AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಕ್ಕೆ ಎರಡು ಬಾರಿ ಈ ತರಕಾರಿ ಸೇವನೆ ಮಾಡಿದ್ರೆ ಕ್ಯಾನ್ಸರ್ ಬರೋದಿಲ್ವಂತೆ!

ಕ್ಯಾರೆಟ್ ತಿನ್ನುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇವುಗಳನ್ನು ಸಲಾಡ್‌ಗಳಿಂದ ಹಿಡಿದು ಜ್ಯೂಸ್‌ಗಳವರೆಗೆ ಹಲವು ವಿಧಗಳಲ್ಲಿ ಸೇವನೆ ಮಾಡಬಹುದಾಗಿದೆ. ಆದರೆ ನಿಮಗೆ ಗೊತ್ತಾ? ಕೇವಲ ಈ ಒಂದು ತರಕಾರಿಯನ್ನು ವಾರಕ್ಕೆ ಎರಡು ಬಾರಿ ಸೇವನೆ ಮಾಡುವುದರಿಂದ ಕ್ಯಾನ್ಸರ್ ತಡೆಯಬಹುದಾಗಿದೆ. ಹೌದು, ಈ ತರಕಾರಿಯಲ್ಲಿ ಅಷ್ಟು ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಹಾಗಾದರೆ ಇದರಿಂದ ಸಿಗುವ ಮತ್ತಷ್ಟು ಪ್ರಯೋಜನಗಳೇನು? ಯಾವ ರೀತಿಯ ಕ್ಯಾನ್ಸರ್ ತಡೆಯಲು ಸಹಕಾರಿ ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ವಾರಕ್ಕೆ ಎರಡು ಬಾರಿ ಈ ತರಕಾರಿ ಸೇವನೆ ಮಾಡಿದ್ರೆ ಕ್ಯಾನ್ಸರ್ ಬರೋದಿಲ್ವಂತೆ!
carrots reduce cancer risk
ಪ್ರೀತಿ ಭಟ್​, ಗುಣವಂತೆ
|

Updated on: Dec 16, 2025 | 4:43 PM

Share

ಕ್ಯಾರೆಟ್ (Carrots) ತಿನ್ನುವುದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂಬುದು ತಿಳಿದ ವಿಚಾರ. ಆದರೆ ಆರೋಗ್ಯ (Health) ತಜ್ಞರು ವಾರಕ್ಕೆ ಎರಡು ಬಾರಿ ಕ್ಯಾರೆಟ್ ತಿನ್ನುವುದರಿಂದಲೂ ಗಂಭೀರ ಕಾಯಿಲೆಗಳಿಂದ ದೂರವಿರಲು ಸಹಾಯವಾಗುತ್ತದೆ ಎಂದು ಹೇಳುತ್ತಾರೆ. ಹೌದು, ಈ ತರಕಾರಿಯಲ್ಲಿ ಅಷ್ಟು ಶಕ್ತಿ ಇದೆ ಎಂದರೆ ನೀವು ನಂಬಲೇ ಬೇಕು. ಕ್ಯಾರೆಟ್ ಅನ್ನು ಸಲಾಡ್‌ಗಳಿಂದ ಹಿಡಿದು ಜ್ಯೂಸ್‌ಗಳವರೆಗೆ ಹಲವು ವಿಧಗಳಲ್ಲಿ ಸೇವನೆ ಮಾಡಬಹುದು. ಅದರಲ್ಲಿಯೂ ಈ ಚಳಿಗಾಲದಲ್ಲಿ ತಾಜಾ ತರಕಾರಿ, ಹಣ್ಣುಗಳ ಜೊತೆಗೆ ಕ್ಯಾರೆಟ್ ಕೂಡ ಮಾರುಕಟ್ಟೆಗೆ ಬರುವುದರಿಂದ ಯಾವುದೇ ರೀತಿಯ ತೊಂದರೆ ಇಲ್ಲದೆ ತಾಜಾ ಕ್ಯಾರೆಟ್ ಸೇವನೆ ಮಾಡಬಹುದಾಗಿದೆ. ಇದು ತಿನ್ನುವುದಕ್ಕೆ ರುಚಿಕರವಾಗಿರುವುದರ ಜೊತೆಗೆ ಆರೋಗ್ಯಕ್ಕೂ ತುಂಬಾ ಪ್ರಯೋಜನಕಾರಿಯಾಗಿದೆ.

ಕೊಲೊರೆಕ್ಟಲ್ ಕ್ಯಾನ್ಸರ್ ತಡೆಯಲು ಸಹಕಾರಿ:

ತಾಜಾ ಕ್ಯಾರೆಟ್‌ಗಳನ್ನು ಕೆಲವರು ಹಸಿಯಾಗಿ ತಿಂದರೆ ಇನ್ನು ಕೆಲವರು ಇದರಿಂದ ವಿವಿಧ ರೀತಿಯ ಖಾದ್ಯಗಳನ್ನು ತಯಾರಿಸಿ ಸೇವನೆ ಮಾಡುತ್ತಾರೆ. ವಿಶೇಷವೆಂದರೆ ನೀವು ಈ ಕ್ಯಾರೆಟ್‌ಗಳನ್ನು ಹೇಗೆ ಸೇವಿಸಿದರೂ ಅವು ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ. ಇತ್ತೀಚಿನ ಒಂದು ಅಧ್ಯಯನದ ಪ್ರಕಾರ, ವಾರಕ್ಕೆ 2 ರಿಂದ 4 ಹಸಿ ಕ್ಯಾರೆಟ್ ತಿನ್ನುವುದರಿಂದ ಕೊಲೊರೆಕ್ಟಲ್ ಕ್ಯಾನ್ಸರ್ ಅಪಾಯವನ್ನು ಸುಮಾರು 17 ಪ್ರತಿಶತದಷ್ಟು ಕಡಿಮೆ ಮಾಡಬಹುದಾಗಿದೆ. ಕೊಲೊರೆಕ್ಟಲ್ ಕ್ಯಾನ್ಸರ್ ಎಂದರೆ ದೊಡ್ಡ ಕರುಳು (ಕೊಲೊನ್) ಅಥವಾ ಗುದನಾಳದಲ್ಲಿ ಪ್ರಾರಂಭವಾಗುವ ಕ್ಯಾನ್ಸರ್ ಆಗಿದ್ದು, ಇದು ಸಾಮಾನ್ಯವಾಗಿ ಪಾಲಿಪ್ಸ್ ಎಂಬ ಬೆಳವಣಿಗೆಗಳಿಂದ ಉಂಟಾಗುತ್ತದೆ.

ಇದನ್ನೂ ಓದಿ: ಈ ತರಕಾರಿಗಳನ್ನು ಬೇಯಿಸುವುದು ಬೇಕಾಗಿಲ್ಲ ಹಸಿಯಾಗಿ ತಿನ್ನುವುದೇ ಪ್ರಯೋಜನಕಾರಿ

ಕ್ಯಾರೆಟ್‌ಗಳು ಕ್ಯಾರೊಟಿನಾಯ್ಡ್‌ಗಳು ಮತ್ತು ಲುಟೀನ್‌ನಂತಹ ಸಂಯುಕ್ತಗಳನ್ನು ಹೊಂದಿದ್ದು ವಾರಕ್ಕೆ ಕನಿಷ್ಠ ಎರಡು ಬಾರಿ ಅವುಗಳನ್ನು ಸೇವಿಸುವುದು ಒಳ್ಳೆಯದು. ಜೊತೆಗೆ ಕ್ಯಾರೆಟ್‌ ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಆಂಟಿ- ಇಂಫ್ಲಮೇಟರಿ ಗುಣಲಕ್ಷಣಗಳಿಂದ ರಕ್ತನಾಳಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ. ವಿಟಮಿನ್ ಕೆ, ವಿಟಮಿನ್ ಬಿ6 ಮತ್ತು ಇತರ ಪೋಷಕಾಂಶಗಳ ಉತ್ತಮ ಮೂಲವಾಗಿದೆ. ಇದರಲ್ಲಿರುವ ಬೀಟಾ-ಕ್ಯಾರೋಟೀನ್‌ ರಾತ್ರಿ ಕುರುಡುತನ ಮತ್ತು ಕಣ್ಣಿನ ಸಮಸ್ಯೆಗಳನ್ನು ತಡೆಯಲು ಸಹಾಯ ಮಾಡುತ್ತದೆ. ಆದರೆ ಕ್ಯಾರೆಟ್‌ನಿಂದ ತಯಾರಿಸಿದ ಸಿಹಿ ತಿಂಡಿಗಳು ಅಥವಾ ಇತರ ಆಹಾರಗಳನ್ನು ಸೇವಿಸುವುದಕ್ಕಿಂತ ಹಸಿ ಕ್ಯಾರೆಟ್ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಆದರೆ ಅತಿಯಾಗಿ ತಿಂದರೆ ಫೈಬರ್ ಅಂಶದಿಂದಾಗಿ ಹೆಚ್ಚಿನ ಜೀರ್ಣಕಾರಿ ಸಮಸ್ಯೆಗಳು ಉಂಟಾಗಬಹುದು. ಹಾಗಾಗಿ ಸೇವನೆ ಮಾಡುವಾಗ ಎಚ್ಚರಿಕೆ ವಹಿಸಿ, ಆರೋಗ್ಯ ಕಾಪಾಡಿಕೊಳ್ಳಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!