ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!

ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತವೆ. ಆದ್ದರಿಂದ ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ಕೆಲವು ತಪ್ಪುಗಳು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!
Heart attackImage Credit source: Pinterest
Follow us
|

Updated on: Jan 05, 2024 | 7:50 PM

ಚಳಿಗಾಲದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳು ಕಂಡುಬರುತ್ತದೆ. ಇದರೊಂದಿಗೆ ಹೃದ್ರೋಗಿಗಳಿಗೂ ತೊಂದರೆ ಹೆಚ್ಚು. ಏಕೆಂದರೆ ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ. ಇದರ ಹಿಂದೆ ಅನೇಕ ಕಾರಣಗಳಿವೆ, ಉದಾಹರಣೆಗೆ ಜನರು ಜೀರ್ಣಿಸಿಕೊಳ್ಳಲು ಕಷ್ಟಪಡುತ್ತಾರೆ. ಚಳಿಗಾಲದಲ್ಲಿ ಕಡಿಮೆ ದೈಹಿಕ ಚಟುವಟಿಕೆ ಇರುತ್ತದೆ ಮತ್ತು ರಕ್ತ ಅಪಧಮನಿಗಳು ಕಿರಿದಾಗುತ್ತವೆ. ಇದರಿಂದಾಗಿ ಹೃದಯಕ್ಕೆ ರಕ್ತವನ್ನು ಪಂಪ್ ಮಾಡಲು ಎರಡು ಪಟ್ಟು ಹೆಚ್ಚು ಶಕ್ತಿ ಬೇಕಾಗುತ್ತದೆ. ಇದರಿಂದಾಗಿ ರಕ್ತದೊತ್ತಡವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಇದರೊಂದಿಗೆ ಚಳಿಗಾಲದಲ್ಲಿ ಅತಿಯಾದ ವ್ಯಾಯಾಮ ಕೂಡ ಅಪಾಯಕಾರಿಯಾಗಿದೆ.

ತಜ್ಞರ ಪ್ರಕಾರ, ಹೆಚ್ಚಿನ ಹೃದಯಾಘಾತವು ಬೆಳಿಗ್ಗೆ 4 ರಿಂದ 10 ರವರೆಗೆ ಸಂಭವಿಸುತ್ತದೆ, ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ಎಪಿನ್‌ಫ್ರಿನ್, ನಾರ್‌ಪೈನ್ಫ್ರಿನ್ ಮತ್ತು ಕಾರ್ಟಿಸೋಲ್‌ನಂತಹ ಹಾರ್ಮೋನ್‌ಗಳ ಮಟ್ಟ ಹೆಚ್ಚಾಗುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ. ಇದು ದೇಹದಲ್ಲಿ ಆಮ್ಲಜನಕದ ಕೊರತೆಯನ್ನು ಹೆಚ್ಚಿಸುತ್ತದೆ. ಇದು ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್ಚಿನ ಜನರು ಈ ಸಮಯದಲ್ಲಿ ವ್ಯಾಯಾಮವನ್ನೂ ಮಾಡುತ್ತಾರೆ. ಈ ಕಾರಣದಿಂದಾಗಿ ಅವರ ಹೃದಯ ಬಡಿತಗಳು ಈಗಾಗಲೇ ತುಂಬಾ ವೇಗವಾಗಿರುತ್ತವೆ, ಅಂತಹ ಪರಿಸ್ಥಿತಿಯಲ್ಲಿ ಹೃದಯದ ಮೇಲೆ ಎರಡು ಬಾರಿ ದಾಳಿ ಉಂಟಾಗುತ್ತದೆ, ಅದು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: ಕೂದಲು ಸ್ಟ್ರೈಟ್ನಿಂಗ್ ಮಾಡಿಸುವುದು ಗರ್ಭಾಶಯದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ!

ಬಹುತೇಕ ಯುವಕರು ಹಾಸಿಗೆ ಬಿಟ್ಟ ತಕ್ಷಣ ನೇರವಾಗಿ ಜಿಮ್‌ಗೆ ಹೋಗಿ ವ್ಯಾಯಾಮ ಮಾಡುವುದನ್ನು ನೀವು ನೋಡಿರಬಹುದು. ಆದರೆ ಎದ್ದ ತಕ್ಷಣ ವ್ಯಾಯಾಮ ಮಾಡುವುದು ಸರಿಯಲ್ಲ ಎಂದು ತಜ್ಞರು ಹೇಳುತ್ತಾರೆ. ನೀವು ಬೆಳಿಗ್ಗೆ ಎದ್ದ ನಂತರ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಬೇಕು, ಉಗುರು ಬೆಚ್ಚಗಿನ ನೀರನ್ನು ಕುಡಿಯಬೇಕು ಮತ್ತು ಸ್ವಲ್ಪ ಸಮಯದ ನಂತರ ಆರಾಮವಾಗಿ ವ್ಯಾಯಾಮವನ್ನು ಪ್ರಾರಂಭಿಸಬೇಕು. ಹಾಗೆಯೇ ವ್ಯಾಯಾಮ ಆರಂಭಿಸುವ ಮುನ್ನ ಸ್ವಲ್ಪ ವಾರ್ಮ್ ಅಪ್ ಮಾಡಬೇಕು ಮತ್ತು ಏಕಾಏಕಿ ವ್ಯಾಯಾಮ ಮಾಡಬಾರದು. ಆದ್ದರಿಂದ, ಚಳಿಗಾಲದಲ್ಲಿ ಈ ಸಣ್ಣ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದರಿಂದ, ಹೃದಯಾಘಾತದ ಅಪಾಯವನ್ನು ತಪ್ಪಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ