AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು

ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು. ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ.

ಆಹಾರ ಸೇವಿಸಿದ ನಂತರ ಈ ತಪ್ಪುಗಳನ್ನು ಮಾಡಬೇಡಿ, ಅನಾರೋಗ್ಯಕ್ಕೆ ದಾರಿಯಾಗಬಹುದು
Food
TV9 Web
| Updated By: ನಯನಾ ರಾಜೀವ್|

Updated on: Sep 20, 2022 | 2:05 PM

Share

ದೇಹವನ್ನು ಸುವ್ಯವಸ್ಥೆಯಲ್ಲಿಡಲು ಆಹಾರವು ಬಹಳ ಮುಖ್ಯವಾದಂಥದ್ದು, ಯಾವ ರೀತಿಯ ಆಹಾರ ಸೇವಿಸುತ್ತೇವೆ, ಹೇಗೆ ಸೇವಿಸುತ್ತೇವೆ ಎಂಬುದರ ಮೇಲೆ ನಿಮ್ಮ ಆರೋಗ್ಯ ನಿರ್ಧಾರವಾಗುತ್ತೆ. ನಾವು ನಿತ್ಯವೂ ಮೂರರಿಂದ ನಾಲ್ಕು ಬಾರಿ ಆಹಾರ ಸೇವನೆ ಮಾಡುತ್ತೇವೆ, ನೀವು ಸೇವಿಸುವ ಆಹಾರವು ಉತ್ತಮವಾಗಿಯೂ ಇರಬಹುದು.

ಆದರೆ ನೀವು ಮಾಡುವ ತಪ್ಪಿನಿಂದಾಗಿ ಅನಾರೋಗ್ಯಕ್ಕೆ ತುತ್ತಾಗುವ ಸಾಧ್ಯತೆ ಇರುತ್ತದೆ. ಊಟ ಮಾಡಿದ ತಕ್ಷಣ ಮೊಬೈಲ್ ಹಿಡಿದು ಹಾಸಿಗೆ ಮೇಲೆ ಮಲಗಬೇಡಿ ಕೆಲವರು ಊಟ ಆಗುವುದೇ ಕಾಯುತ್ತಿರುತ್ತಾರೆ, ಊಟವಾದ ತಕ್ಷಣವೇ ಮೊಬೈಲ್ ಹಿಡಿದು, ಗೇಮ್ ಆಡುತ್ತಲೋ ಅಥವಾ ಇನ್ನೇನೋ ನೋಡುತ್ತಲೋ ಹೋಗಿ ಹಾಸಿಗೆ ಮೇಲೆ ಮಲಗಿಬಿಡುತ್ತಾರೆ. ಇದು ಆರೋಗ್ಯಕ್ಕೆ ಒಳ್ಳೆಯದಲ್ಲ.

ಫಾಸ್ಟ್​ ಆಗಿ ವಾಕ್​ ಮಾಡಬೇಡಿ ಊಟ ಮಾಡಿದ ಬಳಿಕ ವಾಕಿಂಗ್ ಮಾಡುವುದು ಆರೋಗ್ಯಕ್ಕೆ ಉತ್ತಮ, ಆದರೆ ತುಂಬಾ ವೇಗವಾಗಿ ನಡೆಯಬೇಡಿ, ಇದರಿಂದ ಹೊಟ್ಟೆನೋವು ಸೇರಿದಂತೆ ಅನೇಕ ಸಮಸ್ಯೆಗಳು ಕಂಡುಬರುತ್ತವೆ. ಊಟದ ಬಳಿಕ ಕೇವಲ 100 ಹೆಜ್ಜೆ ವಾಕ್ ಮಾಡಬಹುದು.

ಚಹಾ ಕುಡಿಯುವುದನ್ನು ತಪ್ಪಿಸಿ ಬಹಳಷ್ಟು ಮಂದಿ ಊಟ ಮಾಡಿದ ತಕ್ಷಣ ಚಹಾ ಅಥವಾ ಕಾಫಿ ಕುಡಿಯಲು ಇಷ್ಟಪಡುತ್ತಾರೆ. ನಮ್ಮ ಈ ಅಭ್ಯಾಸವನ್ನು ಆದಷ್ಟು ಬೇಗ ಬದಲಾಯಿಸಿಕೊಳ್ಳಬೇಕು. ಹೀಗೆ ಮಾಡುವುದರಿಂದ ಆಸಿಡಿಟಿ ಮತ್ತು ಜೀರ್ಣಕ್ರಿಯೆ ಸಮಸ್ಯೆಗಳು ಕೂಡ ಉಂಟಾಗುತ್ತವೆ. ಊಟ ಮಾಡಿದ 2 ಗಂಟೆಗಳ ನಂತರ ಮಾತ್ರ ಚಹಾ ಅಥವಾ ಕಾಫಿ ಕುಡಿಯಿರಿ.

-ಊಟ ಮಾಡಿದ ತಕ್ಷಣ ಸ್ನಾನ ಮಾಡಬೇಡಿ -ಊಟ ಮಾಡಿದ ನಂತರ ಸ್ನಾನ ಮಾಡುವವರು ಬಹಳ ಮಂದಿ ಇದ್ದಾರೆ. ಹೀಗೆ ಮಾಡುವುದರಿಂದ ಜೀರ್ಣಕ್ರಿಯೆ ಮೇಲೆ ಪರಿಣಾಮ ಬೀರಲಿದೆ. ನೀವು ಆಹಾರ ಸೇವಿಸಿದ ನಂತರ ಸ್ನಾನ ಮಾಡಬೇಕಾದರೆ, ನೀವು 2 ಗಂಟೆಗಳ ವಿರಾಮವನ್ನು ತೆಗೆದುಕೊಳ್ಳಬೇಕು. -ಊಟ ಮಾಡಿದ ತಕ್ಷಣ ನೀರು ಕುಡಿಯಬೇಡಿ -ಆಹಾರ ಸೇವಿಸಿದ ನಂತರ ಹೆಚ್ಚು ಹೊತ್ತು ನಡೆಯಬೇಡಿ. -ಆಹಾರವನ್ನು ತಿಂದ ತಕ್ಷಣ ತುಂಬಾ ಕೋಲ್ಡ್ ಚೀಸ್ ಅನ್ನು ಸೇವಿಸಬೇಡಿ. -ಆಹಾರ ಸೇವಿಸಿದ ತಕ್ಷಣ ಧೂಮಪಾನ ಮಾಡಬೇಡಿ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?