AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು

ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು. ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು
Food
TV9 Web
| Edited By: |

Updated on: Sep 20, 2022 | 2:05 PM

Share

ದೇಹವನ್ನು ಸುವ್ಯವಸ್ಥೆಯಲ್ಲಿಡಲು ಆಹಾರವು ಬಹಳ ಮುಖ್ಯವಾದಂಥದ್ದು, ಯಾವ ರೀತಿಯ ಆಹಾರ ಸೇವಿಸುತ್ತೇವೆ, ಹೇಗೆ ಸೇವಿಸುತ್ತೇವೆ ಎಂಬುದರ ಮೇಲೆ ನಿಮ್ಮ ಆರೋಗ್ಯ ನಿರ್ಧಾರವಾಗುತ್ತೆ. ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು.

ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಊಟ ಮಾಡಿದ ತಕ್ಷಣ ಮೊಬೈಲ್ ಹಿಡಿದು ಹಾಸಿಗೆ ಮೇಲೆ ಮಲಗಬೇಡಿ ಕೆಲವರು ಊಟ ಆಗುವುದೇ ಕಾಯುತ್ತಿರುತ್ತಾರೆ, ಊಟವಾದ ತಕ್ಷಣವೇ ಮೊಬೈಲ್ ಹಿಡಿದು, ಗೇಮ್ ಆಡುತ್ತಲೋ ಅಥವಾ ಇನ್ನೇನೋ ನೋಡುತ್ತಲೋ ಹೋಗಿ ಹಾಸಿಗೆ ಮೇಲೆ ಮಲಗಿಬಿಡುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಫಾಸ್ಟ್​ ಆಗಿ ವಾಕ್​ ಮಾಡಬೇಡಿ ಊಟ ಮಾಡಿದ ಬಳಿಕ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಉತ್ತಮ, ಆದರೆ ತುಂಬಾ ವೇಗವಾಗಿ ನಡೆಯಬೇಡಿ, ಇದರಿಂದ ಹೊಟ್ಟೆನೋವು ಸೇರಿದಂತೆ ಅನೇಕ ಸಮಸ್ಯೆಗಳು ಕಂಡುಬರುತ್ತವೆ. ಊಟದ ಬಳಿಕ ಕೇವಲ 100 ಹೆಜ್ಜೆ ವಾಕ್ ಮಾಡಬಹುದು.

ಚಹಾ ಕುಡಿಯುವುದನ್ನು ತಪ್ಪಿಸಿ ಬಹಳಷ್ಟು ಮಂದಿ ಊಟ ಮಾಡಿದ ತಕ್ಷಣ ಚಹಾ ಅಥವಾ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ನಮ್ಮ ಈ ಅಭ್ಯಾಸವನ್ನು ಆದಷ್ಟು ಬೇಗ ಬದಲಾಯಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಆಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಕೂಡ ಉಂಟಾಗುತ್ತವೆ. ಊಟ ಮಾಡಿದ 2 ಗಂಟೆಗಳ ನಂತರ ಮಾತ್ರ ಚಹಾ ಅಥವಾ ಕಾಫಿ ಕುಡಿಯಿರಿ.

-ಊಟ ಮಾಡಿದ ತಕ್ಷಣ ಸ್ನಾನ ಮಾಡಬೇಡಿ -ಊಟ ಮಾಡಿದ ನಂತರ ಸ್ನಾನ ಮಾಡುವವರು ಬಹಳ ಮಂದಿ ಇದ್ದಾರೆ. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ನೀವು ಆಹಾರ ಸೇವಿಸಿದ ನಂತರ ಸ್ನಾನ ಮಾಡಬೇಕಾದರೆ, ನೀವು 2 ಗಂಟೆಗಳ ವಿರಾಮವನ್ನು ತೆಗೆದುಕೊಳ್ಳಬೇಕು. -ಊಟ ಮಾಡಿದ ತಕ್ಷಣ ನೀರು ಕುಡಿಯಬೇಡಿ -ಆಹಾರ ಸೇವಿಸಿದ ನಂತರ ಹೆಚ್ಚು ಹೊತ್ತು ನಡೆಯಬೇಡಿ. -ಆಹಾರವನ್ನು ತಿಂದ ತಕ್ಷಣ ತುಂಬಾ ಕೋಲ್ಡ್ ಚೀಸ್ ಅನ್ನು ಸೇವಿಸಬೇಡಿ. -ಆಹಾರ ಸೇವಿಸಿದ ತಕ್ಷಣ ಧೂಮಪಾನ ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು