AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತಿ ವೇಗದಲ್ಲಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಾ? ಈ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ!

ಅತಿ ವೇಗದಲ್ಲಿ ದೇಹದ ತೂಕ ಇಳಿಸಿಕೊಳ್ಳಲು ಮುಂದಾದಾಗ ಕೆಲವು ಆರೋಗ್ಯ ತೊಂದರೆಗಳೂ ಸಹ ಎದುರಾಗಬಹುದು. ಹಾಗಾಗಿ ಒಂದೇ ಬಾರಿಗೆ ತೂಕ ಇಳಿಸಿಕೊಳ್ಳಬೇಕು ಎನ್ನುವ ಆತುರದಲ್ಲಿ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ತಂದುಕೊಳ್ಳಬೇಡಿ.

ಅತಿ ವೇಗದಲ್ಲಿ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದೀರಾ? ಈ ಕೆಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಎಚ್ಚರ!
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 06, 2021 | 9:03 AM

Share

ತೂಕ ಕಡಿಮೆ ಮಾಡಿಕೊಳ್ಳುವಲ್ಲಿ ಜನರು ಹೆಚ್ಚಿನ ಗಮನವಹಿಸುತ್ತಾರೆ. ದೇಹದಲ್ಲಿನ ಹೆಚ್ಚಿನ ಕ್ಯಾಲೋರಿ ಕರಗಿಸುವುದು ಆರೋಗ್ಯದ ದೃಷ್ಟಿಯಿಂದ ಒಳ್ಳೆಯದು. ಆದರೆ ಅತಿ ವೇಗದಲ್ಲಿ ದೇಹದ ತೂಕ ಇಳಿಸಿಕೊಳ್ಳಲು ಮುಂದಾದಾಗ ಕೆಲವು ಆರೋಗ್ಯ ತೊಂದರೆಗಳೂ ಸಹ ಎದುರಾಗಬಹುದು. ಹಾಗಾಗಿ ಒಂದೇ ಬಾರಿಗೆ ತೂಕ ಇಳಿಸಿಕೊಳ್ಳಬೇಕು ಎನ್ನುವ ಆತುರದಲ್ಲಿ ಇನ್ನಿತರ ಆರೋಗ್ಯ ಸಮಸ್ಯೆಗಳನ್ನು ತಂದುಕೊಳ್ಳಬೇಡಿ. ಇದು ಚಯಾಪಚಯಕ್ಕೆ ಒಳ್ಳೆಯದಲ್ಲ. ಜತೆಗೆ ಪೌಷ್ಟಿಕಾಂಶದ ಕೊರತೆಯನ್ನು ಉಂಟು ಮಾಡುತ್ತದೆ. ವೇಗದಲ್ಲಿ ತೂಕ ಇಳಿಸಿಕೊಳ್ಳುವ ಪ್ರಕ್ರಿಯೆ ತಕ್ಷಣದಲ್ಲಿ ಪರಿಣಾಮ ಕಂಡರೂ ಸಹ ಭವಿಷ್ಯದಲ್ಲಿ ಅದು ಆರೋಗ್ಯ ತೊಂದರೆಗಳನ್ನು ಉಂಟು ಮಾಡುತ್ತದೆ.

ಹಸಿವು ಹೆಚ್ಚಾಗುತ್ತದೆ ಕಡಿಮೆ ಸಮಯದಲ್ಲಿ ತೂಕ ಇಳಿಸಿಕೊಳ್ಳಲು ಬಯಸಿದಾಗ ಕೆಲವು ಬಾರಿ ನೀವು ಅಗತ್ಯಕ್ಕಿಂತ ಹೆಚ್ಚಿನದನ್ನು ಸೇವಿಸುತ್ತೀರಿ. ಏಕೆಂದರೆ ಹಸಿವಾಗುವುದರಿಂದ ಹೊಟ್ಟೆ ತುಂಬಿಸಿಕೊಳ್ಳಲು ಆಹಾರ ಸೇವಿಸುತ್ತೀರಿ. ಆಗ ದೀರ್ಘ ಅವಧಿಯ ಆರೋಗ್ಯ ತೊಂದರೆಗಳನ್ನು ನೀವು ಎದುರಿಸಬಹುದಾದ ಸಾಧ್ಯತೆಗಳು ಹೆಚ್ಚಿರುತ್ತದೆ.

ಪೌಷ್ಠಿಕಾಂಶದ ಕೊರತೆ ನೀವು ತೂಕವನ್ನು ಇಳಿಸಿಕೊಳ್ಳುವ ದೃಷ್ಟಿಯಿಂದ ಒಂದೇ ಬಾರಿಗೆ ಆಹಾರ ಸೇವನೆಯನ್ನು ಕಡಿಮೆ ಮಾಡುತ್ತೀರಿ, ಇಲ್ಲವೇ ಕೆಲವರಂತೂ ಒಂದು ಹೊತ್ತಿನ ಆಹಾರವನ್ನೇ ತ್ಯಜಿಸುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಅಗತ್ಯವಿರುವ ಪೋಷಕಾಂಶಗಳು, ಜೀವಸತ್ವಗಳು ಮತ್ತು ಖನಿಜಗಳು ದೇಹಕ್ಕೆ ಸಿಗುವುದಿಲ್ಲ. ಇದರಿಂದ ಪೋಷಕಾಂಶದ ಕೊರತೆ, ರೋಗ ನಿರೋಧಕ ಶಕ್ತಿ ಕಡಿಮೆಯಾಗುವುದು ಮತ್ತು ತೀವ್ರವಾದ ಆಯಾಸದಂತಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಮನಸ್ಥಿತಿ ಹದಗೆಡುವುದು ಕೆಲವು ಬಾರಿ ಸಮಸ್ಯೆಗಳು ನಿಮ್ಮನ್ನು ಒತ್ತಡಕ್ಕೆ ಸಿಲುಕಿಸಬಹುದು. ಇದರಿಂದ ಮನಸ್ಥಿತಿ ಬದಲಾವಣೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಇದರಿಂದ ನಿಮ್ಮ ಆಲೋಚನೆಗಳು ಸಂಪೂರ್ಣವಾಗಿ ಬದಲಾಗುತ್ತವೆ. ಮನಸ್ಥಿತಿ ಹದಗೆಡಲು ಕಾರಣವಾಗುವ ಸಾಧ್ಯತೆಗಳು ಹೆಚ್ಚಿರುತ್ತದೆ.

ಇದನ್ನೂ ಓದಿ:

Health Tips: ಈ 5 ರೋಗ ಲಕ್ಷಣಗಳು ಶ್ವಾಸಕೋಶ ಕಾಯಿಲೆಯ ಎಚ್ಚರದ ಗಂಟೆ, ಎಂದಿಗೂ ನಿರ್ಲಕ್ಷಿಸಬೇಡಿ

Health Tips: ಶೀತ, ಕೆಮ್ಮಿನ ಸಮಸ್ಯೆಗಳ ಪರಿಹಾರಕ್ಕಾಗಿ ಸಲಹೆಗಳು ಇಲ್ಲಿವೆ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು