AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Travelling Tips: ಪ್ರಯಾಣದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಯನ್ನು ಅನುಸರಿಸಿ

ಪ್ರಯಾಣ ಮಾಡಲು ಇಷ್ಟವಿದ್ದರೂ ಮುಂದೆ ಬರುವ ಆರೋಗ್ಯ ಸಮಸ್ಯೆಗಳನ್ನು ನೆನೆದು ಬೇಸರವಾಗಿ, ಪ್ರವಾಸಕ್ಕೆ ಹೋಗುವುದನ್ನೇ ಕಡಿಮೆ ಮಾಡುತ್ತೇವೆ. ಆದರೆ ಈ ರೀತಿ ಸಮಸ್ಯೆಗಳನ್ನು ತಪ್ಪಿಸಲು ಕೆಲವು ಸಲಹೆಗಳನ್ನು ಅನುಸರಿಸುವುದು ಅವಶ್ಯಕ. ಇದರಿಂದ ಆರೋಗ್ಯ ಹದಗೆಡುವುದನ್ನು ತಪ್ಪಿಸಬಹುದು. ಹಾಗಾದರೆ ಏನು ಮಾಡಬೇಕು? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

Travelling Tips: ಪ್ರಯಾಣದ ನಂತರ ಆರೋಗ್ಯ ಕಾಪಾಡಿಕೊಳ್ಳಲು ಈ ಸಲಹೆಯನ್ನು ಅನುಸರಿಸಿ
Maintain Health After Travelling
ಪ್ರೀತಿ ಭಟ್​, ಗುಣವಂತೆ
| Updated By: ಅಕ್ಷತಾ ವರ್ಕಾಡಿ|

Updated on: Jan 12, 2025 | 8:52 AM

Share

ಸಾಮಾನ್ಯವಾಗಿ ಕೆಲವರಿಗೆ ದೀರ್ಘಕಾಲದ ಪ್ರಯಾಣ ಮಾಡಿ ಬಂದ ನಂತರದಲ್ಲಿ ಹಲವಾರು ರೀತಿಯ ಆರೋಗ್ಯ ಸಮಸ್ಯೆಗಳು ಕಾಡುತ್ತದೆ. ಅದರಲ್ಲಿ ಹೆಚ್ಚಿನವರಿಗೆ ಜೀರ್ಣಕಾರಿ ಸಮಸ್ಯೆಗಳು ಕಂಡುಬರುವುದು ಸಾಮಾನ್ಯ. ಪ್ರಯಾಣ ಮಾಡುವಾಗ ನೀವು ಒಂದೇ ಸ್ಥಳದಲ್ಲಿ ದೀರ್ಘಕಾಲ ಕುಳಿತುಕೊಳ್ಳಬೇಕು. ಇದು ಹೊಟ್ಟೆಯ ಮೇಲೆ ಹೆಚ್ಚಿನ ಒತ್ತಡವನ್ನುಂಟು ಮಾಡುತ್ತದೆ. ಈ ಕಾರಣದಿಂದಾಗಿ, ಹೊಟ್ಟೆಯುಬ್ಬರ, ಮಲಬದ್ಧತೆ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳು ಕಂಡುಬರಲು ಆರಂಭವಾಗುತ್ತದೆ. ಪ್ರಯಾಣ ಮಾಡಲು ಇಷ್ಟವಿದ್ದರೂ ಮುಂದೆ ಬರುವ ಆರೋಗ್ಯ ಸಮಸ್ಯೆಗಳನ್ನು ನೆನೆದು ಬೇಸರವಾಗಿ, ಪ್ರವಾಸಕ್ಕೆ ಹೋಗುವುದನ್ನೇ ಕಡಿಮೆ ಮಾಡುತ್ತೇವೆ. ಆದರೆ ಈ ರೀತಿ ಸಮಸ್ಯೆಗಳನ್ನು ತಪ್ಪಿಸಲು ಕೆಲವು ಸಲಹೆಗಳನ್ನು ಅನುಸರಿಸುವುದು ಅವಶ್ಯಕ. ಇದರಿಂದ ಆರೋಗ್ಯ ಹದಗೆಡುವುದನ್ನು ತಪ್ಪಿಸಬಹುದು. ಹಾಗಾದರೆ ಏನು ಮಾಡಬೇಕು? ಯಾವ ರೀತಿಯ ಸಲಹೆಗಳನ್ನು ಅನುಸರಿಸಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ.

ಪ್ರಯಾಣ ಮಾಡುವಾಗ ತಿನ್ನುವ ಮತ್ತು ಕುಡಿಯುವ ಅಭ್ಯಾಸ ಸರಿಯಾಗಿ ಇಲ್ಲದಿದ್ದರೆ, ಅದು ಕರುಳಿನ ಆರೋಗ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾಗಿ ಇಂತಹ ಸಂದರ್ಭಗಳಲ್ಲಿ ಕೆಲವು ಸರಳ ಸಲಹೆಗಳನ್ನು ಅನುಸರಿಸುವ ಮೂಲಕ ನಿಮ್ಮ ಕರುಳಿನ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಲಘು ಆಹಾರವನ್ನು ಮಾತ್ರ ಸೇವಿಸಿ:

ಪ್ರಯಾಣ ಮಾಡುವಾಗ ಮಸಾಲೆಯಿಂದ ಕೂಡಿರುವ ಆಹಾರ ಅಥವಾ ಇನ್ನಿತರ ಕರಿದ ಪದಾರ್ಥಗಳ ಸೇವನೆ ಮಾಡುತ್ತೇವೆ. ಇದು ಹೊಟ್ಟೆ ಭಾರವಾಗುವಂತೆ ಮಾಡುತ್ತದೆ. ಅದಲ್ಲದೆ ಪ್ರಯಾಣದ ಸಂದರ್ಭಗಳಲ್ಲಿ ನಿರಂತರವಾಗಿ ಕುಳಿತುಕೊಂಡಿರುವುದರಿಂದ ಆಹಾರ ಜೀರ್ಣಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಇದು ಜೀರ್ಣಕಾರಿ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಪ್ರಯಾಣದ ನಂತರವೂ ಲಘು ಆಹಾರವನ್ನು ಸೇವಿಸಿ. ಇದು ಕರುಳಿನ ಆರೋಗ್ಯಕ್ಕೆ ಪ್ರಯೋಜನವನ್ನು ನೀಡುತ್ತದೆ.

ಸಾಕಷ್ಟು ನೀರು ಕುಡಿಯಿರಿ:

ಕರುಳಿನ ಆರೋಗ್ಯವನ್ನು ಉತ್ತಮವಾಗಿಡಲು, ಸಾಧ್ಯವಾದಷ್ಟು ನೀರು ಕುಡಿಯಲು ಪ್ರಯತ್ನಿಸಿ. ಸಾಮಾನ್ಯವಾಗಿ ಪ್ರಯಾಣದ ಸಮಯದಲ್ಲಿ ಜನರು ಕಡಿಮೆ ಪ್ರಮಾಣದಲ್ಲಿ ನೀರು ಕುಡಿಯುತ್ತಾರೆ. ಇದು ಹೊಟ್ಟೆಯುಬ್ಬರ ಮತ್ತು ಆಮ್ಲೀಯತೆಗೆ ಕಾರಣವಾಗುತ್ತದೆ. ಹಾಗಾಗಿ ನೀರಿನ ಜೊತೆಗೆ ದ್ರವ ರೂಪದ ಆಹಾರವನ್ನು ಸೇವನೆ ಮಾಡಿ.

ಇದನ್ನೂ ಓದಿ: ಪಪ್ಪಾಯಿ, ಬಾಳೆಹಣ್ಣನ್ನು ಒಟ್ಟಿಗೆ ಸೇವಿಸಿದರೆ ಏನಾಗುತ್ತದೆ ಎಂಬುದು ತಿಳಿದಿದೆಯೇ?

ನಡಿಗೆ ಅತ್ಯಗತ್ಯ:

ಪ್ರವಾಸದಿಂದ ಹಿಂದಿರುಗಿದ ನಂತರ ನಿಮ್ಮ ದೈನಂದಿನ ದಿನಚರಿಯಲ್ಲಿ ವ್ಯಾಯಾಮ ಅಥವಾ ನಡಿಗೆಯನ್ನು ಸೇರಿಸಿಕೊಳ್ಳಿ. ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಹಾಗಾಗಿ ಊಟವಾದ ನಂತರ ಸ್ವಲ್ಪ ನಡೆಯುವ ಅಭ್ಯಾಸವನ್ನು ಬೆಳೆಸಿಕೊಳ್ಳಿ. ಇದು ಕರುಳಿನ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳು ಕೂಡ ಬರುವುದಿಲ್ಲ. ದಿನನಿತ್ಯ ನೀವು 15 ರಿಂದ 20 ನಿಮಿಷಗಳ ಕಾಲ ನಡೆಯುವುದು ದೇಹಕ್ಕೆ ಒಳ್ಳೆಯದು ಎಂದು ತಜ್ಞರು ಹೇಳುತ್ತಾರೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ