AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ

ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 3:33 PM

Share

ಟಾನ್ಸಿಲ್​ ಸೋಂಕು  ಚಳಿಗಾಲದಲ್ಲಿ  ಕಾಣಿಸಿಕೊಳ್ಳುವ ಪ್ರಮುಖ ಸಮಸ್ಯೆಯಾಗಿದೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕು ಗಂಟಲು ನೋವನ್ನು ಉಂಟು ಮಾಡಿ ಹಲವು ದಿನಗಳವರೆಗೆ ಕಾಡುತ್ತದೆ. ದವಡೆಯ ಕೆಳಭಾಗದಲ್ಲಿ ಊತವನ್ನು ಉಂಟುಮಾಡಿ ಆಹಾರವನ್ನು ನುಂಗಲು ಕಷ್ಟವಾಗುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಸೇವಿಸುವ ಕೆಲವು ಅನಾರೋಗ್ಯ ಉಂಟುಮಾಡುವ ಆಹಾರಗಳು ಈ ಟಾನ್ಸಿಲ್​ ನೋವಿಗೆ ಕಾರಣವಾಗುತ್ತದೆ. ಗಂಟಲಿನ ಎರಡೂ ಭಾಗದಲ್ಲಿ ಟಾನ್ಸಿಲ್​ ಗ್ರಂಥಿಗಳು ಇರುತ್ತವೆ. ಆಹಾರದ ವ್ಯತ್ಯಾಸದಿಂದ ಇದಕ್ಕೆ ಸೋಂಕು ತಗುಲಿ ಊದಿಕೊಂಡು ನೋವುಂಟು ಮಾಡುತ್ತದೆ.  ಚಳಿಗಾಲದಲ್ಲಿ ಕಾಡುವ ಟಾನ್ಸಿಲ್​ ಸಮಸ್ಯೆಯನ್ನು ಮನೆಮದ್ದಿನಿಂದಲೇ ಕಡಿಮೆ ಮಾಡಿಕೊಳ್ಳಬಹುದಾಗಿದೆ.  ಟಾನ್ಸಿಲ್ ಗ್ರಂಥಿಗಳ ನೋವಿನಿಂದ ಜ್ವರ ಕೂಡ ಬರಬಹುದು ಹೀಗಾಗಿ ಆರೋಗ್ಯದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉಪ್ಪು ನೀರಿನ ಗಾರ್ಗಲ್​ ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ. ದಿನಕ್ಕೆ ಎರಡು  ಬಾರಿಯದರೂ ಈ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಟಾನ್ಸಿಲ್​ ನೋವಿನಿಂದ ಮುಕ್ತಿ ಪಡೆಯಬಹುದು. ಇದು ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೂ ಪರಿಹಾರವಾಗಿದೆ.

ಹಾಲು ಮತ್ತು ಜೇನುತುಪ್ಪ ಹಾಲು ಮತ್ತು ಜೇನುತುಪ್ಪದ ಸೇವನೆಯಿಂದ ಟಾನ್ಸಿಲ್​ ನೋವು ಕಡಿಮೆಯಾಗುತ್ತದೆ. ಪ್ರತಿದಿನ ಮಲಗುವ ಮೊದಲು ಉಗುರು ಬೆಚ್ಚಗಿನ ಹಾಲಿಗೆ ಹಾಲು ಮತ್ತು ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ.  ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸ್ವಚ್ಛಗೊಳಿಸಿ ನೋವನ್ನು ನಿವಾರಿಸುತ್ತದೆ. ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್​ ಅಂಶಗಳನ್ನು ಪೂರೈಸಿ ಆರೋಗ್ಯವನ್ನು ಕಾಪಾಡುತ್ತದೆ.

ಅರಿಶಿನ ಮತ್ತು ಕರಿಮೆಣಸಿನ ಕಾಳು ಅರಿಶಿನ ಆ್ಯಂಟಿಬಯೋಟಿಕ್​ ಆಗಿದೆ. ಇದು ನಿಮ್ಮ ಗಂಟಲಿನ ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಕರಿಮೆಣಸಿನ ಕಾಳು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಅರಿಶಿನದ ಜೊತೆ ಕರಿಮೆಣಸಿನ ಕಾಳಿನ ಪುಡಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಿ ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ. 2 ರಿಂದ 3 ದಿನಗಳವರೆಗೆ ಇದನ್ನು ಮುಂದುವರೆಸಿ.

ಇದನ್ನೂ ಓದಿ:

New Year 2022: ಫಿಟ್​ ಆಗಿರಲು ಹೊಸ ವರ್ಷದ ಆರಂಭದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Published On - 3:30 pm, Fri, 31 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ