AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥೈರಾಯ್ಡ್ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ! ಹಾಗಿದ್ರೆ ಯಾವುದು ನಿಜ? ತಜ್ಞರಿಂದ ತಿಳಿದುಕೊಳ್ಳಿ

ಥೈರಾಯ್ಡ್ ಅನ್ನು ಹಗುರವಾಗಿ ಪರಿಗಣಿಸಿದರೆ, ದೇಹವು ಅನೇಕ ರೀತಿಯ ಆರೋಗ್ಯ ಸಮಸ್ಯೆಗಳ ತವರೂರಾಗಬಹುದು. ಅದರಲ್ಲಿಯೂ ಈ ಬಗ್ಗೆ ಜನ ಸುಲಭವಾಗಿ ನಂಬುವ ಅನೇಕ ತಪ್ಪು ಕಲ್ಪನೆಗಳಿವೆ. ಅದರಲ್ಲಿ, ಈ ರೋಗವು ಮಹಿಳೆಯರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂಬುದು ಕೂಡ ಒಂದು. ಆದರೆ ಅದು ನಿಜವಲ್ಲ ಎಂಬುದು ನಿಮಗೆ ತಿಳಿದಿರಲಿ. ಹೌದು, ಈ ರೀತಿ ಥೈರಾಯ್ಡ್ ಬಗ್ಗೆ ತಿಳಿದುಕೊಂಡಿರುವುದೆಲ್ಲವೂ ಸತ್ಯವಲ್ಲ. ಹಾಗಾಗಿ ಆರೋಗ್ಯ ತಜ್ಞರು ಹೇಳಿರುವ ಕೆಲವು ಸತ್ಯಗಳ ಬಗ್ಗೆ ತಿಳಿದುಕೊಳ್ಳಿ. ಸಂಪೂರ್ಣ ಮಾಹಿತಿ ಸ್ಟೋರಿಯಲ್ಲಿದೆ.

ಥೈರಾಯ್ಡ್ ಬಗ್ಗೆ ಇರುವ ಈ ತಪ್ಪು ಕಲ್ಪನೆಗಳನ್ನು ನಂಬಬೇಡಿ! ಹಾಗಿದ್ರೆ ಯಾವುದು ನಿಜ? ತಜ್ಞರಿಂದ ತಿಳಿದುಕೊಳ್ಳಿ
Don’t Fall For These Thyroid MythsImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 25, 2026 | 5:32 PM

Share

ಇತ್ತೀಚಿನ ದಿನಗಳಲ್ಲಿ ಥೈರಾಯ್ಡ್ (Thyroid) ಸಮಸ್ಯೆ ಸಾಮಾನ್ಯ ಆರೋಗ್ಯ ಸಮಸ್ಯೆಯಾಗುತ್ತಿದೆ. ಆದರೆ ಈ ಕಾಯಿಲೆಯ ಬಗ್ಗೆ ಜನರಲ್ಲಿ ಹಲವಾರು ತಪ್ಪು ಕಲ್ಪನೆಗಳು ಇನ್ನೂ ಹರಿದಾಡುತ್ತಿವೆ. ಕೆಲವರು ಥೈರಾಯ್ಡ್ ಬಂದರೆ ಜೀವಪೂರ್ತಿ ಔಷಧಿ ತಿನ್ನಲೇಬೇಕು ಎಂದು ಹೇಳುತ್ತಾರೆ ಮತ್ತೊಂದಿಷ್ಟು ಜನ ಇದು ಮಹಿಳೆಯರಿಗೆ ಮಾತ್ರ ಬರುವ ಕಾಯಿಲೆ ಎಂದು ಭಾವಿಸುತ್ತಾರೆ. ಆದರೆ ವೈದ್ಯರ ಪ್ರಕಾರ, ಯಾವುದು ಸತ್ಯ ಎಂಬುದನ್ನು ತಿಳಿದುಕೊಳ್ಳುವುದು ಬಹಳ ಅನಿವಾರ್ಯ. ಅದಕ್ಕಾಗಿಯೇ ಜನರಿಗೆ ಈ ಬಗ್ಗೆ ಸರಿಯಾಗಿ ಅರ್ಥಮಾಡಿಸಲು ಪ್ರತಿ ವರ್ಷ ಮೇ 25 ರಂದು ವಿಶ್ವ ಥೈರಾಯ್ಡ್ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಉದ್ದೇಶ ಜನರಲ್ಲಿ ಥೈರಾಯ್ಡ್ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಇದರ ಲಕ್ಷಣಗಳನ್ನು ಸಮಯಕ್ಕೆ ಗುರುತಿಸುವ ಮಹತ್ವವನ್ನು ತಿಳಿಸುವುದಾಗಿದೆ.

ಥೈರಾಯ್ಡ್ ಎಂದರೇನು?

ನಮ್ಮ ಗಂಟಲಿನಲ್ಲಿ ಚಿಟ್ಟೆಯಾಕಾರದ ಥೈರಾಯ್ಡ್ ಗ್ರಂಥಿ ಇರುತ್ತದೆ. ಇದು ದೇಹದ ಮೆಟಾಬಾಲಿಸಂ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ. ನಾವು ತಿನ್ನುವ ಆಹಾರವನ್ನು ಶಕ್ತಿಯಾಗಿ ಪರಿವರ್ತಿಸುವ ಕೆಲಸವನ್ನು ಈ ಗ್ರಂಥಿ ಮಾಡುತ್ತದೆ. ಈ ಗ್ರಂಥಿಯಿಂದ ಹಾರ್ಮೋನ್‌ಗಳು ಹೆಚ್ಚು ಅಥವಾ ಕಡಿಮೆ ಪ್ರಮಾಣದಲ್ಲಿ ಉತ್ಪತ್ತಿಯಾದರೆ ಥೈರಾಯ್ಡ್ ಸಮಸ್ಯೆ ಉಂಟಾಗಬಹುದು.

ಥೈರಾಯ್ಡ್ ಬಗ್ಗೆ ಇರುವ ಪ್ರಮುಖ ತಪ್ಪು ಕಲ್ಪನೆಗಳು:

ಥೈರಾಯ್ಡ್ ಬಂದರೆ ಜೀವಪೂರ್ತಿ ಔಷಧಿ ತಿನ್ನಬೇಕು: ವೈದ್ಯರ ಪ್ರಕಾರ, ಎಲ್ಲಾ ರೋಗಿಗಳಿಗೂ ಜೀವಪೂರ್ತಿ ಔಷಧಿ ಅಗತ್ಯವಿಲ್ಲ. ಕೆಲವರಿಗೆ ಮಾತ್ರ ದೀರ್ಘಕಾಲ ಚಿಕಿತ್ಸೆ ಬೇಕಾಗಬಹುದು. ಸರಿಯಾದ ಜೀವನಶೈಲಿ, ಆಹಾರ ಪದ್ಧತಿ ಮತ್ತು ವೈದ್ಯಕೀಯ ಚಿಕಿತ್ಸೆಯಿಂದ ಔಷಧಿಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.

ಥೈರಾಯ್ಡ್ ಮಹಿಳೆಯರಿಗೆ ಮಾತ್ರ ಬರುತ್ತದೆ: ಮಹಿಳೆಯರಲ್ಲಿ ಹೆಚ್ಚು ಪ್ರಕರಣಗಳು ಕಂಡುಬರುವುದಾದರೂ, ಪುರುಷರು ಮತ್ತು ಮಕ್ಕಳಿಗೂ ಥೈರಾಯ್ಡ್ ಸಮಸ್ಯೆ ಕಾಣಿಸಬಹುದು. ಪುರುಷರಲ್ಲಿ ಲಕ್ಷಣಗಳನ್ನು ನಿರ್ಲಕ್ಷಿಸುವ ಸಾಧ್ಯತೆ ಹೆಚ್ಚಿರುವುದರಿಂದ ಸಮಸ್ಯೆ ತಡವಾಗಿ ಪತ್ತೆಯಾಗುತ್ತದೆ.

ಇದು ಕೇವಲ ಗಂಟಲಿನ ಸಮಸ್ಯೆ: ಥೈರಾಯ್ಡ್ ಗ್ರಂಥಿ ಗಂಟಲಿನಲ್ಲಿ ಇದ್ದರೂ ಇದರ ಪರಿಣಾಮ ಸಂಪೂರ್ಣ ದೇಹದ ಮೇಲೆ ಬೀರುತ್ತದೆ. ಹೃದಯದ ಬಡಿತ, ನಿದ್ರೆ, ಶಕ್ತಿ ಮಟ್ಟ, ತೂಕ ಮತ್ತು ಮಾನಸಿಕ ಆರೋಗ್ಯದ ಮೇಲೂ ಪರಿಣಾಮ ಕಾಣಿಸಬಹುದು.

ಇದನ್ನೂ ಓದಿ: ಪುರುಷರಲ್ಲಿ ಈ ಲಕ್ಷಣಗಳು ಕಂಡುಬಂದರೆ ಎಂದಿಗೂ ನಿರ್ಲಕ್ಷಿಸಬೇಡಿ

ಥೈರಾಯ್ಡ್ ಸಮಸ್ಯೆಗೆ ಕಾರಣಗಳೇನು?

  • ಜನ್ಯ ಕಾರಣಗಳು (Genetic)
  • ಹೆಚ್ಚು ಐಯೋಡಿನ್ ಇರುವ ಔಷಧಿಗಳು
  • ಐಯೋಡಿನ್ ಕೊರತೆಯ ಉಪ್ಪು ಬಳಕೆ
  • ಸ್ವಪ್ರತಿರೋಧಕ ಕಾಯಿಲೆಗಳು (Autoimmune diseases)
  • ರಕ್ತಹೀನತೆ
  • ಟೈಪ್-1 ಸಿಲಿಯಾಕ್ ರೋಗ
  • ಲ್ಯುಪಸ್
  • ಸಂಧಿವಾತ
  • ಸ್ಜೋಗ್ರೆನ್ ಸಿಂಡ್ರೋಮ್

ಥೈರಾಯ್ಡ್‌ನ ಪ್ರಮುಖ ಪ್ರಕಾರಗಳು:

ಹೈಪೋಥೈರಾಯ್ಡಿಸಮ್ (Hypothyroidism): ಈ ಸ್ಥಿತಿಯಲ್ಲಿ ಥೈರಾಯ್ಡ್ ಗ್ರಂಥಿ ಕಡಿಮೆ ಪ್ರಮಾಣದಲ್ಲಿ ಹಾರ್ಮೋನ್ ಉತ್ಪತ್ತಿ ಮಾಡುತ್ತದೆ. ಲಕ್ಷಣಗಳು: ತೂಕ ಹೆಚ್ಚಾಗುವುದು, ಜೀರ್ಣಕ್ರಿಯೆ ಸಮಸ್ಯೆ, ನಿಧಾನ ಹೃದಯ ಬಡಿತ, ಚರ್ಮ ಒಣಗುವುದು, ಮಲಬದ್ಧತೆ, ದೇಹದಲ್ಲಿ ಶಕ್ತಿ ಕಡಿಮೆಯಾಗುವುದು

ಹೈಪರ್‌ಥೈರಾಯ್ಡಿಸಮ್ (Hyperthyroidism): ಈ ಸ್ಥಿತಿಯಲ್ಲಿ ಅಗತ್ಯಕ್ಕಿಂತ ಹೆಚ್ಚು ಹಾರ್ಮೋನ್ ಉತ್ಪತ್ತಿಯಾಗುತ್ತದೆ. ಲಕ್ಷಣಗಳು: ತೂಕ ವೇಗವಾಗಿ ಇಳಿಯುವುದು, ಹೃದಯ ಬಡಿತ ಅಸ್ಥಿರವಾಗುವುದು, ಹೆಚ್ಚು ಆಯಾಸ, ಚಿಂತೆ ಮತ್ತು ಅಶಾಂತಿ, ಸ್ನಾಯು ದುರ್ಬಲತೆ, ನಿದ್ರೆ ಸಮಸ್ಯೆ, ಸಂಧಿ ನೋವು

ತಜ್ಞರ ಪ್ರಕಾರ, ಥೈರಾಯ್ಡ್ ಲಕ್ಷಣಗಳನ್ನು ನಿರ್ಲಕ್ಷಿಸದೆ ಸಮಯಕ್ಕೆ ಪರೀಕ್ಷೆ ಮಾಡಿಸಿಕೊಳ್ಳುವುದು ಅತ್ಯಂತ ಮುಖ್ಯ. ಸರಿಯಾದ ಚಿಕಿತ್ಸೆ ಮತ್ತು ಆರೋಗ್ಯಕರ ಜೀವನಶೈಲಿಯಿಂದ ಈ ಸಮಸ್ಯೆಯನ್ನು ನಿಯಂತ್ರಣದಲ್ಲಿ ಇಡಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬೆಂಗಳೂರಿನಲ್ಲಿ ರಾಮ್ ಚರಣ್ ‘ಪೆದ್ದಿ’ ಸಿನಿಮಾ ಸುದ್ದಿಗೋಷ್ಠಿ; ಲೈವ್ ವಿಡಿಯೋ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಇಂಧನ ಬೆಲೆ ಏರಿಕೆ: ಕೇಂದ್ರ, ರಾಜ್ಯಕ್ಕೆಷ್ಟು ಪಾಲೆಂಬ ಮಾಹಿತಿ ಇಲ್ಲಿದೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ