AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ

ಬಿಕ್ಕಳಿಕೆ ಹೇಳಿ, ಕೇಳಿ ಬರುವಂತದ್ದಲ್ಲ. ಎಲ್ಲೆಂದರಲ್ಲಿ ಬರುವ ಇದು ಸುತ್ತಮುತ್ತಲಿರುವವರ ಮುಂದೆ ಮುಜುಗರ ಉಂಟು ಮಾಡುತ್ತದೆ. ಈ ಸಮಯದಲ್ಲಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಇದು ನಿಲ್ಲದಿದ್ದರೆ, ಎಂಬ ಭಯವೂ ಆರಂಭವಾಗುತ್ತದೆ. ಆದರೆ ಭಯ ಬಿಡಿ. ಇಲ್ಲಿ ನಾವು ಹೇಳಿರುವ ಸರಳ ಸಲಹೆಗಳನ್ನು ಅನುಸರಿಸುವುದರಿಂದ ತಕ್ಷಣ ಬಿಕ್ಕಳಿಕೆ ಬರುವುದನ್ನು ನಿಲ್ಲಿಸಬಹುದು. ಈ ಟೆಕ್ನಿಕ್ ನಿಮಗೆ ಎಲ್ಲರ ಮುಂದೆ ಮುಜುಗರ ಉಂಟು ಮಾಡುವುದನ್ನು ತಡೆಯುತ್ತದೆ. ಹಾಗಾದರೆ ಬಿಕ್ಕಳಿಕೆ ಬಂದಾಗ ಏನು ಮಾಡಬೇಕು ಎಂಬುದನ್ನು ತಿಳಿದುಕೊಳ್ಳಿ.

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ
ಬಿಕ್ಕಳಿಕೆImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Jun 10, 2025 | 8:26 PM

Share

ಬಿಕ್ಕಳಿಕೆ (Hiccup) ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ ಬರಬಹುದು, ಜೊತೆಗೆ ಇದು ಬಂದಾಗ ಸುತ್ತಮುತ್ತಲಿರುವವರು ನಮ್ಮನ್ನು ನೋಡುವುದರಿಂದ ಸಹಜವಾಗಿ ಏನು ಮಾಡಬೇಕು ಎಂಬುದೇ ತಿಳಿಯುವುದಿಲ್ಲ. ಕೆಲವರು ಬಿಕ್ಕಳಿಕೆ ಬಂದಾಗ ತಕ್ಷಣ ನೀರು (Water) ಕುಡಿಯುತ್ತಾರೆ, ಇನ್ನು ಕೆಲವರು ಸಕ್ಕರೆ(Sugar) ಯನ್ನು ಬಾಯಿಗೆ ಹಾಕಿಕೊಳ್ಳುತ್ತಾರೆ. ಹಗಲಿನಲ್ಲಿ ಈ ರೀತಿ ಬಿಕ್ಕಳಿಕೆ ಬಂದರೆ ಪರವಾಗಿಲ್ಲ. ಆದರೆ ರಾತ್ರಿ ಸಮಯದಲ್ಲಿ ಈ ರೀತಿಯಾದಾಗ ಏನು ಮಾಡಬೇಕು? ಅದಕ್ಕೂ ಮೊದಲು ಈ ರೀತಿ ಬಿಕ್ಕಳಿಕೆ ಏಕೆ ಬರುತ್ತದೆ (Hiccups Causes)? ಅದಕ್ಕೆ ಕಾರಣವೇನು? ಇದನ್ನು ಕಡಿಮೆ ಮಾಡಲು ಯಾವ ರೀತಿ ಸಲಹೆಗಳನ್ನು ಪಾಲಿಸಬೇಕು ಎಂಬುದನ್ನು ತಿಳಿದುಕೊಳ್ಳಿ.

ಬಿಕ್ಕಳಿಕೆ ಏಕೆ ಬರುತ್ತೆ ಗೊತ್ತಾ?

ಬಿಕ್ಕಳಿಕೆ ತುಂಬಾ ಸಾಮಾನ್ಯ. ದೇಹದಲ್ಲಿನ ಡಯಾಫ್ರಾಮ್ ಸ್ನಾಯುವಿನ ಸಮಸ್ಯೆಗಳಿಂದ ಅವು ಸಂಭವಿಸುತ್ತವೆ. ಇದು ನಮ್ಮ ಉಸಿರಾಟಕ್ಕೆ ಸಂಬಂಧಿಸಿದ್ದು. ಈ ಸ್ನಾಯು ಇದ್ದಕ್ಕಿದ್ದಂತೆ ಸಂಕುಚಿತಗೊಂಡಾಗ ಬಿಕ್ಕಳಿಕೆ ಉಂಟಾಗುತ್ತದೆ. ಆದರೆ ಬಿಕ್ಕಳಿಕೆ ಬರುವುದಕ್ಕೆ ಇದೊಂದೇ ಕಾರಣವಲ್ಲ. ಬಿಕ್ಕಳಿಕೆಗೆ ಕಂಡುಬರುವುದಕ್ಕೆ ಹಲವು ಕಾರಣಗಳಿವೆ. ಆಹಾರವನ್ನು ಬೇಗನೆ ತಿನ್ನುವುದು ಅಥವಾ ವೇಗವಾಗಿ ನೀರನ್ನು ಕುಡಿಯುವುದರಿಂದ ಹೊಟ್ಟೆಗೆ ಸಾಕಷ್ಟು ಗಾಳಿ ಪ್ರವೇಶಿಸಬಹುದು. ಸೋಡಾ ಮತ್ತು ಬಿಯರ್‌ನಂತಹ ಹೆಚ್ಚು ಕಾರ್ಬೊನೇಟೆಡ್ ಪಾನೀಯಗಳನ್ನು ಕುಡಿಯುವುದರಿಂದಲೂ ಬಿಕ್ಕಳಿಕೆ ಬರಬಹುದು. ಜೊತೆಗೆ ಹೆಚ್ಚು ಹಸಿವಾಗಿದ್ದಾಗ ಒಮ್ಮೆಲೇ ತಿನ್ನುವುದರಿಂದಲೂ ಬಿಕ್ಕಳಿಕೆ ಬರಬಹುದು. ಹೆಚ್ಚುವರಿಯಾಗಿ, ಮಸಾಲೆಯುಕ್ತ ಆಹಾರವನ್ನು ಸೇವಿಸುವುದು, ಧೂಮಪಾನ ಮಾಡುವುದು ಮತ್ತು ಒತ್ತಡ ಅಥವಾ ಆತಂಕದಿಂದ ಬಳಲುವುದು ಸಹ ಬಿಕ್ಕಳಿಗೆ ಕಾರಣವಾಗಬಹುದು.

ಇದನ್ನೂ ಓದಿ: ಮಳೆಗಾಲದಲ್ಲಿ ಕಂಡು ಬರುವ ಸೋಂಕಿನಿಂದ ಮುಕ್ತಿ ಪಡೆಯಬೇಕಾದರೆ ಹಾಲಿಗೆ ಈ ಪುಡಿ ಹಾಕಿ ಕುಡಿಯಿರಿ

ಇದನ್ನೂ ಓದಿ
Image
ಮಲಬದ್ಧತೆಯಿಂದ ಮುಕ್ತಿ ಪಡೆಯಲು ಈ ಎಲೆಯ ರಸ ಸೇವನೆ ಮಾಡಿ ಸಾಕು!
Image
ಇದಕ್ಕೆ ಹೇಳೋದು ವಾರದಲ್ಲಿ ಒಮ್ಮೆಯಾದರೂ ಮಶ್ರೂಮ್ ತಿನ್ನಿ ಅಂತ
Image
ಪಾಪ್‌ಕಾರ್ನ್ vs ಬಾಳೆಹಣ್ಣಿನ ಚಿಪ್ಸ್ ಯಾವುದು ಆರೋಗ್ಯಕರ?
Image
ಮಧುಮೇಹದಿಂದ ಮಲಬದ್ಧತೆವರೆಗೆ ಎಲ್ಲಾ ಸಮಸ್ಯೆಗೂ ಈ ಬಳ್ಳಿಯೇ ಅಮೃತ

ಬಿಕ್ಕಳಿಕೆ ಕಡಿಮೆ ಮಾಡಲು ಇಲ್ಲಿವೆ ಸಲಹೆಗಳು:

  • ಬಿಕ್ಕಳಿಕೆ ಕಡಿಮೆ ಮಾಡಲು ಗಂಟಲಿನಲ್ಲಿ ನೀರನ್ನು ಹಿಡಿದಿಟ್ಟುಕೊಳ್ಳಿ. ಈ ರೀತಿ ಮಾಡುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
  • ತಣ್ಣೀರು ಕುಡಿಯುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
  • ಬಿಕ್ಕಳಿಕೆಯನ್ನು ತ್ವರಿತವಾಗಿ ನಿವಾರಿಸಲು, ಬಾಯಿಗೆ ಸ್ವಲ್ಪ ಸಕ್ಕರೆ ಹಾಕಿ ಅದನ್ನು ನಿಧಾನವಾಗಿ ಅಗಿಯಿರಿ.
  • ಅನ್ನ ತಿನ್ನುವುದರಿಂದ ಬಿಕ್ಕಳಿಕೆ ಕಡಿಮೆಯಾಗುತ್ತದೆ.
  • ಮುಖವನ್ನು ತಣ್ಣೀರಿನಿಂದ ತೊಳೆಯುವುದು, ಹಾಗೆಯೇ ಕೆಲವು ಸೆಕೆಂಡುಗಳ ಕಾಲ ನಿಮ್ಮ ಉಸಿರನ್ನು ಹಿಡಿದಿಟ್ಟುಕೊಳ್ಳುವುದು ಸಹ ಬಿಕ್ಕಳಿಕೆಯನ್ನು ನಿಯಂತ್ರಿಸಬಹುದು.
  • ಬಾಯಿಯಲ್ಲಿ ಐಸ್ ಕ್ಯೂಬ್ ಅನ್ನು ಇಟ್ಟು ನಿಧಾನವಾಗಿ ಅಗಿಯುವುದರಿಂದ ಬಿಕ್ಕಳಿಕೆಯಿಂದ ಪರಿಹಾರ ಸಿಗುತ್ತದೆ.
  • ಬೆಳ್ಳುಳ್ಳಿಯ ಎಸಳು ತಿನ್ನುವುದು ಅಥವಾ ಒಂದು ಚಮಚ ನಿಂಬೆ ರಸವನ್ನು ಸೇವನೆ ಮಾಡುವುದರಿಂದಲೂ ಸಹ ಬಿಕ್ಕಳಿಕೆಯನ್ನು ಕಡಿಮೆ ಮಾಡಬಹುದು.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ