AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು
ಟೊಮೆಟೋ
ನಯನಾ ರಾಜೀವ್
|

Updated on: Mar 14, 2023 | 9:00 AM

Share

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಫೈಬರ್ ಮತ್ತು ವಿಟಮಿನ್ ಸಿ ಇದರಲ್ಲಿ ಕಂಡುಬರುತ್ತದೆ. ಅದಕ್ಕಾಗಿಯೇ ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಆದರೆ ನೀವು ಟೊಮೆಟೊವನ್ನು ಅತಿಯಾಗಿ ಸೇವಿಸಿದರೆ, ನಿಮ್ಮ ಆರೋಗ್ಯವು ಹದಗೆಡಬಹುದು.

ಏನೇನು ಅನನುಕೂಲಗಳಿವೆ ಎಂಬುದನ್ನು ಇಲ್ಲಿ ನೋಡೋಣ ಆ್ಯಸಿಡಿಟಿ ಸಮಸ್ಯೆ ಟೊಮೆಟೋ ಹೆಚ್ಚು ತಿಂದರೆ ಹೊಟ್ಟೆಯಲ್ಲಿ ಆ್ಯಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಇದರಲ್ಲಿ ಆ್ಯಸಿಡಿಕ್ ಪ್ರಮಾಣ ಹೆಚ್ಚಿದ್ದು, ಇದರಿಂದ ಅಸಿಡಿಟಿ ಸಮಸ್ಯೆ ಶುರುವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈಗಾಗಲೇ ಆ್ಯಸಿಡಿಟಿ ಸಮಸ್ಯೆ ಇರುವವರು ಇದನ್ನು ಸೇವಿಸಬಾರದು.

ಕಿಡ್ನಿ ಕಲ್ಲು ಟೊಮೆಟೋ ಸೇವನೆಯಿಂದ ಕಿಡ್ನಿ ಕಲ್ಲಿನ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಟೊಮೆಟೋದಲ್ಲಿ ಕಂಡುಬರುವ ಬೀಜಗಳು ಸುಲಭವಾಗಿ ಮೂತ್ರಪಿಂಡವನ್ನು ತಲುಪುತ್ತವೆ ಮತ್ತು ಕಲ್ಲುಗಳನ್ನು ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಹೆಚ್ಚಿನ ಟೊಮೆಟೋಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅದಕ್ಕಾಗಿಯೇ ಟೊಮೆಟೋವನ್ನು ಅತಿಯಾಗಿ ಸೇವಿಸಬಾರದು.

ಎದೆಯುರಿ ಟೊಮೆಟೋಗಳ ಅತಿಯಾದ ಸೇವನೆಯು ಸಹ ಎದೆಯುರಿ ಉಂಟುಮಾಡಬಹುದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಯಥೇಚ್ಛವಾಗಿ ಇರುವುದರಿಂದ ಗ್ಯಾಸ್ ಸಮಸ್ಯೆ ಮತ್ತು ಎದೆಯುರಿ ಸಮಸ್ಯೆ ಹೆಚ್ಚಾಗಬಹುದು.ವಿಟಮಿನ್ ಸಿ ಅನ್ನು ಅಧಿಕವಾಗಿ ಸೇವಿಸುವುದರಿಂದ ಎದೆಯುರಿ ಉಂಟಾಗುತ್ತದೆ.

ದೇಹದ ದುರ್ವಾಸನೆಯ ಸಮಸ್ಯೆ ಹೆಚ್ಚು ಟೊಮೆಟೋ ತಿನ್ನುವುದರಿಂದ ದೇಹದ ವಾಸನೆಯ ಸಮಸ್ಯೆಯನ್ನು ಹೆಚ್ಚಿಸಬಹುದು ಏಕೆಂದರೆ ಟೆರ್ಪೆನ್ಸ್ ಎಂಬ ಅಂಶವು ಟೊಮೆಟೋ ಕಂಡುಬರುತ್ತದೆ. ಇದು ದೇಹದಲ್ಲಿ ಕೆಟ್ಟ ವಾಸನೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.

ಕೀಲು ನೋವು ಟೊಮೆಟೊಗಳನ್ನು ಅತಿಯಾಗಿ ಸೇವಿಸುವುದರಿಂದ ಕೀಲು ನೋವು ಉಂಟಾಗುತ್ತದೆ. ಏಕೆಂದರೆ ಟೊಮೆಟೊದಲ್ಲಿ ಸೋಲನೈನ್ ಎಂಬ ಆಲ್ಕಲಾಯ್ಡ್ ಇದೆ, ಇದರಿಂದಾಗಿ ಕೀಲುಗಳಲ್ಲಿ ಊತದ ಸಮಸ್ಯೆ ಇರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು