AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪ್ಪನ್ನು ಹೆಚ್ಚು ಸೇವಿಸುತ್ತೀರಾ, ಈ ಗಂಭೀರ ಕಾಯಿಲೆ ಬರಬಹುದು ಎಚ್ಚರ

ಭಾರತದಲ್ಲಿ ಕೋಟಿಗಟ್ಟಲೆ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಎಲ್ಲಾ ವಯಸ್ಸಿನ ಜುನರಲ್ಲೂ ಕಾಣಬಹುದು.

ಉಪ್ಪನ್ನು ಹೆಚ್ಚು ಸೇವಿಸುತ್ತೀರಾ, ಈ ಗಂಭೀರ ಕಾಯಿಲೆ ಬರಬಹುದು ಎಚ್ಚರ
Salt
TV9 Web
| Edited By: |

Updated on:Nov 15, 2022 | 2:16 PM

Share

ಭಾರತದಲ್ಲಿ ಕೋಟಿಗಟ್ಟಲೆ ಜನರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇಂದಿನ ದಿನಗಳಲ್ಲಿ ಈ ಸಮಸ್ಯೆಯನ್ನು ಎಲ್ಲಾ ವಯಸ್ಸಿನ ಜನರಲ್ಲೂ ಕಾಣಬಹುದು. ಕಳಪೆ ಜೀವನಶೈಲಿ, ಅನಾರೋಗ್ಯಕರ ಆಹಾರ ಮತ್ತು ಒತ್ತಡವು ಅಧಿಕ ರಕ್ತದೊತ್ತಡವನ್ನು ಉಂಟು ಮಾಡಬಹುದು. ಇದು ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕೂಡ ಹೆಚ್ಚಿಸುತ್ತದೆ. ಅದೇ ಸಮಯದಲ್ಲಿ ಅತಿಯಾದ ಉಪ್ಪು ಸೇವನೆ ಇದಕ್ಕೆ ಮುಖ್ಯ ಕಾರಣಗಳಲ್ಲಿ ಒಂದಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯು ನೀಡಿರುವ ಮಾಹಿತಿ ಪ್ರಕಾರ, ದಿನಕ್ಕೆ ಐದು ಗ್ರಾಂಕ್ಕಿಂತ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ರಕ್ತದೊತ್ತಡ ಉಂಟಾಗುವ ಸಾಧ್ಯತೆಗಳು ಹೆಚ್ಚಾಗುತ್ತದೆ. ಇದು ಭವಿಷ್ಯದಲ್ಲಿ ಹೃದಯ ಕಾಯಿಲೆಗಳಿಗೆ ಕಾರಣವಾಗಬಹುದು, ಅಮೆರಿಕನ್ ಜರ್ನಲ್ ಆಫ್ ಕ್ಲಿನಿಕಲ್ ನ್ಯೂಟ್ರಿಷನ್​ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರತಿ ಆಹಾರದಲ್ಲಿ ಸಾಮಾನ್ಯವಾಗಿ 3.8 ಗ್ರಾಂ ಇರುತ್ತದೆ, ಇದು ತಿಂದ ಬಳಿಕ ರಕ್ತನಾಳಗಳನ್ನು ತೆರೆಯುವ ಸಾಮರ್ಥ್ಯದ ಮೇಲೆ ಪರಿಣಾಮ ಬೀರುತ್ತದೆ.

ಆಹಾರದಲ್ಲಿ ಹೆಚ್ಚು ಉಪ್ಪನ್ನು ಸೇವಿಸುವುದರಿಂದ ಅಪಧಮನಿಗಳ ಕಿರಿದಾಗುವಿಕೆಗೆ ಕಾರಣವಾಗುತ್ತದೆ. ಮತ್ತು ರಕ್ತದ ಹರಿವಿನ ಮೇಲೆ ಪರಿಣಾಮ ಬೀರುತ್ತದೆ ಎಂದು ಸಂಶೋಧಕರು ಹೇಳಿದ್ದಾರೆ.

ಅಚ್ಚರಿಯ ವಿಷಯವೆಂದರೆ ಈ ಸ್ಥಿತಿಯು ಆಹಾರ ಸೇವಿಸಿದ ಅರ್ಧ ಗಂಟೆಯ ನಂತರ ಮಾತ್ರ ರೂಪುಗೊಳ್ಳಲು ಪ್ರಾರಂಭಿಸುತ್ತದೆ.

ಹೆಚ್ಚುವರಿ ಉಪ್ಪು ದೇಹಕ್ಕೆ ಹಾನಿ ಉಂಟು ಮಾಡುತ್ತದೆ ಆಹಾರದಲ್ಲಿ ಉಪ್ಪು ಸೇವನೆಯು ರಕ್ತದೊತ್ತಡ, ಸಾಮಾನ್ಯ ಹೃದಯ ಕಾಯಿಲೆ ಅಪಾಯವನ್ನು ಹೆಚ್ಚಿಸುತ್ತದೆ. ಯಾವುದೇ ವ್ಯಕ್ತಿಯು ಇಡೀ ದಿನದಲ್ಲಿ ಯಾವುದೇ ಸ್ಥಿತಿಯಲ್ಲಿ ಐದು ಗ್ರಾಂಗಿಂತಹೆಚ್ಚು ಉಪ್ಪನ್ನು ಸೇವಿಸಬಾರದು ಮತ್ತು ಇಡೀ ದಿನದಲ್ಲಿ ಕೇವಲ 2 ಗ್ರಾಂ ಉಪ್ಪು ಮಾತ್ರ ನಿಮ್ಮ ದೇಹಕ್ಕೆ ಹೋಗಬೇಕು. ಅಧಿಕ ರಕ್ತದೊತ್ತಡದಿಂದ ಬಳಲುತ್ತಿರುವ ಜನರು ದಿನಕ್ಕೆ 1.5 ಗ್ರಾಂಗಿಂತ ಹೆಚ್ಚು ಉಪ್ಪನ್ನು ಸೇವಿಸುವುದು ಹಾನಿಕಾರಕ.

ವಯಸ್ಕರು ದಿನಕ್ಕೆ ಎರಡು ಗ್ರಾಂಗಿಂತ ಹೆಚ್ಚು ಸೋಡಿಯಂ ಅನ್ನು ಸೇವಿಸಬಾರದು, ಅಂದರೆ, ಪ್ರತಿದಿನ ಐದು ಗ್ರಾಂಗಿಂತ ಹೆಚ್ಚು ಉಪ್ಪನ್ನು ಸೇವಿಸುವುದು ಆರೋಗ್ಯಕ್ಕೆ ಹಾನಿಕರ.

ರುಚಿಕರವಾದ ಆಹಾರವೂ ಕೂಡ ಉಪ್ಪು ಇಲ್ಲದಿದ್ದರೆ ಸಪ್ಪೆಯಾಗಿರುತ್ತದೆ, ಉಪ್ಪು ದೇಹಕ್ಕೆ ಅನೇಕ ಪ್ರಯೋಜನಗಳನ್ನು ನೀಡುತ್ತದೆ. ಇದರಿಂದ ನಾವು ಅಯೋಡಿನ್ ಪಡೆಯುತ್ತೇವೆ. ಇದು ಥೈರಾಯ್ಡ್​ ಗ್ರಂಥಿಯನ್ನು ನಿಯಂತ್ರಿಸುತ್ತದೆ ಮತ್ತು ದೇಹದಲ್ಲಿನ ದ್ರವದ ಪ್ರಮಾಣವನ್ನು ಅಮತೋಲಗೊಳಿಸುತ್ತದೆ.

ಇದು ಅನೇಕ ಪ್ರಯೋಜನಗಳನ್ನು ಹೊಂದಿದೆ. ಆದರೆ ಅದರ ಅತಿಯಾದ ಬಳಕೆಯು ದೇಹವನ್ನು ಕೆಟ್ಟದಾಗಿ ಹಾನಿಗೊಳಿಸುತ್ತದೆ. ನೀವು ಹಗಲಿನಲ್ಲಿ ಎಷ್ಟು ಸೋಡಿಯಂ ಸೇವಿಸುತ್ತೀರಿ ಎಂಬುದನ್ನು ಗಮನಿಸಬೇಕು. ನಿಮ್ಮ ಆಹಾರದಲ್ಲಿ ಉಪ್ಪಿನ ಬಳಕೆಯನ್ನು ಮಿತಗೊಳಿಸಿದರೆ ನೀವು ಅನೇಕ ರೋಗಗಳನ್ನು ತಪ್ಪಿಸಬಹುದು ಮತ್ತು ಆರೋಗ್ಯಕರ ಜೀವನವನ್ನು ಆನಂದಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:06 pm, Tue, 15 November 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು