AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ

ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 3:33 PM

Share

ಟಾನ್ಸಿಲ್​ ಸೋಂಕು  ಚಳಿಗಾಲದಲ್ಲಿ  ಕಾಣಿಸಿಕೊಳ್ಳುವ ಪ್ರಮುಖ ಸಮಸ್ಯೆಯಾಗಿದೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕು ಗಂಟಲು ನೋವನ್ನು ಉಂಟು ಮಾಡಿ ಹಲವು ದಿನಗಳವರೆಗೆ ಕಾಡುತ್ತದೆ. ದವಡೆಯ ಕೆಳಭಾಗದಲ್ಲಿ ಊತವನ್ನು ಉಂಟುಮಾಡಿ ಆಹಾರವನ್ನು ನುಂಗಲು ಕಷ್ಟವಾಗುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಸೇವಿಸುವ ಕೆಲವು ಅನಾರೋಗ್ಯ ಉಂಟುಮಾಡುವ ಆಹಾರಗಳು ಈ ಟಾನ್ಸಿಲ್​ ನೋವಿಗೆ ಕಾರಣವಾಗುತ್ತದೆ. ಗಂಟಲಿನ ಎರಡೂ ಭಾಗದಲ್ಲಿ ಟಾನ್ಸಿಲ್​ ಗ್ರಂಥಿಗಳು ಇರುತ್ತವೆ. ಆಹಾರದ ವ್ಯತ್ಯಾಸದಿಂದ ಇದಕ್ಕೆ ಸೋಂಕು ತಗುಲಿ ಊದಿಕೊಂಡು ನೋವುಂಟು ಮಾಡುತ್ತದೆ.  ಚಳಿಗಾಲದಲ್ಲಿ ಕಾಡುವ ಟಾನ್ಸಿಲ್​ ಸಮಸ್ಯೆಯನ್ನು ಮನೆಮದ್ದಿನಿಂದಲೇ ಕಡಿಮೆ ಮಾಡಿಕೊಳ್ಳಬಹುದಾಗಿದೆ.  ಟಾನ್ಸಿಲ್ ಗ್ರಂಥಿಗಳ ನೋವಿನಿಂದ ಜ್ವರ ಕೂಡ ಬರಬಹುದು ಹೀಗಾಗಿ ಆರೋಗ್ಯದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉಪ್ಪು ನೀರಿನ ಗಾರ್ಗಲ್​ ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ. ದಿನಕ್ಕೆ ಎರಡು  ಬಾರಿಯದರೂ ಈ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಟಾನ್ಸಿಲ್​ ನೋವಿನಿಂದ ಮುಕ್ತಿ ಪಡೆಯಬಹುದು. ಇದು ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೂ ಪರಿಹಾರವಾಗಿದೆ.

ಹಾಲು ಮತ್ತು ಜೇನುತುಪ್ಪ ಹಾಲು ಮತ್ತು ಜೇನುತುಪ್ಪದ ಸೇವನೆಯಿಂದ ಟಾನ್ಸಿಲ್​ ನೋವು ಕಡಿಮೆಯಾಗುತ್ತದೆ. ಪ್ರತಿದಿನ ಮಲಗುವ ಮೊದಲು ಉಗುರು ಬೆಚ್ಚಗಿನ ಹಾಲಿಗೆ ಹಾಲು ಮತ್ತು ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ.  ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸ್ವಚ್ಛಗೊಳಿಸಿ ನೋವನ್ನು ನಿವಾರಿಸುತ್ತದೆ. ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್​ ಅಂಶಗಳನ್ನು ಪೂರೈಸಿ ಆರೋಗ್ಯವನ್ನು ಕಾಪಾಡುತ್ತದೆ.

ಅರಿಶಿನ ಮತ್ತು ಕರಿಮೆಣಸಿನ ಕಾಳು ಅರಿಶಿನ ಆ್ಯಂಟಿಬಯೋಟಿಕ್​ ಆಗಿದೆ. ಇದು ನಿಮ್ಮ ಗಂಟಲಿನ ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಕರಿಮೆಣಸಿನ ಕಾಳು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಅರಿಶಿನದ ಜೊತೆ ಕರಿಮೆಣಸಿನ ಕಾಳಿನ ಪುಡಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಿ ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ. 2 ರಿಂದ 3 ದಿನಗಳವರೆಗೆ ಇದನ್ನು ಮುಂದುವರೆಸಿ.

ಇದನ್ನೂ ಓದಿ:

New Year 2022: ಫಿಟ್​ ಆಗಿರಲು ಹೊಸ ವರ್ಷದ ಆರಂಭದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Published On - 3:30 pm, Fri, 31 December 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್