AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು?

ಚಿಕ್ಕ ಮಕ್ಕಳು ಆಟವಾಡುವಾಗ ಹೆಚ್ಚಾಗಿ ಬೀಳುತ್ತಾರೆ. ಇದು ಬಹಳ ಸಾಮಾನ್ಯ. ಆದರೆ ಪದೇ ಪದೇ ಬೀಳುವುದು, ಬಿದ್ದು ತಲೆಯ ಭಾಗಕ್ಕೆ ಗಾಯ ಅಥವಾ ನೋವಾಗುವುದು ಮಗುವಿನ ಮೆದುಳಿನ ಮೇಲೆ ಪರಿಣಾಮ ಬೀರುತ್ತದೆಯೇ ಎಂಬುದನ್ನು ತಿಳಿದುಕೊಳ್ಳಬೇಕಾಗಿದೆ. ಹಾಗಾದರೆ ಪದೇಪದೇ ಬೀಳುವುದರಿಂದ ಮೆದುಳಿಗೆ ಯಾವ ರೀತಿಯ ಸಮಸ್ಯೆಯಾಗುತ್ತದೆ, ಈ ರೀತಿಯಾದಾಗ ವೈದ್ಯರ ಸಂಪರ್ಕ ಮಾಡಬೇಕಾಗುತ್ತದೆಯೇ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಮಕ್ಕಳು ಪದೇಪದೇ ಬೀಳುವುದರಿಂದ ಮೆದುಳಿಗೆ ಅಪಾಯವಾಗುತ್ತದೆಯೇ? ವೈದ್ಯರನ್ನು ಯಾವಾಗ ಸಂಪರ್ಕ ಮಾಡಬೇಕು?
Toddler Falling OftenImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: May 04, 2026 | 7:14 PM

Share

ಮಕ್ಕಳು ಆಟವಾಡುವಾಗ ಬೀಳುವುದು ಸಾಮಾನ್ಯ ಸಂಗತಿಯೇ ಸರಿ. ಅವರು ಹೊಸ ಕೌಶಲ್ಯಗಳನ್ನು ಕಲಿಯುವ ಹಂತದಲ್ಲಿರುವುದರಿಂದ ಈ ರೀತಿ ಆಗುವುದು ಸಹಜ. ಆದರೆ ಮಗು ಪದೇಪದೇ ಬೀಳುತ್ತಿರುವುದನ್ನು ಪೋಷಕರು ಗಮನಿಸಿದರೆ, ಅದು ಕೇವಲ ಆಟದ ಭಾಗವೇ ಅಥವಾ ಆರೋಗ್ಯ ಸಮಸ್ಯೆಯ ಸೂಚನೆಯೇ ಎಂಬುದನ್ನು ಅರಿಯುವುದು ಅಗತ್ಯವಾಗಿದೆ. ಹೌದು, ತಜ್ಞರು ಹೇಳುವ ಪ್ರಕಾರ, ಸಾಮಾನ್ಯವಾಗಿ ಬಿದ್ದಾಗ ಸಣ್ಣಪುಟ್ಟ ಗಾಯವಾಗುವುದರಿಂದ ಯಾವುದೇ ತೊಂದರೆಯಿಲ್ಲ ಇದರಿಂದ ಗಂಭೀರ ಸಮಸ್ಯೆ ಉಂಟಾಗುವುದಿಲ್ಲ. ಆದರೆ ಮಗು ತಲೆ ಭಾಗಕ್ಕೆ ಆಗಾಗ ಹೊಡೆತ ಬೀಳುತ್ತಿದ್ದರೆ ಅಥವಾ ಬಿದ್ದಾಗ ತಲೆಯ ಭಾಗಕ್ಕೆ ಹೆಚ್ಚು ಪೆಟ್ಟಾಗುತ್ತಿದ್ದರೆ ಅದನ್ನು ನಿರ್ಲಕ್ಷ್ಯ ಮಾಡಬಾರದು. ಪದೇ ಪದೇ ತಲೆಯ ಭಾಗದಲ್ಲಿ ಗಾಯ ಅಥವಾ ನೋವು ಕಂಡುಬಂದರೆ ಅದು ಮೆದುಳಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಆದ್ದರಿಂದ ಪ್ರತಿಯೊಂದು ಘಟನೆಯನ್ನು ಗಮನದಿಂದ ಪರಿಗಣಿಸುವುದು ಮುಖ್ಯವಾಗಿದೆ. ಹಾಗಾದರೆ ಪದೇಪದೇ ಬೀಳುವುದರಿಂದ ಮೆದುಳಿಗೆ (Brain Health) ಯಾವ ರೀತಿಯ ಸಮಸ್ಯೆಯಾಗುತ್ತದೆ, ಈ ರೀತಿಯಾದಾಗ ವೈದ್ಯರ ಸಂಪರ್ಕ ಮಾಡಬೇಕಾಗುತ್ತದೆಯೇ ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಎಚ್ಚರಿಕೆ ಸೂಚನೆಗಳು ಯಾವುವು?

ಮಗು ಯಾವುದೇ ಸ್ಪಷ್ಟ ಕಾರಣವಿಲ್ಲದೆ ಪದೇಪದೇ ಬೀಳುತ್ತಿದ್ದರೆ ಅದು ಗಮನಿಸಬೇಕಾದ ವಿಷಯ. ಜೊತೆಗೆ ತಲೆಸುತ್ತು, ದೌರ್ಬಲ್ಯ, ನಡೆಯುವಲ್ಲಿ ಅಸ್ಥಿರತೆ ಅಥವಾ ಸಮತೋಲನ ಕಳೆದುಕೊಳ್ಳುವ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಬೇಕು. ಬಿದ್ದ ನಂತರ ಮಗು ಅಸಹಜವಾಗಿ ಮೌನವಾಗುವುದು, ಹೆಚ್ಚು ಅಳುವುದು ಅಥವಾ ವರ್ತನೆಯಲ್ಲಿ ಬದಲಾವಣೆ ಕಾಣಿಸುವುದೂ ಕೂಡ ಎಚ್ಚರಿಕೆ ಸೂಚನೆಗಳಾಗಬಹುದು.

ಇದನ್ನೂ ಓದಿ: ಈ ಅಭ್ಯಾಸಗಳು ನಿಮ್ಮ ಮೆದುಳಿಗೆ ಹಾನಿ ಮಾಡಬಹುದು!

ಯಾವಾಗ ವೈದ್ಯರನ್ನು ಸಂಪರ್ಕಿಸಬೇಕು?

ಮಗು ಪದೇಪದೇ ಬೀಳುತ್ತಿದ್ದು ಪ್ರತೀ ಸಲ ತಲೆಗೆ ಗಾಯವಾಗುತ್ತಿದ್ದರೆ ಅಥವಾ ಬಿದ್ದ ಬಳಿಕ ವಾಂತಿ, ತೀವ್ರ ತಲೆನೋವು ಮುಂತಾದ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯಕೀಯ ಸಹಾಯ ಅಗತ್ಯ. ಜೊತೆಗೆ ಮಗು ನಡೆಯುವ ರೀತಿಯಲ್ಲಿ ಬದಲಾವಣೆ ಕಂಡುಬಂದರೂ ತಜ್ಞರ ಸಲಹೆ ಪಡೆಯಬೇಕು. ಮಕ್ಕಳು ಬೀಳುವುದು ಸಾಮಾನ್ಯವಾದರೂ, ಪದೇಪದೇ ಬೀಳುವುದು ಅಥವಾ ತಲೆಗಾಯಗಳಾಗುವುದು ಗಂಭೀರ ಸಮಸ್ಯೆಯಾಗಿರಬಹುದು. ಪೋಷಕರು ಎಚ್ಚರಿಕೆಯಿಂದ ಗಮನಿಸಿ, ಅಗತ್ಯವಿದ್ದರೆ ಸಮಯಕ್ಕೆ ಸರಿಯಾಗಿ ವೈದ್ಯರನ್ನು ಸಂಪರ್ಕಿಸುವುದು ಮಗುವಿನ ಆರೋಗ್ಯ ಕಾಪಾಡಲು ಸಹಕಾರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
ರೀಷ್ಮಾ ನಾಣಯ್ಯಗಿಂತ ಒಳ್ಳೆ ಡ್ಯಾನ್ಸರ್ ಇಲ್ಲ ಬಿಡಿ, ವಿಡಿಯೋ ನೋಡಿ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!