AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ.

Tomato Side Effects: ನೀವು ನಿತ್ಯ ಒಂದಲ್ಲಾ ಒಂದು ರೀತಿಯಲ್ಲಿ ಟೊಮೆಟೋ ಬಳಕೆ ಮಾಡ್ತೀರಾ, ಅನಾರೋಗ್ಯ ನಿಮಗೆ ಕಾಡಬಹುದು
ಟೊಮೆಟೋ
ನಯನಾ ರಾಜೀವ್
|

Updated on: Mar 14, 2023 | 9:00 AM

Share

ಹೆಚ್ಚಿನ ಮಂದಿ ಸಾಂಬಾರು, ಸಾರು, ಸಲಾಡ್​ನಲ್ಲಿ ಟೊಮೆಟೋವನ್ನು ಬಳಕೆ ಮಾಡುತ್ತಾರೆ. ಏಕೆಂದರೆ ಇವು ತಿನ್ನಲು ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ಹಲವು ರೀತಿಯಲ್ಲಿ ಪ್ರಯೋಜನಕಾರಿ. ಫೈಬರ್ ಮತ್ತು ವಿಟಮಿನ್ ಸಿ ಇದರಲ್ಲಿ ಕಂಡುಬರುತ್ತದೆ. ಅದಕ್ಕಾಗಿಯೇ ಇದನ್ನು ತಿನ್ನುವುದರಿಂದ ರೋಗನಿರೋಧಕ ಶಕ್ತಿ ಬಲಗೊಳ್ಳುತ್ತದೆ. ಆದರೆ ನೀವು ಟೊಮೆಟೊವನ್ನು ಅತಿಯಾಗಿ ಸೇವಿಸಿದರೆ, ನಿಮ್ಮ ಆರೋಗ್ಯವು ಹದಗೆಡಬಹುದು.

ಏನೇನು ಅನನುಕೂಲಗಳಿವೆ ಎಂಬುದನ್ನು ಇಲ್ಲಿ ನೋಡೋಣ ಆ್ಯಸಿಡಿಟಿ ಸಮಸ್ಯೆ ಟೊಮೆಟೋ ಹೆಚ್ಚು ತಿಂದರೆ ಹೊಟ್ಟೆಯಲ್ಲಿ ಆ್ಯಸಿಡಿಟಿ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಇದರಲ್ಲಿ ಆ್ಯಸಿಡಿಕ್ ಪ್ರಮಾಣ ಹೆಚ್ಚಿದ್ದು, ಇದರಿಂದ ಅಸಿಡಿಟಿ ಸಮಸ್ಯೆ ಶುರುವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಈಗಾಗಲೇ ಆ್ಯಸಿಡಿಟಿ ಸಮಸ್ಯೆ ಇರುವವರು ಇದನ್ನು ಸೇವಿಸಬಾರದು.

ಕಿಡ್ನಿ ಕಲ್ಲು ಟೊಮೆಟೋ ಸೇವನೆಯಿಂದ ಕಿಡ್ನಿ ಕಲ್ಲಿನ ಸಮಸ್ಯೆ ಉಂಟಾಗುತ್ತದೆ. ಏಕೆಂದರೆ ಟೊಮೆಟೋದಲ್ಲಿ ಕಂಡುಬರುವ ಬೀಜಗಳು ಸುಲಭವಾಗಿ ಮೂತ್ರಪಿಂಡವನ್ನು ತಲುಪುತ್ತವೆ ಮತ್ತು ಕಲ್ಲುಗಳನ್ನು ಮಾಡಲು ಪ್ರಾರಂಭಿಸುತ್ತವೆ. ಇದರಿಂದಾಗಿ ಹೆಚ್ಚಿನ ಟೊಮೆಟೋಗಳು ನಿಮ್ಮ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಅದಕ್ಕಾಗಿಯೇ ಟೊಮೆಟೋವನ್ನು ಅತಿಯಾಗಿ ಸೇವಿಸಬಾರದು.

ಎದೆಯುರಿ ಟೊಮೆಟೋಗಳ ಅತಿಯಾದ ಸೇವನೆಯು ಸಹ ಎದೆಯುರಿ ಉಂಟುಮಾಡಬಹುದು. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಯಥೇಚ್ಛವಾಗಿ ಇರುವುದರಿಂದ ಗ್ಯಾಸ್ ಸಮಸ್ಯೆ ಮತ್ತು ಎದೆಯುರಿ ಸಮಸ್ಯೆ ಹೆಚ್ಚಾಗಬಹುದು.ವಿಟಮಿನ್ ಸಿ ಅನ್ನು ಅಧಿಕವಾಗಿ ಸೇವಿಸುವುದರಿಂದ ಎದೆಯುರಿ ಉಂಟಾಗುತ್ತದೆ.

ದೇಹದ ದುರ್ವಾಸನೆಯ ಸಮಸ್ಯೆ ಹೆಚ್ಚು ಟೊಮೆಟೋ ತಿನ್ನುವುದರಿಂದ ದೇಹದ ವಾಸನೆಯ ಸಮಸ್ಯೆಯನ್ನು ಹೆಚ್ಚಿಸಬಹುದು ಏಕೆಂದರೆ ಟೆರ್ಪೆನ್ಸ್ ಎಂಬ ಅಂಶವು ಟೊಮೆಟೋ ಕಂಡುಬರುತ್ತದೆ. ಇದು ದೇಹದಲ್ಲಿ ಕೆಟ್ಟ ವಾಸನೆಯ ಸಮಸ್ಯೆಯನ್ನು ಹೆಚ್ಚಿಸುತ್ತದೆ.

ಕೀಲು ನೋವು ಟೊಮೆಟೊಗಳನ್ನು ಅತಿಯಾಗಿ ಸೇವಿಸುವುದರಿಂದ ಕೀಲು ನೋವು ಉಂಟಾಗುತ್ತದೆ. ಏಕೆಂದರೆ ಟೊಮೆಟೊದಲ್ಲಿ ಸೋಲನೈನ್ ಎಂಬ ಆಲ್ಕಲಾಯ್ಡ್ ಇದೆ, ಇದರಿಂದಾಗಿ ಕೀಲುಗಳಲ್ಲಿ ಊತದ ಸಮಸ್ಯೆ ಇರುತ್ತದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?