AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diabetes symptoms: ಬೆಳಿಗ್ಗೆ ಎದ್ದಾಗ ಈ ರೀತಿ ಆಗುತ್ತಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ

ಡಯಾಬಿಟಿಸ್‌ ಎಂದಿಗೂ ಒಮ್ಮೆಲೇ ಕಾಣಿಸಿಕೊಳ್ಳುವ ಕಾಯಿಲೆ ಅಲ್ಲ. ಇದು ನಿಮಗೆ ಕೆಲವು ಮುನ್ಸೂಚನೆಗಳನ್ನು ನೀಡುತ್ತದೆ. ಆಗ ಆ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬೆಳಿಗ್ಗೆ ಎದ್ದಾಗ ಕಾಣಿಸಿಕೊಳ್ಳುವ ಕೆಲವು ಲಕ್ಷಣಗಳಿಗೂ ಡಯಾಬಿಟಿಸ್‌ ರೋಗಕ್ಕೂ ಸಂಬಂಧ ಇರುತ್ತದೆ. ಇವುಗಳನ್ನು ನಿರ್ಲಕ್ಷ ಮಾಡದೆಯೇ ಸರಿಯಾಗಿ ಪತ್ತೆ ಹಚ್ಚಬೇಕಾಗುತ್ತದೆ. ಹಾಗಾದರೆ ಬೆಳಿಗ್ಗೆ ಯಾವ ರೀತಿಯ ಲಕ್ಷಣಗಳು ಕಂಡು ಬರುತ್ತದೆ? ಡಯಾಬೇಟಿಸ್ ಹೆಚ್ಚುತ್ತಿರಲು ಕಾರಣವೇನು? ಅದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

Diabetes symptoms: ಬೆಳಿಗ್ಗೆ ಎದ್ದಾಗ ಈ ರೀತಿ ಆಗುತ್ತಿದ್ದರೆ ತಕ್ಷಣ ವೈದ್ಯರನ್ನು ಭೇಟಿ ಮಾಡಿ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Mar 22, 2025 | 9:51 AM

Share

ಇತ್ತೀಚಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಯಗಳು ವಯಸ್ಸಲ್ಲದ ವಯಸ್ಸಿನಲ್ಲಿ ಕಂಡು ಬರುತ್ತಿರುವುದು ಸುಳ್ಳಲ್ಲ. ಇದರಲ್ಲಿ ಮಧುಮೇಹ ಕಾಯಿಲೆ ಕೂಡ ಒಂದು. ಡಯಾಬಿಟಿಸ್‌ (Diabetes) ಒಂದು ರೀತಿಯ ದೊಡ್ಡ ಆರೋಗ್ಯ ಸಮಸ್ಯೆ. ಈಗಾಗಲೇ ಶುಗರ್ ಅಥವಾ ಡಯಾಬಿಟಿಸ್‌ ಅಥವಾ ಮಧುಮೇಹ ಕಾಯಿಲೆಯಿಂದ ಬಳಲುತ್ತಿರುವವರು, ಇದರಿಂದ ಹೈರಾಣಾಗಿಬಿಟ್ಟಿದ್ದಾರೆ. ಈ ರೋಗ ಒಮ್ಮೆ ಆರಂಭವಾದರೆ ಬೇರೆಯವರಂತೆ ಬದುಕಲು ಸಾಧ್ಯವಿಲ್ಲ. ಆದರೆ ಡಯಾಬಿಟಿಸ್‌ ಎಂದಿಗೂ ಒಮ್ಮೆಲೇ ಕಾಣಿಸಿಕೊಳ್ಳುವ ಕಾಯಿಲೆ ಅಲ್ಲ. ಇದು ನಿಮಗೆ ಕೆಲವು ಮುನ್ಸೂಚನೆಗಳನ್ನು ನೀಡುತ್ತದೆ. ಆಗ ಆ ಲಕ್ಷಣಗಳನ್ನು ನಿರ್ಲಕ್ಷಿಸಬಾರದು. ಆರೋಗ್ಯ ತಜ್ಞರು ಹೇಳುವ ಪ್ರಕಾರ, ಬೆಳಿಗ್ಗೆ ಎದ್ದಾಗ ಕಾಣಿಸಿಕೊಳ್ಳುವ ಕೆಲವು ಲಕ್ಷಣಗಳಿಗೂ ಡಯಾಬಿಟಿಸ್‌ ರೋಗಕ್ಕೂ ಸಂಬಂಧ ಇರುತ್ತದೆ. ಇವುಗಳನ್ನು ನಿರ್ಲಕ್ಷ ಮಾಡದೆಯೇ ಸರಿಯಾಗಿ ಪತ್ತೆ ಹಚ್ಚಬೇಕಾಗುತ್ತದೆ. ಹಾಗಾದರೆ ಬೆಳಿಗ್ಗೆ ಯಾವ ರೀತಿಯ ಲಕ್ಷಣಗಳು ಕಂಡು ಬರುತ್ತದೆ? ಡಯಾಬೇಟಿಸ್ ಹೆಚ್ಚುತ್ತಿರಲು ಕಾರಣವೇನು? ಅದನ್ನು ತಡೆಯುವುದು ಹೇಗೆ ಎಂಬುದನ್ನು ತಿಳಿದುಕೊಳ್ಳಿ.

ದೆಹಲಿಯ ರಾಜೀವ್ ಗಾಂಧಿ ಆಸ್ಪತ್ರೆಯ ಡಾ. ಅಜಿತ್ ಜೈನ್ ಈ ಬಗ್ಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದು, ಅವರು ಹೇಳುವ ಪ್ರಕಾರ, “ಕೆಲವು ಲಕ್ಷಣಗಳನ್ನು ಕಡೆಗಣಿಸಬಾರದು. ಬೆಳಿಗ್ಗೆ ಎದ್ದಾಗ ಆಯಾಸದ ಅನುಭವ ಆಗುವಂತದ್ದು ಅಥವಾ ಬಾಯಿ ಒಣಗಿದ ಅನುಭವ ಆಗುವುದು ಅಥವಾ ಕೆಲವರಿಗೆ ಹಸಿವು ಹೆಚ್ಚು ಅಥವಾ ಕಡಿಮೆ ಆಗುವುದು, ಇನ್ನು ಕೆಲವರಿಗೆ ಆಗಾಗ ಮೂತ್ರ ವಿಸರ್ಜನೆಗೆ ಹೋಗಬೇಕು ಎನಿಸುವುದು ಡಯಾಬಿಟೀಸ್ ಲಕ್ಷಣವಾಗಿರಬಹುದು. ಹಾಗಾಗಿ ಈ ರೀತಿ ಅನುಭವ ಆಗುತ್ತಿದ್ದರೆ ಅದನ್ನು ಕಡೆಗಣಿಸಕೂಡದು. ತಕ್ಷಣವೇ ನಿಮ್ಮ ಶುಗರ್ ಲೆವೆಲ್‌ ಅನ್ನು ಪರೀಕ್ಷಿಸಿಕೊಳ್ಳಬೇಕು” ಎಂದು ಅವರು ಹೇಳುತ್ತಾರೆ.

ಡಯಾಬೇಟಿಸ್ ಹೆಚ್ಚುತ್ತಿರಲು ಕಾರಣವೇನು?

ಡಾ. ಜೈನ್ ಅವರ ಪ್ರಕಾರ, ಟೈಪ್-2 ಡಯಾಬೇಟಿಸ್ ಬರಲು ಆಹಾರ ಮತ್ತು ಜೀವನಶೈಲಿ ಹಾಳಾಗಿರುವುದು ಮುಖ್ಯ ಕಾರಣವಾಗುತ್ತದೆ. ಸಾಮಾನ್ಯವಾಗಿ ಮೊದಲು, 50 ವರ್ಷಗಳ ಬಳಿಕ ಜನರಿಗೆ ಟೈಪ್- 2 ಡಯಾಬೇಟಿಸ್ ಕಾಣಿಸಿಕೊಳ್ಳುತ್ತಿತ್ತು ಆದರೆ ಈಗ ಚಿಕ್ಕ ವಯಸ್ಸಿನಲ್ಲಿ, ಅಂದರೆ 25 ರಿಂದ 35 ವರ್ಷ ವಯಸ್ಸಿನವರಲ್ಲಿಯೇ ಈ ಕಾಯಿಲೆ ಕಂಡುಬರುತ್ತಿದೆ. ಇದಕ್ಕೆ ಆಹಾರ ಪದ್ಧತಿ ಮತ್ತು ಜೀವನಶೈಲಿಯಲ್ಲಿ ನಾವು ಮಾಡಿಕೊಂಡಂತಹ ಬದಲಾವಣೆಗಳೇ ಕಾರಣವಾಗಿರುತ್ತದೆ. ಅದಲ್ಲದೆ ಜನರ ಆಹಾರದಲ್ಲಿ ಜಂಕ್ ಫುಡ್ ಸೇವನೆ ಅತಿರೇಕವಾಗಿದೆ. ಮದ್ಯಪಾನ ಹೆಚ್ಚುತ್ತಿದೆ, ನಿದ್ರೆ ಹಾಳಾಗುತ್ತಿದೆ. ಹೀಗೆ ಅನೇಕ ಕಾರಣಗಳಿದ್ದು, ಜನರು ಟೈಪ್-2 ಡಯಾಬೇಟಿಸ್ ಕಾಯಿಲೆಗೆ ಶಿಕಾರಿಗಳಾಗುತ್ತಿದ್ದಾರೆ. ಅದಲ್ಲದೆ ಈ ಡಯಾಬೇಟಿಸ್ ಕಾಯಿಲೆಯಿಂದಾಗಿ ಜನರಿಗೆ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಕಂಡುಬರಲು ಆರಂಭಿಸಿವೆ.

ಇದನ್ನೂ ಓದಿ: ಪ್ರತಿದಿನ ಬೆಳಿಗ್ಗೆ ಕುಂಬಳಕಾಯಿ ರಸವನ್ನು ಕುಡಿದರೆ ಏನಾಗುತ್ತೆ ಗೊತ್ತಾ?

ಡಯಾಬಿಟೀಸ್ ಬರದಂತೆ ತಡೆಯುವುದು ಹೇಗೆ?

ಈ ಮಹಾಮಾರಿ ಬರುವುದನ್ನು ತಪ್ಪಿಸಲು ಪ್ರತಿದಿನ ಕನಿಷ್ಠ ಅರ್ಧ ಗಂಟೆ ವ್ಯಾಯಾಮ ಮಾಡಬೇಕು. ಊಟದಲ್ಲಿ ಉಪ್ಪಿನ ಸೇವನೆ ಮಿತಿಯಲ್ಲಿದ್ದರೆ ಒಳ್ಳೆಯದು. ಮಾನಸಿಕ ಒತ್ತಡದಿಂದ ಹೊರಗೆ ಬನ್ನಿ ಮತ್ತು ಕನಿಷ್ಠ ಆರು ಗಂಟೆಗಳು ಸರಿಯಾಗಿ ನಿದ್ರೆ ಮಾಡುವ ಮೂಲಕ ಆರೋಗ್ಯವಾಗಿರಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ