AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ

ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ.

ಟಾನ್ಸಿಲ್​​ ನೋವಿನಿಂದ ಬಳಲುತ್ತಿದ್ದರೆ ಈ ವಿಧಾನಗಳನ್ನು ಅನುಸರಿಸಿ: ಆರೋಗ್ಯವಾಗಿರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Dec 31, 2021 | 3:33 PM

Share

ಟಾನ್ಸಿಲ್​ ಸೋಂಕು  ಚಳಿಗಾಲದಲ್ಲಿ  ಕಾಣಿಸಿಕೊಳ್ಳುವ ಪ್ರಮುಖ ಸಮಸ್ಯೆಯಾಗಿದೆ. ಬ್ಯಾಕ್ಟೀರಿಯಾಗಳಿಂದ ಉಂಟಾಗುವ ಸೋಂಕು ಗಂಟಲು ನೋವನ್ನು ಉಂಟು ಮಾಡಿ ಹಲವು ದಿನಗಳವರೆಗೆ ಕಾಡುತ್ತದೆ. ದವಡೆಯ ಕೆಳಭಾಗದಲ್ಲಿ ಊತವನ್ನು ಉಂಟುಮಾಡಿ ಆಹಾರವನ್ನು ನುಂಗಲು ಕಷ್ಟವಾಗುವಂತೆ ಮಾಡುತ್ತದೆ. ಚಳಿಗಾಲದಲ್ಲಿ ಸೇವಿಸುವ ಕೆಲವು ಅನಾರೋಗ್ಯ ಉಂಟುಮಾಡುವ ಆಹಾರಗಳು ಈ ಟಾನ್ಸಿಲ್​ ನೋವಿಗೆ ಕಾರಣವಾಗುತ್ತದೆ. ಗಂಟಲಿನ ಎರಡೂ ಭಾಗದಲ್ಲಿ ಟಾನ್ಸಿಲ್​ ಗ್ರಂಥಿಗಳು ಇರುತ್ತವೆ. ಆಹಾರದ ವ್ಯತ್ಯಾಸದಿಂದ ಇದಕ್ಕೆ ಸೋಂಕು ತಗುಲಿ ಊದಿಕೊಂಡು ನೋವುಂಟು ಮಾಡುತ್ತದೆ.  ಚಳಿಗಾಲದಲ್ಲಿ ಕಾಡುವ ಟಾನ್ಸಿಲ್​ ಸಮಸ್ಯೆಯನ್ನು ಮನೆಮದ್ದಿನಿಂದಲೇ ಕಡಿಮೆ ಮಾಡಿಕೊಳ್ಳಬಹುದಾಗಿದೆ.  ಟಾನ್ಸಿಲ್ ಗ್ರಂಥಿಗಳ ನೋವಿನಿಂದ ಜ್ವರ ಕೂಡ ಬರಬಹುದು ಹೀಗಾಗಿ ಆರೋಗ್ಯದ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ.

ಉಪ್ಪು ನೀರಿನ ಗಾರ್ಗಲ್​ ಉಪ್ಪು ನೀರಿನಿಂದ ಗಂಟಲನ್ನು ಗಾರ್ಗಲ್​ ಮಾಡುವುದರಿಂದ ಟಾನ್ಸಿಲ್​ಗೆ ತಗುಲಿರುವ ಸೋಂಕನ್ನು ನಿವಾರಿಸುತ್ತದೆ, ಬಿಸಿ ನೀರಿಗೆ ಉಪ್ಪನ್ನು ಸೇರಿಸಿ ಗಂಟಲಿಗೆ ಹಾಕಿ ಗಾರ್ಗಲ್​ ಮಾಡಿ. ದಿನಕ್ಕೆ ಎರಡು  ಬಾರಿಯದರೂ ಈ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ಟಾನ್ಸಿಲ್​ ನೋವಿನಿಂದ ಮುಕ್ತಿ ಪಡೆಯಬಹುದು. ಇದು ಚಳಿಗಾಲದಲ್ಲಿ ಕಾಡುವ ಗಂಟಲು ನೋವಿಗೂ ಪರಿಹಾರವಾಗಿದೆ.

ಹಾಲು ಮತ್ತು ಜೇನುತುಪ್ಪ ಹಾಲು ಮತ್ತು ಜೇನುತುಪ್ಪದ ಸೇವನೆಯಿಂದ ಟಾನ್ಸಿಲ್​ ನೋವು ಕಡಿಮೆಯಾಗುತ್ತದೆ. ಪ್ರತಿದಿನ ಮಲಗುವ ಮೊದಲು ಉಗುರು ಬೆಚ್ಚಗಿನ ಹಾಲಿಗೆ ಹಾಲು ಮತ್ತು ಜೇನುತುಪ್ಪವನ್ನು ಸೇರಿಸಿ ಸೇವಿಸಿ. ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ.  ಗಂಟಲಿನಲ್ಲಿರುವ ಬ್ಯಾಕ್ಟೀರಿಯಾಗಳನ್ನು ಸ್ವಚ್ಛಗೊಳಿಸಿ ನೋವನ್ನು ನಿವಾರಿಸುತ್ತದೆ. ಹಾಲು ನಿಮ್ಮ ದೇಹಕ್ಕೆ ಪ್ರೋಟೀನ್​ ಅಂಶಗಳನ್ನು ಪೂರೈಸಿ ಆರೋಗ್ಯವನ್ನು ಕಾಪಾಡುತ್ತದೆ.

ಅರಿಶಿನ ಮತ್ತು ಕರಿಮೆಣಸಿನ ಕಾಳು ಅರಿಶಿನ ಆ್ಯಂಟಿಬಯೋಟಿಕ್​ ಆಗಿದೆ. ಇದು ನಿಮ್ಮ ಗಂಟಲಿನ ಸೋಂಕನ್ನು ನಿವಾರಿಸಲು ಸಹಾಯ ಮಾಡುತ್ತದೆ. ಅದೇ ರೀತಿ ಕರಿಮೆಣಸಿನ ಕಾಳು ದೇಹವನ್ನು ಬೆಚ್ಚಗಿರಿಸಲು ಸಹಾಯ ಮಾಡುತ್ತದೆ. ಆದ್ದರಿಂದ ಅರಿಶಿನದ ಜೊತೆ ಕರಿಮೆಣಸಿನ ಕಾಳಿನ ಪುಡಿಯನ್ನು ಬಿಸಿ ಹಾಲಿಗೆ ಸೇರಿಸಿ ಸೇವಿಸಿ ಇದು ನಿಮ್ಮ ಟಾನ್ಸಿಲ್​ ಸೋಂಕನ್ನು ನಿವಾರಿಸಿ ನೋವಿನಿಂದ ಮುಕ್ತಿ ನೀಡುತ್ತದೆ. 2 ರಿಂದ 3 ದಿನಗಳವರೆಗೆ ಇದನ್ನು ಮುಂದುವರೆಸಿ.

ಇದನ್ನೂ ಓದಿ:

New Year 2022: ಫಿಟ್​ ಆಗಿರಲು ಹೊಸ ವರ್ಷದ ಆರಂಭದಲ್ಲಿ ಈ ಅಭ್ಯಾಸಗಳನ್ನು ರೂಢಿಸಿಕೊಳ್ಳಿ

Published On - 3:30 pm, Fri, 31 December 21

Follow Us
Web contact
Web contact

TV9 Kannada

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ