕ ಆಹಾರ ವ್ಯವಸ್ಥೆ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ. ಹೀಗಿರುವಾಗ ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಲವರು ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ? ಎಂಬ ಮಾಹಿತಿಯನ್ನು ತಿಳಿಯೋಣ. ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

ಯಾವುದೇ ಆಗಲಿ ಅತಿಯಾಗಿ ಸೇವಿಸಿದರೆ ಆರೋಗ್ಯವನ್ನು ಹಾಳು ಮಾಡುತ್ತವೆ. ನಿಯಮಿತವಾದ ಆಹಾರ ವ್ಯವಸ್ಥೆ ಜೊತೆಗೆ ನಿಯಮಿತವಾದ ವ್ಯಾಯಾಮ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕ. ನೀವು ಪ್ರತಿನಿತ್ಯ ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಅರಿಶಿಣ ಭಾರತೀಯರ ಅಡುಗೆಯಲ್ಲಿ ಸಾಮಾನ್ಯವಾಗಿ ಹೆಚ್ಚು ಬಳಸುವ ಪದಾರ್ಥವಿದು. ಇದರಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತ ಮತ್ತು ನಂಜುನಿರೋಧಕ ಗುಣಲಕ್ಷಣಗಳು ಕಂಡು ಬರುತ್ತವೆ. ಅರಿಶಿಣವು ಚಯಾಪಚಯವನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯ ಸುಧಾರಣೆಗೆ ಅರಿಶಿಣ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ.

ಜೀರಿಗೆ ಜೀರಿಗೆಯು ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯ ಜೀರ್ಣಕ್ರಿಯೆ ಮತ್ತು ಕಾರ್ಯನಿರ್ವಹಣೆಯನ್ನು ಹೆಚ್ಚಿಸುತ್ತದೆ. ಮಲಬದ್ಧತೆ, ಹೊಟ್ಟೆ ನೀವು, ವಾಂತಿ ಬರುವಂತಾಗುವುದು ಈ ರೀತಿಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವ ಸಾಮರ್ಥ್ಯ ಜೀರಿಗೆಯಲ್ಲಿದೆ.

ಕೆಂಪು ಮೆಣಸಿನ ಪುಡಿ ಆಹಾರದಲ್ಲಿ ಖಾರ ರುಚಿ ಹೆಚ್ಚಿಸುತ್ತದೆ. ಹೆಚ್ಚಾಗಿ ಭಾರತೀಯರು ಖಾರದ ಅಡುಗೆಗೆ ಕೆಂಪು ಮೆಣಸಿನ ಪುಡಿಯನ್ನು ಬಳಸುತ್ತಾರೆ. ರುಚಿಯ ಜೊತೆಗೆ ಬಣ್ಣವನ್ನು ನೀಡುವುದರೊಂದಿಗೆ ಜೀರ್ಣಕ್ರಿಯೆ ಸುಧಾರಣೆಗೆ ಇದು ಸಹಾಯಕವಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕರಿ ಮೆಣಸು ಕರಿ ಮೆಣಸು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಜೊತೆಗೆ ಖಾರದ ರುಚಿಯನ್ನು ನೀಡುವುದರಿಂದ ಸ್ಪೈಸಿ ತಿನಿಸುಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಇದರಲ್ಲಿರುವ ಪೆಪರಿನ್ ಉತ್ಕರ್ಷಣ ನಿರೋಧಕ ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ನಿಯಮಿತವಾಗಿ ಕೆಂಪು ಮೆಣಸಿನ ಪುಡಿಯನ್ನು ಬಳಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Weight Loss: ಚಳಿಗಾಲದಲ್ಲಿ ಆರೋಗ್ಯಕರ ತೂಕ ನಷ್ಟಕ್ಕೆ ಸೇವಿಸಬಹುದಾದ ಆಹಾರ ಪದಾರ್ಥಗಳಿವು

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ