AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips: ಏಕಾಗ್ರತೆ ಸಮಸ್ಯೆ ಕಾಡುತ್ತಿದೆಯೇ? ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್​

ಏಕಾಗ್ರತೆ: ಪ್ರಾಚೀನ ಕಾಲದಿಂದಲೂ ಔಷಧಿಗೆ ಅಶ್ವಗಂಧವನ್ನು ಬಳಸಲಾಗುತ್ತದೆ. ದೈಹಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ.

Health Tips: ಏಕಾಗ್ರತೆ ಸಮಸ್ಯೆ ಕಾಡುತ್ತಿದೆಯೇ? ನೆನಪಿನ ಶಕ್ತಿ ಹೆಚ್ಚಿಸಿಕೊಳ್ಳಲು ಇಲ್ಲಿದೆ ಸಿಂಪಲ್ ಟಿಪ್ಸ್​
ಸಾಂದರ್ಭಿಕ ಚಿತ್ರ
Follow us
TV9 Web
| Updated By: Skanda

Updated on: Jun 28, 2021 | 6:55 AM

ಮರೆವು ಎಂಬುದು ಎಲ್ಲರಿಗೂ ಸಹಜ. ಆದರೆ ಕೆಲವೊಮ್ಮೆ ಅತಿಯಾಗಿ ಎಲ್ಲವನ್ನೂ ಮರೆತು ಬಿಡುತ್ತೇವೆ. ಇಂದು ಮಾಡುವ ಕೆಲಸದ ಪಟ್ಟಿಯಲ್ಲಿ ಮುಖ್ಯವಾಗಿರುವುದೇ ಮರೆತು ಹೋಗುತ್ತದೆ. ವಿದ್ಯಾರ್ಥಿಗಳೆಲ್ಲ ಪರೀಕ್ಷೆಗೆಂದು ರಾತ್ರಿ ಇಡೀ ಕಷ್ಟಪಟ್ಟು ಓದಿರುತ್ತಾರೆ. ಆದರೆ ಪರೀಕ್ಷೆಯ ಹಾಲ್​ನಲ್ಲಿ ಕುಳಿತಾಗ ಎಲ್ಲವೂ ಮರೆತೇ ಹೋಯಿತು ಎಂದು ಹೇಳುವುದನ್ನು ಕೇಳಿಯೇ ಇರುತ್ತೀರಿ. ಹಾಗಾದರೆ ನೆನಪಿನ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದು ಹೇಗೆ ಎಂಬುದರ ಕುರಿತಾಗಿ ತಿಳಿಯೋಣ.

ಮರೆಯಲು ಮುಖ್ಯವಾದ ಕಾರಣವೆಂದರೆ ಏಕಾಗ್ರತೆ ಕೊರತೆ. ಕೆಲವು ವಿಷಯಗಳನ್ನು ನಾವು ಗಮನವಿಟ್ಟು ಆಲಿಸಿಯೇ ಇರುವುದಿಲ್ಲ. ಇದರಿಂದಾಗಿ ವಿಷಯಗಳು ನಮ್ಮಲ್ಲಿ ಮರೆತು ಹೋಗುತ್ತವೆ. ಹಾಗಿರುವಾಗ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವ ಕುರಿತಾಗಿ ಯೋಚಿಸಬೇಕು.

ಒಂದೆಲಗ ಇದೊಂದು ಪ್ರಾಚೀನ ಗಿಡಮೂಲಿಕೆ. ಬ್ರಾಹ್ಮಿ ಅಥವಾ ಒಂದೆಲಗ ಎಂದು ಇದನ್ನು ಕರೆಯುತ್ತಾರೆ. ಸಾವಿರಾರು ವರ್ಷಗಳ ಹಿಂದಿನಿಂದಲೂ ಇದನ್ನು ಔಷಧಿಯಲ್ಲಿ ಬಳಸಲಾಗುತ್ತಿದೆ. ಮೆದುಳಿನ ಕಾರ್ಯವನ್ನು ಸುಧಾರಿಸಲು ಬ್ರಾಹ್ಮಿ ಸಹಾಯ ಮಾಡುತ್ತದೆ. ಮಾನಸಿಕ ಒತ್ತಡ ಮತ್ತು ಆತಂಕವನ್ನು ನಿಭಾಯಿಸುತ್ತದೆ. ಮಾನಸಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಒಂದೆಲಗ ಸಹಾಯ ಮಾಡುತ್ತದೆ. ನೀವು ಈ ಗಿಡಮೂಲಿಕೆಯ ತಂಬುಳಿ ಅಥವಾ ಕಷಾಯ ಮಾಡಿ ಸೇವಿಸಬಹುದು. ಮಕ್ಕಳಿಂದ ಹಿಡಿದು ವೃದ್ಧರವರೆಗೂ ಇದರ ಪ್ರಯೋಜನ ಪಡೆಯಬಹುದು. ಆರೋಗ್ಯಕ್ಕೆ ಯಾವುದೇ ರೀತಿಯ ಹಾನಿಯಿಲ್ಲ.

ಅಶ್ವಗಂಧ ಪ್ರಾಚೀನ ಕಾಲದಿಂದಲೂ ಔಷಧಿಗೆ ಅಶ್ವಗಂಧವನ್ನು ಬಳಸಲಾಗುತ್ತದೆ. ದೈಹಿಕ ಆರೋಗ್ಯವನ್ನು ಸುಧಾರಿಸುವುದರ ಜತೆಗೆ ಮಾನಸಿಕ ಆರೋಗ್ಯವನ್ನೂ ಸುಧಾರಿಸುತ್ತದೆ. ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಇದು ಸಹಾಯ ಮಾಡುತ್ತದೆ. ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹೊಂದಿದೆ. ಹಾಲು, ನೀರು, ಜೇನುತುಪ್ಪದ ಜತೆ ಬೆರೆಸಿ ಇದನ್ನು ಸೇವಿಸಬಹುದಾಗಿದೆ.

ತುಳಸಿ ಇತರ ಗಿಡ ಮೂಲಿಕೆಗಳಿಗಿಂತಲೂ ತುಳಸಿ ಅತ್ಯುತ್ತಮ ಔಷಧೀಯ ಗುಣವನ್ನು ಹೊಂದಿದೆ ಎಂದು ಪರಿಗಣಿಸಲಾಗಿದೆ. ಆಯುರ್ವೇದದಲ್ಲಿ ಆರೋಗ್ಯ ಪ್ರಯೋಜನಗಳಿಗೆ ಹೆಸರುವಾಸಿಯಾಗಿದೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ, ಕ್ಯಾನ್ಸರ್​ ವಿರೋಧಿ ಗುಣಗಳನ್ನು ಹೊಂದಿದೆ. ಜತೆಗೆ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯ ಮಾಡುತ್ತವೆ. 5 ರಿಂದ 10 ತುಳಸಿ ಎಲೆ, 5 ಬಾದಾಮಿ, 5 ಕರಿಮೆಣಸು ಮತ್ತು ಜೇನುತುಪ್ಪವನ್ನು ಒಟ್ಟೆಗೆ ಸೇರಿಸಿ ಮಿಶ್ರಣ ಮಾಡಿ ಸೇವಿಸಬಹುದು. ಇದರಿಂದ ನಿಮ್ಮ ಏಕಾಗ್ರತೆ ಶಕ್ತಿಯನ್ನು ಹೆಚ್ಚಿಸಿಕೊಳ್ಳಬಹುದು.

ಧ್ಯಾನ ನಿಯಮಿತ ಧ್ಯಾನದ ಮೂಲಕ ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಬಹುದಾಗಿದೆ. ಮನಸ್ಸು ಶಾಂತವಾಗಿರಲು ಇದು ಸಹಾಯ ಮಾಡುತ್ತವೆ. ಧ್ಯಾನವು ಒತ್ತಡವನ್ನು ಕಡಿಮೆ ಮಾಡುತ್ತವೆ. ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳಲು ಸಹಾಯಕವಾಗಿದೆ.

ಇದನ್ನೂ ಓದಿ:

ಪರೀಕ್ಷೆಯ ಸನಿಹದಲ್ಲಿರುವ ನಿಮ್ಮ ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಆಹಾರ ಪದ್ಧತಿ ಮತ್ತು ಜೀವನಶೈಲಿ ಸಹಕಾರಿ

Post Covid: ದೀರ್ಘಕಾಲಿಕ ಕೊವಿಡ್​ ಬಳಿಕ ಅನುಸರಿಸಬಹುದಾದ ವ್ಯಾಯಾಮ ಭಂಗಿಗಳು

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ
ಪೊಲೀಸ್ ಠಾಣೆಗಳಿಗೆ ಕೊಳ್ಳಿಯಿಡುವ ರಾಜ್ಯದಲ್ಲಿ ಕಾನೂನು ಎಲ್ಲಿರುತ್ತೆ? ಶಾಸಕ