AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ

ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ
ಪ್ರಾತಿನಿಧಿಕ ಚಿತ್ರ
TV9 Web
| Updated By: Pavitra Bhat Jigalemane|

Updated on:Dec 31, 2021 | 3:33 PM

Share

ಟಾನ್ಸಿಲ್​ ಸೋಂಕು  ಚಳಿಗಾಲದಲ್ಲಿ  ಕಾಣಿಸಿಕೊಳ್ಳುವ ಪ್ರಮುಖ ಸಮಸ್ಯೆಯಾಗಿದೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕು ಗಂಟಲು ನೋವನ್ನು ಉಂಟು ಮಾಡಿ ಹಲವು ದಿನಗಳವರೆಗೆ ಕಾಡುತ್ತದೆ. ದವಡೆಯ ಕೆಳಭಾಗದಲ್ಲಿ ಊತವನ್ನು ಉಂಟುಮಾಡಿ ಆಹಾರವನ್ನು ನುಂಗಲು ಕಷ್ಟವಾಗುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಸೇವಿಸುವ ಕೆಲವು ಅನಾರೋಗ್ಯ ಉಂಟುಮಾಡುವ ಆಹಾರಗಳು ಈ ಟಾನ್ಸಿಲ್​ ನೋವಿಗೆ ಕಾರಣವಾಗುತ್ತದೆ. ಗಂಟಲಿನ ಎರಡೂ ಭಾಗದಲ್ಲಿ ಟಾನ್ಸಿಲ್​ ಗ್ರಂಥಿಗಳು ಇರುತ್ತವೆ. ಆಹಾರದ ವ್ಯತ್ಯಾಸದಿಂದ ಇದಕ್ಕೆ ಸೋಂಕು ತಗುಲಿ ಊದಿಕೊಂಡು ನೋವುಂಟು ಮಾಡುತ್ತದೆ.  ಚಳಿಗಾಲದಲ್ಲಿ ಕಾಡುವ ಟಾನ್ಸಿಲ್​ ಸಮಸ್ಯೆಯನ್ನು ಮನೆಮದ್ದಿನಿಂದಲೇ ಕಡಿಮೆ ಮಾಡಿಕೊಳ್ಳಬಹುದಾಗಿದೆ.  ಟಾನ್ಸಿಲ್ ಗ್ರಂಥಿಗಳ ನೋವಿನಿಂದ ಜ್ವರ ಕೂಡ ಬರಬಹುದು ಹೀಗಾಗಿ ಆರೋಗ್ಯದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉಪ್ಪು ನೀರಿನ ಗಾರ್ಗಲ್​ ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ. ದಿನಕ್ಕೆ ಎರಡು  ಬಾರಿಯದರೂ ಈ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಟಾನ್ಸಿಲ್​ ನೋವಿನಿಂದ ಮುಕ್ತಿ ಪಡೆಯಬಹುದು. ಇದು ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೂ ಪರಿಹಾರವಾಗಿದೆ.

ಹಾಲು ಮತ್ತು ಜೇನುತುಪ್ಪ ಹಾಲು ಮತ್ತು ಜೇನುತುಪ್ಪದ ಸೇವನೆಯಿಂದ ಟಾನ್ಸಿಲ್​ ನೋವು ಕಡಿಮೆಯಾಗುತ್ತದೆ. ಪ್ರತಿದಿನ ಮಲಗುವ ಮೊದಲು ಉಗುರು ಬೆಚ್ಚಗಿನ ಹಾಲಿಗೆ ಹಾಲು ಮತ್ತು ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ.  ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸ್ವಚ್ಛಗೊಳಿಸಿ ನೋವನ್ನು ನಿವಾರಿಸುತ್ತದೆ. ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್​ ಅಂಶಗಳನ್ನು ಪೂರೈಸಿ ಆರೋಗ್ಯವನ್ನು ಕಾಪಾಡುತ್ತದೆ.

ಅರಿಶಿನ ಮತ್ತು ಕರಿಮೆಣಸಿನ ಕಾಳು ಅರಿಶಿನ ಆ್ಯಂಟಿಬಯೋಟಿಕ್​ ಆಗಿದೆ. ಇದು ನಿಮ್ಮ ಗಂಟಲಿನ ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಕರಿಮೆಣಸಿನ ಕಾಳು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಅರಿಶಿನದ ಜೊತೆ ಕರಿಮೆಣಸಿನ ಕಾಳಿನ ಪುಡಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಿ ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ. 2 ರಿಂದ 3 ದಿನಗಳವರೆಗೆ ಇದನ್ನು ಮುಂದುವರೆಸಿ.

ಇದನ್ನೂ ಓದಿ:

New Year 2022: ಫಿಟ್​ ಆಗಿರಲು ಹೊಸ ವರ್ಷದ ಆರಂಭದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Published On - 3:30 pm, Fri, 31 December 21

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?