Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು

ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

Health Tips: ನಿಮ್ಮ ಆರೋಗ್ಯ ಸುಧಾರಣೆಯಲ್ಲಿ ಈ ಕೆಲವು ಮಸಾಲೆ ಪದಾರ್ಥಗಳ ಪಾತ್ರ ಮಹತ್ವದ್ದು
Species
Follow us
| Updated By: shivaprasad.hs

Updated on: Dec 02, 2021 | 9:32 AM

ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಆರೋಗ್ಯದ ಕುರಿತಾಗಿ ಎಷ್ಟು ಕಾಳಜಿ ಮಾಡಿದರೂ ಸಾಲದು. ಆರೋಗ್ಯ ಸುಧಾರಣೆಗೆ ನಾವು ಸೇವಿಸುವ ಆಹಾರದ ಬಗ್ಗೆ ಕೆಲವೊಂದಿಷ್ಟು ಮಾಹಿತಿಯನ್ನು ತಿಳಿಯಬೇಕು. ಪೌಷ್ಟಿಕ ಆಹಾರ ವ್ಯವಸ್ಥೆ ಮತ್ತು ಜೀವನ ಶೈಲಿಯಲ್ಲಿನ ಕೆಲವು ಬದಲಾವಣೆಗಳು ಆರೋಗ್ಯ ಸುಧಾರಣೆಗೆ ಸಹಾಯ ಮಾಡುತ್ತದೆ. ಹೀಗಿರುವಾಗ ಅಡುಗೆಯಲ್ಲಿ ಸಾಮಾನ್ಯವಾಗಿ ಬಳಸುವ ಕೆಲವರು ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಪ್ರಯೋಜನಗಳೆಷ್ಟಿವೆ? ಎಂಬ ಮಾಹಿತಿಯನ್ನು ತಿಳಿಯೋಣ. ಮಸಾಲೆ ಪದಾರ್ಥಗಳನ್ನು ಬಳಸಿ ರುಚಿ ರುಚಿಯಾದ ಅಡುಗೆ ಸವಿಯುತ್ತೇವೆ. ಹಾಗಿರುವಾಗ ನಾವು ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳು ಆರೋಗ್ಯಕ್ಕೆ ಉತ್ತಮವೇ? ಆರೋಗ್ಯ ಸುಧಾರಿಸಿಕೊಳ್ಳಲು ನಾವು ಯಾವ ಮಸಾಲಾ ಪದಾರ್ಥಗಳನ್ನು ಸೇವಿಸಬೇಕು?

ಯಾವುದೇ ಆಗಲಿ ಅತಿಯಾಗಿ ಸೇವಿಸಿದರೆ ಆರೋಗ್ಯವನ್ನು ಹಾಳು ಮಾಡುತ್ತವೆ. ನಿಯಮಿತವಾದ ಆಹಾರ ವ್ಯವಸ್ಥೆ ಜೊತೆಗೆ ನಿಯಮಿತವಾದ ವ್ಯಾಯಾಮ ನಿಮ್ಮ ಆರೋಗ್ಯ ಸುಧಾರಣೆಗೆ ಸಹಾಯಕ. ನೀವು ಪ್ರತಿನಿತ್ಯ ಅಡುಗೆಯಲ್ಲಿ ಬಳಸುವ ಮಸಾಲೆ ಪದಾರ್ಥಗಳಿಂದ ಆರೋಗ್ಯಕ್ಕೆ ಎಷ್ಟೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ತಿಳಿದುಕೊಳ್ಳಿ.

ಅರಿಶಿಣ ಭಾರತೀಯರ ಅಡುಗೆಯಲ್ಲಿ ಸಾಮಾನ್ಯವಾಗಿ ಹೆಚ್ಚು ಬಳಸುವ ಪದಾರ್ಥವಿದು. ಇದರಲ್ಲಿ ಉತ್ಕರ್ಷಣ ನಿರೋಧಕ, ಉರಿಯೂತ ಮತ್ತು ನಂಜುನಿರೋಧಕ ಗುಣಲಕ್ಷಣಗಳು ಕಂಡು ಬರುತ್ತವೆ. ಅರಿಶಿಣವು ಚಯಾಪಚಯವನ್ನು ಹೆಚ್ಚಿಸುತ್ತದೆ. ಹೃದಯದ ಆರೋಗ್ಯ ಸುಧಾರಣೆಗೆ ಅರಿಶಿಣ ಬಹುಮುಖ್ಯ ಪಾತ್ರವನ್ನು ವಹಿಸುತ್ತವೆ.

ಜೀರಿಗೆ ಜೀರಿಗೆಯು ಯಕೃತ್ತು ಮತ್ತು ಮೇದೋಜ್ಜೀರಕ ಗ್ರಂಥಿಯ ಜೀರ್ಣಕ್ರಿಯೆ ಮತ್ತು ಕಾರ್ಯನಿರ್ವಹಣೆಯನ್ನು ಹೆಚ್ಚಿಸುತ್ತದೆ. ಮಲಬದ್ಧತೆ, ಹೊಟ್ಟೆ ನೀವು, ವಾಂತಿ ಬರುವಂತಾಗುವುದು ಈ ರೀತಿಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ನೀಡುವ ಸಾಮರ್ಥ್ಯ ಜೀರಿಗೆಯಲ್ಲಿದೆ.

ಕೆಂಪು ಮೆಣಸಿನ ಪುಡಿ ಆಹಾರದಲ್ಲಿ ಖಾರ ರುಚಿ ಹೆಚ್ಚಿಸುತ್ತದೆ. ಹೆಚ್ಚಾಗಿ ಭಾರತೀಯರು ಖಾರದ ಅಡುಗೆಗೆ ಕೆಂಪು ಮೆಣಸಿನ ಪುಡಿಯನ್ನು ಬಳಸುತ್ತಾರೆ. ರುಚಿಯ ಜೊತೆಗೆ ಬಣ್ಣವನ್ನು ನೀಡುವುದರೊಂದಿಗೆ ಜೀರ್ಣಕ್ರಿಯೆ ಸುಧಾರಣೆಗೆ ಇದು ಸಹಾಯಕವಾಗಿದೆ. ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಕರಿ ಮೆಣಸು ಕರಿ ಮೆಣಸು ಅಡುಗೆಯ ರುಚಿ ಹೆಚ್ಚಿಸಲು ಬಳಸಲಾಗುತ್ತದೆ. ಜೊತೆಗೆ ಖಾರದ ರುಚಿಯನ್ನು ನೀಡುವುದರಿಂದ ಸ್ಪೈಸಿ ತಿನಿಸುಗಳಲ್ಲಿ ಹೆಚ್ಚು ಬಳಸಲಾಗುತ್ತದೆ. ಇದರಲ್ಲಿರುವ ಪೆಪರಿನ್ ಉತ್ಕರ್ಷಣ ನಿರೋಧಕ ಸ್ವತಂತ್ರ ರಾಡಿಕಲ್​ಗಳಿಂದ ಉಂಟಾಗುವ ಹಾನಿಯನ್ನು ತಡೆಗಟ್ಟುವಲ್ಲಿ ಸಹಾಯಕವಾಗಿದೆ. ನಿಯಮಿತವಾಗಿ ಕೆಂಪು ಮೆಣಸಿನ ಪುಡಿಯನ್ನು ಬಳಸುವ ಮೂಲಕ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ:

Weight Loss: ಚಳಿಗಾಲದಲ್ಲಿ ಆರೋಗ್ಯಕರ ತೂಕ ನಷ್ಟಕ್ಕೆ ಸೇವಿಸಬಹುದಾದ ಆಹಾರ ಪದಾರ್ಥಗಳಿವು

Health Tips: ನಿದ್ರೆಯಿಂದ ಖಿನ್ನತೆ ಹೆಚ್ಚಾಗುತ್ತಾ?; ನಿದ್ರೆಗೂ ಮಾನಸಿಕ ಆರೋಗ್ಯಕ್ಕೂ ಇರುವ ನಂಟೇನು?

PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ