AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದ ಮಕ್ಕಳಲ್ಲಿ ಟೊಮೆಟೊ ಜ್ವರ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ

ಕೊರೊನಾ ಸೋಂಕಿಗೂ, ಟೊಮೆಟೊ ಫ್ಲೂ ಎನ್ನಲಾಗುವ ವೈರಲ್ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ.

ಕೇರಳದ ಮಕ್ಕಳಲ್ಲಿ ಟೊಮೆಟೊ ಜ್ವರ: ಕರ್ನಾಟಕ-ಕೇರಳ ಗಡಿಯಲ್ಲಿ ಕಟ್ಟೆಚ್ಚರಕ್ಕೆ ಸೂಚನೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:May 12, 2022 | 11:59 AM

Share

ಬೆಂಗಳೂರು: ಕೇರಳದ ಪುಟ್ಟ ಮಕ್ಕಳಲ್ಲಿ ಟೊಮೆಟೊ ಜ್ವರ (Tomato Flu) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕರ್ನಾಟಕದ ಕೇರಳ ಗಡಿಯಲ್ಲಿ (Karnataka Kerala Border) ಕಟ್ಟೆಚ್ಚರ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇರಳದ 80ಕ್ಕೂ ಹೆಚ್ಚು ಪುಟ್ಟಮಕ್ಕಳಲ್ಲಿ ಟೊಮೆಟೊ ಜ್ವರ ಪತ್ತೆಯಾಗಿದೆ. ಕೊರೊನಾ ಸೋಂಕಿಗೂ, ಟೊಮೆಟೊ ಫ್ಲೂ ಎನ್ನಲಾಗುವ ವೈರಲ್ ಜ್ವರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ತಜ್ಞರು ಸ್ಪಷ್ಟಪಡಿಸಿದ್ದಾರೆ. ಟೊಮೆಟೊ ಫ್ಲೂ ಮೊದಲಿನಿಂದಲೂ ಇದ್ದ ಕಾಯಿಲೆ. ಅದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಕೇರಳ ರಾಜ್ಯದ ಅರ್ಯಂಕಾರು, ಅಂಚಲ್ ಹಾಗೂ ನೆಡುವತೂರ್​ನಲ್ಲಿ ಟೊಮೆಟೊ ವೈರಾಣು ಸೋಂಕು ಪತ್ತೆಯಾಗಿದೆ. ಇದು ಸಾಮಾನ್ಯವಾಗಿ 5 ವರ್ಷ ವಯಸ್ಸಿನೊಳಗಿನ ಮಕ್ಕಳಲ್ಲಿ ಕಂಡುಬರುವ ಸಮಸ್ಯೆ. ಚರ್ಮದ ತುರಿಕೆ, ಕೆಂಪಾಗುವುದು, ನೀರಡಿಕೆ ಈ ರೋಗದ ಲಕ್ಷಣಗಳು. ತೀವ್ರ ಜ್ವರ, ಮೈ ಕೈ ನೋವು, ಕೀಲು ನೋವು, ಆಯಾಸವೂ ಕಂಡುಬರುತ್ತದೆ. ಚರ್ಮದ ಮೇಲೆ‌ ಕೆಂಪು‌ ಗುಳ್ಳೆಗಳು ಕೂಡ ಉಂಟಾಗುತ್ತವೆ.

ಕೇರಳದ ಗಡಿಯಲ್ಲಿರುವ ಮಂಗಳೂರು, ಉಡುಪಿ, ಕೊಡಗು, ಚಾಮರಾಜನಗರ ಹಾಗೂ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಈ ಜಿಲ್ಲೆಗಳಿಗೆ ಕೇರಳದಿಂದ ಆಗಮಿಸುವ ಪ್ರಯಾಣಿಕರಲ್ಲಿ ರೋಗ ಲಕ್ಷಣಗಳಿರುವ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲಾಗುತ್ತಿದೆ. ಗಡಿ ಜಿಲ್ಲೆಗಳ ಆಸ್ಪತ್ರೆಗಳಲ್ಲಿರುವ ಹೊರರೋಗಿ ವಿಭಾಗಗಳಲ್ಲಿ ಈ ರೋಗ ಲಕ್ಷಣ ಕಂಡುಬರುವ ಮಕ್ಕಳ ಬಗ್ಗೆ ಕೂಡಲೇ ಮಾಹಿತಿ ನೀಡಲು ಆರೋಗ್ಯ ಇಲಾಖೆಯ ಆಯುಕ್ತ ಡಿ.ರಣದೀಪ್ ಸೂಚನೆ ನೀಡಿದ್ದಾರೆ.

ತಮಿಳುನಾಡು ಆರೋಗ್ಯ ಇಲಾಖೆಯೂ ಇದೇ ಮಾದರಿಯ ಕಟ್ಟೆಚ್ಚರದ ಆದೇಶ ಹೊರಡಿಸಿದ್ದು ಕೇರಳದಿಂದ ಬರುವ ಪ್ರಯಾಣಿಕರ ಜೊತೆಗಿರುವ ಮಕ್ಕಳನ್ನು ತಪಾಸಣೆಗೆ ಒಳಪಡಿಸಲು ನಿರ್ಧರಿಸಿದೆ. ಪ್ರತಿ ಜಿಲ್ಲೆಯಲ್ಲಿಯೂ ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಸಿಬ್ಬಂದಿಯ ಜಂಟಿ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಮೂರು ಪಾಳಿಗಳಲ್ಲಿ ಕಾರ್ಯನಿರ್ವಹಿಸುತ್ತಿವೆ.

ಟೊಮೆಟೊ ಜ್ವರದ ಕೆಲವು ಪ್ರಮುಖ ಲಕ್ಷಣಗಳು – ವಿಪರೀತ ಜ್ವರ, ನಿರ್ಜಲೀಕರಣ, ದದ್ದುಗಳು, – ಚರ್ಮದ ತುರಿಕೆ, ಕೈ ಮತ್ತು ಕಾಲುಗಳ ಚರ್ಮದ ಬಣ್ಣವೂ ಬದಲು – ಗುಳ್ಳೆಗಳು, ಕಿಬ್ಬೊಟ್ಟೆಯ ಸೆಳೆತ, ವಾಕರಿಕೆ, ವಾಂತಿ – ಅತಿಸಾರ, ಸ್ರವಿಸುವ ಮೂಗು, ಕೆಮ್ಮು, ಸೀನು, – ಆಯಾಸ ಮತ್ತು ದೇಹದಲ್ಲಿ ನೋವು

ಮುನ್ನೆಚ್ಚರಿಕೆ ಮತ್ತು ಚಿಕಿತ್ಸೆ ಟೊಮೆಟೊ ಫ್ಲೂ ಕುರಿತು ಮಾಹಿತಿ ನೀಡಿರುವ ಡಾ.ಅರುಣ, ‘ಇದು ತನ್ನಿಂತಾನೆ ಕಡಿಮೆಯಾಗುವ ಸೋಂಕು. ಯಾವುದೇ ನಿರ್ದಿಷ್ಟ ಔಷಧಿ ಇಲ್ಲ’ ಎಂದು ಹೇಳಿದ್ದಾರೆ. ‘ಇದು ವೇಗವಾಗಿ ಹರಡುವ ಸೋಂಕಾಗಿರುವ ಕಾರಣ ಟೊಮೆಟೊ ಫ್ಲೂ ಬಂದವರನ್ನು ಪ್ರತ್ಯೇಕವಾಗಿ ಇರಿಸಬೇಕಾಗುತ್ತದೆ. ಸೋಂಕಿನಿಂದ ಉಂಟಾಗುವ ದದ್ದುಗಳನ್ನು ಕೆರೆದುಕೊಳ್ಳಲು ಮಕ್ಕಳಿಗೆ ಬಿಡಬಾರದು. ಸೋಂಕಿತರ ಬಟ್ಟೆ ಮತ್ತು ಅವರು ಬಳಸುವ ಪಾತ್ರೆಗಳನ್ನು ಸರಿಯಾದ ರೀತಿ ಸ್ವಚ್ಛಗೊಳಿಸಬೇಕು. ದ್ರವಾಹಾರ ಸೇವನೆಯಿಂದ ನಿರ್ಜಲೀಕರಣದ ಸಮಸ್ಯೆ ಕಡಿಮೆಯಾಗುತ್ತದೆ. ಸೋಂಕಿನ ಲಕ್ಷಣ ಆಧರಿಸಿ ವೈದ್ಯರು ಚಿಕಿತ್ಸೆ ನಿರ್ಧರಿಸುತ್ತಾರೆ’ ಎಂದು ಹೇಳಿದ್ದಾರೆ.

ಆರೋಗ್ಯ ಸಂಬಂಧಿತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:59 am, Thu, 12 May 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ