AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ? ಈ ಮನೆಮದ್ದುಗಳನ್ನು ಅನುಸರಿಸಿ

Health Tips: ವಾಸ್ತವವಾಗಿ ಒಣ ಕೆಮ್ಮು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಒಣ ಕೆಮ್ಮಿನಿಂದ ತೊಂದರೆಗೊಳಗಾಗಿದ್ದರೆ, ಇಲ್ಲಿ ತಿಳಿಸಲಾದ ಕೆಲವು ಮನೆಮದ್ದುಗಳು ನಿಮಗೆ ಉಪಯುಕ್ತವಾಗಬಹುದು.

ಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ? ಈ ಮನೆಮದ್ದುಗಳನ್ನು ಅನುಸರಿಸಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 02, 2022 | 11:12 AM

Share

ಚಳಿಗಾಲ ಆರಂಭವಾಗಿದ್ದು ಕೆಮ್ಮು, ನೆಗಡಿ, ಮುಂತಾದ ಸಮಸ್ಯೆಗಳು ಕಾಡುವುದು ಸಾಮಾನ್ಯ. ಕೆಮ್ಮಿನ ಬಗ್ಗೆ ಹೇಳುವುದಾದರೆ, ವಾತ, ಪಿತ್ತ ಮತ್ತು ಕಫದ ಅಸಮತೋಲನ ಇದಕ್ಕೆ ಕಾರಣ ಎಂದು ಹೇಳಲಾಗುತ್ತದೆ. ಎರಡು ವಿಧದ ಕೆಮ್ಮುಗಳಿವೆ. ಅದರಲ್ಲಿ ಒಂದು ಕಫದ ಕೆಮ್ಮು ಮತ್ತು ಇನ್ನೊಂದು ಒಣ ಕೆಮ್ಮು.  ಒಣ ಕೆಮ್ಮಿನಲ್ಲಿ (Dry Cough) ಗಂಟಲು ನೋವು  ಇರುತ್ತದೆ. ಕೆಮ್ಮು ಹೆಚ್ಚಾದಾಗ, ಪಕ್ಕೆಲುಬುಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ ಇದು ಟಿಬಿಗೆ ಕಾರಣವಾಗುತ್ತದೆ. ಒಣ ಕೆಮ್ಮನ್ನು ಹೋಗಲಾಡಿಸಲು ಈ ಮನೆಮದ್ದುಗಳನ್ನು ಬಳಸಿ. ವಾಸ್ತವವಾಗಿ ಒಣ ಕೆಮ್ಮು ಗುಣವಾಗಲು ಹೆಚ್ಚು ಸಮಯ ತೆಗೆದುಕೊಳ್ಳುತ್ತದೆ. ಹೀಗಾಗಿ ಒಣ ಕೆಮ್ಮಿನಿಂದ ತೊಂದರೆಗೊಳಗಾಗಿದ್ದರೆ, ಇಲ್ಲಿ ತಿಳಿಸಲಾದ ಕೆಲವು ಮನೆಮದ್ದುಗಳು ನಿಮಗೆ ಉಪಯುಕ್ತವಾಗಬಹುದು.

ಬಿಸಿ ನೀರು ಮತ್ತು ಉಪ್ಪು ಬಿಸಿ ನೀರಿಗೆ ಸ್ವಲ್ಪ ಉಪ್ಪು ಸೇರಿಸಿ ಬಾಯಿ ಮುಕ್ಕಿಳಸುವುದರಿಂದ ಒಣ ಕೆಮ್ಮು ದೂರವಾಗುತ್ತದೆ. ಅಷ್ಟೇ ಅಲ್ಲ ಗಂಟಲಿನಲ್ಲಿ ಚುಚ್ಚುವಿಕೆಯಂತಹ ಸಮಸ್ಯೆಗಳನ್ನು ಇದು ತೆಗೆದುಹಾಕಲು ಉತ್ತಮವೆಂದು ಪರಿಗಣಿಸಲಾಗುತ್ತದೆ. ಬೆಚ್ಚಗಿನ ನೀರಿನಲ್ಲಿ ಸ್ವಲ್ಪ ಉಪ್ಪು ತೆಗೆದುಕೊಂಡು ಸುಮಾರು 10 ನಿಮಿಷಗಳ ಕಾಲ ಬಾಯಿ ಮುಕ್ಕಳಿಸಿ. ಕೆಮ್ಮು ಹೆಚ್ಚಾಗಿದ್ದರೆ ದಿನಕ್ಕೆ ಸುಮಾರು 3 ಬಾರಿ ಇದನ್ನು ಮಾಡಿ.

ಅರಿಶಿಣ ಮತ್ತು ಹಾಲು ಅರಿಶಿಣವು ಅನೇಕ ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ ಮತ್ತು ಈ ಕಾರಣಕ್ಕಾಗಿ ಇದನ್ನು ಅನೇಕ ರೋಗಗಳ ತಡೆಗಟ್ಟುವಿಕೆಗೆ ಅತ್ಯುತ್ತಮವೆಂದು ಪರಿಗಣಿಸಲಾಗಿದೆ. ಒಣ ಕೆಮ್ಮಿನ ಸಮಸ್ಯೆ ಇರುವಾಗ ರಾತ್ರಿ ಬೆಚ್ಚನೆಯ ಹಾಲಿಗೆ ಅರಿಶಿಣ ಬೆರೆಸಿ ಕುಡಿಯುವುದರಿಂದ ಪರಿಹಾರ ಸಿಗುತ್ತದೆ. ಇದು ನೈಸರ್ಗಿಕ ಪ್ರತಿಜೀವಕದಂತೆ ಕಾರ್ಯನಿರ್ವಹಿಸುತ್ತದೆ.

ಜೇನುತುಪ್ಪ ಒಣ ಕೆಮ್ಮಿನ ಚಿಕಿತ್ಸೆಗಾಗಿ ಜೇನುತುಪ್ಪವನ್ನು ಅತ್ಯುತ್ತಮ ಆಯ್ಕೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಬ್ಯಾಕ್ಟೀರಿಯಾಗಳು ಕೆಮ್ಮನ್ನು ಉಂಟುಮಾಡುವ ಸಾಧ್ಯತೆ ಹೆಚ್ಚು ಮತ್ತು ಜೇನುತುಪ್ಪವು ಈ ಸೂಕ್ಷ್ಮಾಣುಗಳನ್ನು ನಿವಾರಿಸುವ ಗುಣಗಳನ್ನು ಹೊಂದಿದೆ. ಆದ್ದರಿಂದ, ಮಲಗುವ ಸಮಯದಲ್ಲಿ ಖಂಡಿತವಾಗಿಯೂ ಸ್ವಲ್ಪ ಜೇನುತುಪ್ಪವನ್ನು ಸೇವಿಸಿ. ಹೀಗೆ ಮಾಡುವುದರಿಂದ ಗಂಟಲಿನಲ್ಲಿ ತೇವಾಂಶವೂ ಸೇರಿ ಕೆಮ್ಮು ನಿವಾರಣೆಯಾಗುತ್ತದೆ.

ಸ್ಟೀಮ್​ ತೆಗೆದುಕೊಳ್ಳಿ ಶೀತ ಅಥವಾ ಕೆಮ್ಮಿನಿಂದ ಪರಿಹಾರ ಪಡೆಯಲು ಸ್ಟೀಮ್​ ತೆಗೆದುಕೊಳ್ಳುವುದು ಉತ್ತಮ. ಅತಿಯಾದ ಕೆಮ್ಮಿನ ಸಂದರ್ಭದಲ್ಲಿ ದಿನಕ್ಕೆ ಎರಡು ಮೂರು ಬಾರಿ ಸ್ಟೀಮ್​ ತೆಗೆದುಕೊಳ್ಳಬೇಕು. ಇದು ಉತ್ತಮ ಮನೆಮದ್ದು ಮತ್ತು ಇದು ಯಾವುದೇ ಅಡ್ಡ ಪರಿಣಾಮಗಳನ್ನು ಹೊಂದಿಲ್ಲ.

ಇದನ್ನೂ ಓದಿ: ದರ್ಭೆ ಹುಲ್ಲು ಧಾರ್ಮಿಕವಾಗಿಯಷ್ಟೇ ಅಲ್ಲ ದೈಹಿಕವಾಗಿಯೂ ಆರೋಗ್ಯಕ್ಕೆ ಉಪಯುಕ್ತ, ಇದರ ಪ್ರಾಮುಖ್ಯತೆ ತಿಳಿಯೋಣ ಬನ್ನೀ

Health Care Tips: ಸೀತಾಫಲ ತಿಂದರೆ ಆರೋಗ್ಯದಲ್ಲಿ ಅನೇಕ ಬದಲಾವಣೆಗಳಾಗುತ್ತದೆ; ಅಪಾಯದ ಬಗ್ಗೆ ಇರಲಿ ಎಚ್ಚರ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?