AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!

ಚಳಿಗಾಲದಲ್ಲಿ ಹೃದಯಾಘಾತದ ಪ್ರಕರಣಗಳು ಹೆಚ್ಚಾಗಿ ಸಂಭವಿಸುತ್ತವೆ. ಆದ್ದರಿಂದ ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ಕೆಲವು ತಪ್ಪುಗಳು ಹೃದಯಾಘಾತಕ್ಕೆ ಕಾರಣವಾಗಬಹುದು ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಾರೆ.

ಚಳಿಗಾಲದಲ್ಲಿ ವ್ಯಾಯಾಮ ಮಾಡುವಾಗ ನೀವು ಮಾಡುವ ತಪ್ಪು ಹೃದಯಾಘಾತಕ್ಕೆ ಕಾರಣವಾಗಬಹುದು!
Heart attackImage Credit source: Pinterest
ಅಕ್ಷತಾ ವರ್ಕಾಡಿ
|

Updated on: Jan 05, 2024 | 7:50 PM

Share

ಚಳಿಗಾಲದಲ್ಲಿ ಆರೋಗ್ಯಕ್ಕೆ ಸಂಬಂಧಿಸಿದಂತೆ ಸಾಕಷ್ಟು ಸಮಸ್ಯೆಗಳು ಕಂಡುಬರುತ್ತದೆ. ಇದರೊಂದಿಗೆ ಹೃದ್ರೋಗಿಗಳಿಗೂ ತೊಂದರೆ ಹೆಚ್ಚು. ಏಕೆಂದರೆ ಚಳಿಗಾಲದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತದೆ. ಇದರ ಹಿಂದೆ ಅನೇಕ ಕಾರಣಗಳಿವೆ, ಉದಾಹರಣೆಗೆ ಜನರು ಜೀರ್ಣಿಸಿಕೊಳ್ಳಲು ಕಷ್ಟಪಡುತ್ತಾರೆ. ಚಳಿಗಾಲದಲ್ಲಿ ಕಡಿಮೆ ದೈಹಿಕ ಚಟುವಟಿಕೆ ಇರುತ್ತದೆ ಮತ್ತು ರಕ್ತ ಅಪಧಮನಿಗಳು ಕಿರಿದಾಗುತ್ತವೆ. ಇದರಿಂದಾಗಿ ಹೃದಯಕ್ಕೆ ರಕ್ತವನ್ನು ಪಂಪ್ ಮಾಡಲು ಎರಡು ಪಟ್ಟು ಹೆಚ್ಚು ಶಕ್ತಿ ಬೇಕಾಗುತ್ತದೆ. ಇದರಿಂದಾಗಿ ರಕ್ತದೊತ್ತಡವು ಸಾಮಾನ್ಯವಾಗಿ ಹೆಚ್ಚಾಗುತ್ತದೆ. ಇದರೊಂದಿಗೆ ಚಳಿಗಾಲದಲ್ಲಿ ಅತಿಯಾದ ವ್ಯಾಯಾಮ ಕೂಡ ಅಪಾಯಕಾರಿಯಾಗಿದೆ.

ತಜ್ಞರ ಪ್ರಕಾರ, ಹೆಚ್ಚಿನ ಹೃದಯಾಘಾತವು ಬೆಳಿಗ್ಗೆ 4 ರಿಂದ 10 ರವರೆಗೆ ಸಂಭವಿಸುತ್ತದೆ, ಏಕೆಂದರೆ ಈ ಸಮಯದಲ್ಲಿ ದೇಹದಲ್ಲಿ ಎಪಿನ್‌ಫ್ರಿನ್, ನಾರ್‌ಪೈನ್ಫ್ರಿನ್ ಮತ್ತು ಕಾರ್ಟಿಸೋಲ್‌ನಂತಹ ಹಾರ್ಮೋನ್‌ಗಳ ಮಟ್ಟ ಹೆಚ್ಚಾಗುವುದರಿಂದ ರಕ್ತದೊತ್ತಡ ಹೆಚ್ಚಾಗುತ್ತದೆ. ಇದು ದೇಹದಲ್ಲಿ ಆಮ್ಲಜನಕದ ಕೊರತೆಯನ್ನು ಹೆಚ್ಚಿಸುತ್ತದೆ. ಇದು ನೇರವಾಗಿ ಹೃದಯದ ಮೇಲೆ ಪರಿಣಾಮ ಬೀರುತ್ತದೆ ಮತ್ತು ಹೆಚ್ಚಿನ ಜನರು ಈ ಸಮಯದಲ್ಲಿ ವ್ಯಾಯಾಮವನ್ನೂ ಮಾಡುತ್ತಾರೆ. ಈ ಕಾರಣದಿಂದಾಗಿ ಅವರ ಹೃದಯ ಬಡಿತಗಳು ಈಗಾಗಲೇ ತುಂಬಾ ವೇಗವಾಗಿರುತ್ತವೆ, ಅಂತಹ ಪರಿಸ್ಥಿತಿಯಲ್ಲಿ ಹೃದಯದ ಮೇಲೆ ಎರಡು ಬಾರಿ ದಾಳಿ ಉಂಟಾಗುತ್ತದೆ, ಅದು ಹೃದಯಾಘಾತಕ್ಕೆ ಕಾರಣವಾಗುತ್ತದೆ.

ಇದನ್ನೂ ಓದಿ: ಕೂದಲು ಸ್ಟ್ರೈಟ್ನಿಂಗ್ ಮಾಡಿಸುವುದು ಗರ್ಭಾಶಯದ ಕ್ಯಾನ್ಸರ್ ಅಪಾಯವನ್ನು ಹೆಚ್ಚಿಸುತ್ತದೆ!

ಬಹುತೇಕ ಯುವಕರು ಹಾಸಿಗೆ ಬಿಟ್ಟ ತಕ್ಷಣ ನೇರವಾಗಿ ಜಿಮ್‌ಗೆ ಹೋಗಿ ವ್ಯಾಯಾಮ ಮಾಡುವುದನ್ನು ನೀವು ನೋಡಿರಬಹುದು. ಆದರೆ ಎದ್ದ ತಕ್ಷಣ ವ್ಯಾಯಾಮ ಮಾಡುವುದು ಸರಿಯಲ್ಲ ಎಂದು ತಜ್ಞರು ಹೇಳುತ್ತಾರೆ. ನೀವು ಬೆಳಿಗ್ಗೆ ಎದ್ದ ನಂತರ ಸ್ವಲ್ಪ ಸಮಯ ವಿಶ್ರಾಂತಿ ಪಡೆಯಬೇಕು, ಉಗುರು ಬೆಚ್ಚಗಿನ ನೀರನ್ನು ಕುಡಿಯಬೇಕು ಮತ್ತು ಸ್ವಲ್ಪ ಸಮಯದ ನಂತರ ಆರಾಮವಾಗಿ ವ್ಯಾಯಾಮವನ್ನು ಪ್ರಾರಂಭಿಸಬೇಕು. ಹಾಗೆಯೇ ವ್ಯಾಯಾಮ ಆರಂಭಿಸುವ ಮುನ್ನ ಸ್ವಲ್ಪ ವಾರ್ಮ್ ಅಪ್ ಮಾಡಬೇಕು ಮತ್ತು ಏಕಾಏಕಿ ವ್ಯಾಯಾಮ ಮಾಡಬಾರದು. ಆದ್ದರಿಂದ, ಚಳಿಗಾಲದಲ್ಲಿ ಈ ಸಣ್ಣ ವಿಷಯಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳುವುದರಿಂದ, ಹೃದಯಾಘಾತದ ಅಪಾಯವನ್ನು ತಪ್ಪಿಸಬಹುದು.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್