AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ? ಈ ಮನೆಮದ್ದುಗಳನ್ನು ಅನುಸರಿಸಿ

Health Tips: ವಾಸ್ತವವಾಗಿ ಒಣ ಕೆಮ್ಮು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಒಣ ಕೆಮ್ಮಿನಿಂದ ತೊಂದರೆಗೊಳಗಾಗಿದ್ದರೆ, ಇಲ್ಲಿ ತಿಳಿಸಲಾದ ಕೆಲವು ಮನೆಮದ್ದುಗಳು ನಿಮಗೆ ಉಪಯುಕ್ತವಾಗಬಹುದು.

ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ? ಈ ಮನೆಮದ್ದುಗಳನ್ನು ಅನುಸರಿಸಿ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: preethi shettigar

Updated on: Jan 02, 2022 | 11:12 AM

ಚಳಿಗಾಲ ಆರಂಭವಾಗಿದ್ದು ಕೆಮ್ಮು, ನೆಗಡಿ, ಮುಂತಾದ ಸಮಸ್ಯೆಗಳು ಕಾಡುವುದು ಸಾಮಾನ್ಯ. ಕೆಮ್ಮಿನ ಬಗ್ಗೆ ಹೇಳುವುದಾದರೆ, ವಾತ, ಪಿತ್ತ ಮತ್ತು ಕಫದ ಅಸಮತೋಲನ ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಎರಡು ವಿಧದ ಕೆಮ್ಮುಗಳಿವೆ. ಅದರಲ್ಲಿ ಒಂದು ಕಫದ ಕೆಮ್ಮು ಮತ್ತು ಇನ್ನೊಂದು ಒಣ ಕೆಮ್ಮು.  ಒಣ ಕೆಮ್ಮಿನಲ್ಲಿ (Dry Cough) ಗಂಟಲು ನೋವು  ಇರುತ್ತದೆ. ಕೆಮ್ಮು ಹೆಚ್ಚಾದಾಗ, ಪಕ್ಕೆಲುಬುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಇದು ಟಿಬಿಗೆ ಕಾರಣವಾಗುತ್ತದೆ. ಒಣ ಕೆಮ್ಮನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಬಳಸಿ. ವಾಸ್ತವವಾಗಿ ಒಣ ಕೆಮ್ಮು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಒಣ ಕೆಮ್ಮಿನಿಂದ ತೊಂದರೆಗೊಳಗಾಗಿದ್ದರೆ, ಇಲ್ಲಿ ತಿಳಿಸಲಾದ ಕೆಲವು ಮನೆಮದ್ದುಗಳು ನಿಮಗೆ ಉಪಯುಕ್ತವಾಗಬಹುದು.

ಬಿಸಿ ನೀರು ಮತ್ತು ಉಪ್ಪು ಬಿಸಿ ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಬಾಯಿ ಮುಕ್ಕಿಳಸುವುದರಿಂದ ಒಣ ಕೆಮ್ಮು ದೂರವಾಗುತ್ತದೆ. ಅಷ್ಟೇ ಅಲ್ಲ ಗಂಟಲಿನಲ್ಲಿ ಚುಚ್ಚುವಿಕೆಯಂತಹ ಸಮಸ್ಯೆಗಳನ್ನು ಇದು ತೆಗೆದುಹಾಕಲು ಉತ್ತಮವೆಂದು ಪರಿಗಣಿಸಲಾಗುತ್ತದೆ. ಬೆಚ್ಚಗಿನ ನೀರಿನಲ್ಲಿ ಸ್ವಲ್ಪ ಉಪ್ಪು ತೆಗೆದುಕೊಂಡು ಸುಮಾರು 10 ನಿಮಿಷಗಳ ಕಾಲ ಬಾಯಿ ಮುಕ್ಕಳಿಸಿ. ಕೆಮ್ಮು ಹೆಚ್ಚಾಗಿದ್ದರೆ ದಿನಕ್ಕೆ ಸುಮಾರು 3 ಬಾರಿ ಇದನ್ನು ಮಾಡಿ.

ಅರಿಶಿಣ ಮತ್ತು ಹಾಲು ಅರಿಶಿಣವು ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ ಮತ್ತು ಈ ಕಾರಣಕ್ಕಾಗಿ ಇದನ್ನು ಅನೇಕ ರೋಗಗಳ ತಡೆಗಟ್ಟುವಿಕೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಒಣ ಕೆಮ್ಮಿನ ಸಮಸ್ಯೆ ಇರುವಾಗ ರಾತ್ರಿ ಬೆಚ್ಚನೆಯ ಹಾಲಿಗೆ ಅರಿಶಿಣ ಬೆರೆಸಿ ಕುಡಿಯುವುದರಿಂದ ಪರಿಹಾರ ಸಿಗುತ್ತದೆ. ಇದು ನೈಸರ್ಗಿಕ ಪ್ರತಿಜೀವಕದಂತೆ ಕಾರ್ಯನಿರ್ವಹಿಸುತ್ತದೆ.

ಜೇನುತುಪ್ಪ ಒಣ ಕೆಮ್ಮಿನ ಚಿಕಿತ್ಸೆಗಾಗಿ ಜೇನುತುಪ್ಪವನ್ನು ಅತ್ಯುತ್ತಮ ಆಯ್ಕೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಬ್ಯಾಕ್ಟೀರಿಯಾಗಳು ಕೆಮ್ಮನ್ನು ಉಂಟುಮಾಡುವ ಸಾಧ್ಯತೆ ಹೆಚ್ಚು ಮತ್ತು ಜೇನುತುಪ್ಪವು ಈ ಸೂಕ್ಷ್ಮಾಣುಗಳನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ಆದ್ದರಿಂದ, ಮಲಗುವ ಸಮಯದಲ್ಲಿ ಖಂಡಿತವಾಗಿಯೂ ಸ್ವಲ್ಪ ಜೇನುತುಪ್ಪವನ್ನು ಸೇವಿಸಿ. ಹೀಗೆ ಮಾಡುವುದರಿಂದ ಗಂಟಲಿನಲ್ಲಿ ತೇವಾಂಶವೂ ಸೇರಿ ಕೆಮ್ಮು ನಿವಾರಣೆಯಾಗುತ್ತದೆ.

ಸ್ಟೀಮ್​ ತೆಗೆದುಕೊಳ್ಳಿ ಶೀತ ಅಥವಾ ಕೆಮ್ಮಿನಿಂದ ಪರಿಹಾರ ಪಡೆಯಲು ಸ್ಟೀಮ್​ ತೆಗೆದುಕೊಳ್ಳುವುದು ಉತ್ತಮ. ಅತಿಯಾದ ಕೆಮ್ಮಿನ ಸಂದರ್ಭದಲ್ಲಿ ದಿನಕ್ಕೆ ಎರಡು ಮೂರು ಬಾರಿ ಸ್ಟೀಮ್​ ತೆಗೆದುಕೊಳ್ಳಬೇಕು. ಇದು ಉತ್ತಮ ಮನೆಮದ್ದು ಮತ್ತು ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ.

ಇದನ್ನೂ ಓದಿ: ದರ್ಭೆ ಹುಲ್ಲು ಧಾರ್ಮಿಕವಾಗಿಯಷ್ಟೇ ಅಲ್ಲ ದೈಹಿಕವಾಗಿಯೂ ಆರೋಗ್ಯಕ್ಕೆ ಉಪಯುಕ್ತ, ಇದರ ಪ್ರಾಮುಖ್ಯತೆ ತಿಳಿಯೋಣ ಬನ್ನೀ

Health Care Tips: ಸೀತಾಫಲ ತಿಂದರೆ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ; ಅಪಾಯದ ಬಗ್ಗೆ ಇರಲಿ ಎಚ್ಚರ

VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು