AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Thyroid Control Tips: ಥೈರಾಯ್ಡ್ ನಿಯಂತ್ರಿಸಬೇಕೇ? ಹಾಗಾದ್ರೆ ಆಹಾರದಲ್ಲಿ ಈ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸಿ

ಥೈರಾಯ್ಡ್ ನಮ್ಮ ದೇಹದ ಪ್ರಮುಖ ಗ್ರಂಥಿಯಾಗಿದೆ. ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಕಂಡುಬರುತ್ತದೆ. ಇದು ದೇಹದ ಅನೇಕ ಚಟುವಟಿಕೆಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ.

Thyroid Control Tips: ಥೈರಾಯ್ಡ್ ನಿಯಂತ್ರಿಸಬೇಕೇ? ಹಾಗಾದ್ರೆ ಆಹಾರದಲ್ಲಿ ಈ ಪೌಷ್ಟಿಕಾಂಶ ಭರಿತ ಪದಾರ್ಥಗಳನ್ನು ಸೇರಿಸಿ
Thyroid
TV9 Web
| Edited By: |

Updated on: Nov 06, 2022 | 12:40 PM

Share

ಥೈರಾಯ್ಡ್ ನಮ್ಮ ದೇಹದ ಪ್ರಮುಖ ಗ್ರಂಥಿಯಾಗಿದೆ. ಥೈರಾಯ್ಡ್ ಗ್ರಂಥಿಯು ಕುತ್ತಿಗೆ ಭಾಗದಲ್ಲಿ ಕಂಡುಬರುತ್ತದೆ. ಇದು ದೇಹದ ಅನೇಕ ಚಟುವಟಿಕೆಗಳನ್ನು ನಿಯಂತ್ರಿಸುವ ಕೆಲಸ ಮಾಡುತ್ತದೆ.

ಥೈರಾಯ್ಡ್ ಟ್ರಯೋಡೋಥೈರೋನೈನ್ (T3) ಮತ್ತು ಥೈರಾಕ್ಸಿನ್ (T4) ಎಂಬ ಹಾರ್ಮೋನ್‌ಗಳನ್ನು ಉತ್ಪಾದಿಸುತ್ತದೆ. ಈ ಹಾರ್ಮೋನುಗಳು ದೇಹದ ಅನೇಕ ಕಾರ್ಯಗಳಿಗೆ ಅವಶ್ಯಕ.

ಜೀರ್ಣಕ್ರಿಯೆ, ಉಸಿರಾಟ, ಸ್ನಾಯುಗಳು ಮತ್ತು ಹೃದಯಕ್ಕೆ ಸಂಬಂಧಿಸಿದ ಅನೇಕ ಚಟುವಟಿಕೆಗಳಲ್ಲಿ T3 ಮತ್ತು T4 ಹಾರ್ಮೋನುಗಳು ಪ್ರಮುಖ ಪಾತ್ರವಹಿಸುತ್ತವೆ. ಥೈರಾಯ್ಡ್ ಕಾಯಿಲೆಯಲ್ಲಿ ಎರಡು ವಿಧಗಳಿವೆ – ಮೊದಲ ಹೈಪರ್ ಥೈರಾಯ್ಡಿಸಮ್ ಮತ್ತು ಎರಡನೇ ಹೈಪೋಥೈರಾಯ್ಡ್. ಥೈರಾಯ್ಡ್‌ನಿಂದಾಗಿ, ತೂಕವು ಕಡಿಮೆಯಾಗಲು ಪ್ರಾರಂಭವಾಗುತ್ತದೆ ಅಥವಾ ತೂಕ ಹೆಚ್ಚಾಗಲು ಪ್ರಾರಂಭಿಸುತ್ತದೆ.

ಥೈರಾಯ್ಡ್ ರೋಗಲಕ್ಷಣಗಳು ಥೈರಾಯ್ಡ್ ರೋಗಲಕ್ಷಣಗಳೆಂದರೆ ತೂಕ ಹೆಚ್ಚಾಗುವುದು, ತೂಕ ನಷ್ಟ, ಅನಿಯಮಿತ ಹೃದಯ ಬಡಿತ, ಊತ ಅಥವಾ ಗಂಟಲಿನಲ್ಲಿ ಭಾರ, ಮತ್ತು ಕೂದಲು ಉದುರುವುದು. ಥೈರಾಯ್ಡ್ ನಿಯಂತ್ರಣಕ್ಕೆ ಯಾವ್ಯಾವ ವಸ್ತುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎಂಬುದನ್ನು ತಿಳಿದುಕೊಳ್ಳೋಣ.

ನೆಲ್ಲಿಕಾಯಿ ನೆಲ್ಲಿಕಾಯಿಯು ವಿಟಮಿನ್ ಸಿಯ ಅತ್ಯುತ್ತಮ ಮೂಲವಾಗಿದೆ. ನೆಲ್ಲಿಕಾಯಿಯನ್ನು ಸೇವಿಸುವುದು ಥೈರಾಯ್ಡ್‌ನಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿರುವ ಪೋಷಕಾಂಶಗಳು ಥೈರಾಯ್ಡ್ ಗ್ರಂಥಿಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಹೆಸರು ಬೇಳೆ ಹೆಸರು ಬೇಳೆಯಲ್ಲಿ ಪ್ರೋಟೀನ್, ಫೈಬರ್, ಕಾರ್ಬೋಹೈಡ್ರೇಟ್‌ಗಳು, ವಿಟಮಿನ್‌ಗಳು ಮತ್ತು ಖನಿಜಗಳು ಸಮೃದ್ಧವಾಗಿದೆ. ಅಯೋಡಿನ್ ಮತ್ತು ಪ್ರೋಟೀನ್ ಕೊರತೆಯನ್ನು ಹೋಗಲಾಡಿಸಲು ಹೆಸರು ಬೇಳೆ ಪ್ರಯೋಜನಕಾರಿಯಾಗಿದೆ. ಅಯೋಡಿನ್ ಕೊರತೆಯು ಥೈರಾಯ್ಡ್ ಹೊಂದಲು ಕಾರಣವಾಗಿದೆ, ಆದರೆ ಪ್ರೋಟೀನ್-ಭರಿತ ವಸ್ತುಗಳನ್ನು ತಿನ್ನುವುದು ಥೈರಾಯ್ಡ್ ರೋಗಿಗಳಿಗೆ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.

ತೆಂಗಿನ ಕಾಯಿ ಥೈರಾಯ್ಡ್ ರೋಗಿಗಳಿಗೆ ತೆಂಗಿನಕಾಯಿ ತುಂಬಾ ಪ್ರಯೋಜನಕಾರಿಯಾಗಿದೆ. ತೆಂಗಿನಕಾಯಿಯು ಚಯಾಪಚಯವನ್ನು ಉತ್ತೇಜಿಸುವ ಮಧ್ಯಮ ಸರಪಳಿ ಕೊಬ್ಬಿನಾಮ್ಲಗಳು (MCFAs) ಮತ್ತು ಮಧ್ಯಮ ಚೈನ್ ಟ್ರೈಗ್ಲಿಸರೈಡ್‌ಗಳು (MTCs) ನಂತಹ ಪೋಷಕಾಂಶಗಳನ್ನು ಒಳಗೊಂಡಿದೆ. ತೆಂಗಿನಕಾಯಿ ಸೇವನೆಯಿಂದ ಥೈರಾಯ್ಡ್ ಸಮಸ್ಯೆ ನಿವಾರಣೆಯಾಗುತ್ತದೆ.

ಕುಂಬಳಕಾಯಿ ಬೀಜ ಕುಂಬಳಕಾಯಿ ಬೀಜಗಳಲ್ಲಿ ಸತುವು ಸಮೃದ್ಧವಾಗಿದೆ. ಸತುವು ಜೀವಸತ್ವಗಳು ಮತ್ತು ಖನಿಜಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಸತುವು ಥೈರಾಯ್ಡ್ ಹಾರ್ಮೋನುಗಳನ್ನು ಸಮತೋಲನಗೊಳಿಸಲು ಸಹ ಸಹಾಯ ಮಾಡುತ್ತದೆ. ಕುಂಬಳಕಾಯಿಯ ಸೇವನೆಯಿಂದ ಥೈರಾಯ್ಡ್‌ ನಿಯಂತ್ರಣ ಸಾಧ್ಯ.

ಡ್ರೈಫ್ರೂಟ್ಸ್​ ಡ್ರೈಫ್ರೂಟ್ಸ್​ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಡ್ರೈಫ್ರೂಟ್ಸ್​ ಪ್ರೋಟೀನ್ಗಳು, ಉತ್ಕರ್ಷಣ ನಿರೋಧಕಗಳು, ಕಾರ್ಬೋಹೈಡ್ರೇಟ್ಗಳು ಮತ್ತು ವಿಟಮಿನ್ಗಳು ಮತ್ತು ಖನಿಜಗಳಲ್ಲಿ ಸಮೃದ್ಧವಾಗಿವೆ. ನೀವು ಥೈರಾಯ್ಡ್ ಹೊಂದಿದ್ದರೆ, ನಿಮ್ಮ ಆಹಾರದಲ್ಲಿ ಸೀಮಿತ ಪ್ರಮಾಣದ ಒಣ ಹಣ್ಣುಗಳನ್ನು ಸೇರಿಸುವುದು ಪ್ರಯೋಜನಕಾರಿ. ಡ್ರೈ ಫ್ರೂಟ್ಸ್​ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೇವಿಸುವುದರಿಂದ ಥೈರಾಯ್ಡ್‌ಗೆ ಹಾನಿಕಾರಕವಾದ ಕೊಬ್ಬನ್ನು ಹೆಚ್ಚಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?