AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ

ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 3:33 PM

Share

ಟಾನ್ಸಿಲ್​ ಸೋಂಕು  ಚಳಿಗಾಲದಲ್ಲಿ  ಕಾಣಿಸಿಕೊಳ್ಳುವ ಪ್ರಮುಖ ಸಮಸ್ಯೆಯಾಗಿದೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕು ಗಂಟಲು ನೋವನ್ನು ಉಂಟು ಮಾಡಿ ಹಲವು ದಿನಗಳವರೆಗೆ ಕಾಡುತ್ತದೆ. ದವಡೆಯ ಕೆಳಭಾಗದಲ್ಲಿ ಊತವನ್ನು ಉಂಟುಮಾಡಿ ಆಹಾರವನ್ನು ನುಂಗಲು ಕಷ್ಟವಾಗುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಸೇವಿಸುವ ಕೆಲವು ಅನಾರೋಗ್ಯ ಉಂಟುಮಾಡುವ ಆಹಾರಗಳು ಈ ಟಾನ್ಸಿಲ್​ ನೋವಿಗೆ ಕಾರಣವಾಗುತ್ತದೆ. ಗಂಟಲಿನ ಎರಡೂ ಭಾಗದಲ್ಲಿ ಟಾನ್ಸಿಲ್​ ಗ್ರಂಥಿಗಳು ಇರುತ್ತವೆ. ಆಹಾರದ ವ್ಯತ್ಯಾಸದಿಂದ ಇದಕ್ಕೆ ಸೋಂಕು ತಗುಲಿ ಊದಿಕೊಂಡು ನೋವುಂಟು ಮಾಡುತ್ತದೆ.  ಚಳಿಗಾಲದಲ್ಲಿ ಕಾಡುವ ಟಾನ್ಸಿಲ್​ ಸಮಸ್ಯೆಯನ್ನು ಮನೆಮದ್ದಿನಿಂದಲೇ ಕಡಿಮೆ ಮಾಡಿಕೊಳ್ಳಬಹುದಾಗಿದೆ.  ಟಾನ್ಸಿಲ್ ಗ್ರಂಥಿಗಳ ನೋವಿನಿಂದ ಜ್ವರ ಕೂಡ ಬರಬಹುದು ಹೀಗಾಗಿ ಆರೋಗ್ಯದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉಪ್ಪು ನೀರಿನ ಗಾರ್ಗಲ್​ ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ. ದಿನಕ್ಕೆ ಎರಡು  ಬಾರಿಯದರೂ ಈ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಟಾನ್ಸಿಲ್​ ನೋವಿನಿಂದ ಮುಕ್ತಿ ಪಡೆಯಬಹುದು. ಇದು ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೂ ಪರಿಹಾರವಾಗಿದೆ.

ಹಾಲು ಮತ್ತು ಜೇನುತುಪ್ಪ ಹಾಲು ಮತ್ತು ಜೇನುತುಪ್ಪದ ಸೇವನೆಯಿಂದ ಟಾನ್ಸಿಲ್​ ನೋವು ಕಡಿಮೆಯಾಗುತ್ತದೆ. ಪ್ರತಿದಿನ ಮಲಗುವ ಮೊದಲು ಉಗುರು ಬೆಚ್ಚಗಿನ ಹಾಲಿಗೆ ಹಾಲು ಮತ್ತು ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ.  ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸ್ವಚ್ಛಗೊಳಿಸಿ ನೋವನ್ನು ನಿವಾರಿಸುತ್ತದೆ. ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್​ ಅಂಶಗಳನ್ನು ಪೂರೈಸಿ ಆರೋಗ್ಯವನ್ನು ಕಾಪಾಡುತ್ತದೆ.

ಅರಿಶಿನ ಮತ್ತು ಕರಿಮೆಣಸಿನ ಕಾಳು ಅರಿಶಿನ ಆ್ಯಂಟಿಬಯೋಟಿಕ್​ ಆಗಿದೆ. ಇದು ನಿಮ್ಮ ಗಂಟಲಿನ ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಕರಿಮೆಣಸಿನ ಕಾಳು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಅರಿಶಿನದ ಜೊತೆ ಕರಿಮೆಣಸಿನ ಕಾಳಿನ ಪುಡಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಿ ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ. 2 ರಿಂದ 3 ದಿನಗಳವರೆಗೆ ಇದನ್ನು ಮುಂದುವರೆಸಿ.

ಇದನ್ನೂ ಓದಿ:

New Year 2022: ಫಿಟ್​ ಆಗಿರಲು ಹೊಸ ವರ್ಷದ ಆರಂಭದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Published On - 3:30 pm, Fri, 31 December 21

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ