AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Turmeric Water: ಬೆಳಿಗ್ಗೆ ಅರಿಶಿನದ ನೀರು ಸೇವಿಸುವುದರಿಂದಾಗುವ 7 ಪ್ರಯೋಜನಗಳಿವು

ಅರಿಶಿನವು ಅಡುಗೆಗೆ ಹಳದಿ ಬಣ್ಣವನ್ನು ನೀಡುವ ಮಸಾಲೆಯಾಗಿದೆ. ಇದನ್ನು ಸಾವಿರಾರು ವರ್ಷಗಳಿಂದ ಭಾರತದಲ್ಲಿ ಮಸಾಲೆ ಮತ್ತು ಔಷಧೀಯ ಮೂಲಿಕೆಯಾಗಿ ಬಳಸಲಾಗುತ್ತಿದೆ. ಅರಿಶಿನವು ಔಷಧೀಯ ಗುಣಗಳನ್ನು ಹೊಂದಿರುವ ಸಂಯುಕ್ತಗಳನ್ನು ಹೊಂದಿದೆ. ಈ ಸಂಯುಕ್ತಗಳನ್ನು ಕರ್ಕ್ಯುಮಿನಾಯ್ಡ್ಸ್ ಎಂದು ಕರೆಯಲಾಗುತ್ತದೆ. ಇದರಲ್ಲಿ ಅತ್ಯಂತ ಮುಖ್ಯವಾದದ್ದು ಕರ್ಕ್ಯುಮಿನ್. ಇದು ಅರಿಶಿನದ ಮುಖ್ಯ ಸಕ್ರಿಯ ಘಟಕಾಂಶವಾಗಿದೆ.

Turmeric Water: ಬೆಳಿಗ್ಗೆ ಅರಿಶಿನದ ನೀರು ಸೇವಿಸುವುದರಿಂದಾಗುವ 7 ಪ್ರಯೋಜನಗಳಿವು
ಅರಿಶಿನದ ನೀರು
ಸುಷ್ಮಾ ಚಕ್ರೆ
|

Updated on: Mar 01, 2024 | 2:33 PM

Share

ಅರಿಶಿನ (Turmeric) ಕರ್ಕ್ಯುಮಿನ್‌ ಅಂಶವನ್ನು ಹೊಂದಿರುವ ಪದಾರ್ಥವಾಗಿದೆ. ಇದು ಆಗ್ನೇಯ ಏಷ್ಯಾ ಮತ್ತು ಮಧ್ಯಪ್ರಾಚ್ಯ ಅಡುಗೆಗಳಲ್ಲಿ ಸಾಮಾನ್ಯವಾಗಿ ಬಳಸಲಾಗುವ ಪದಾರ್ಥವಾಗಿದೆ. ಉಸಿರಾಟದ ಸಮಸ್ಯೆಗಳಂತಹ ತೊಂದರೆಗಳಿಗೆ ಚಿಕಿತ್ಸೆ ನೀಡಲು ಅರಿಶಿನವನ್ನು ಶತಮಾನಗಳಿಂದಲೂ ಔಷಧಿಯಾಗಿ ಬಳಸಲಾಗುತ್ತಿದೆ. ಅರಿಶಿನವನ್ನು ಕ್ಯಾನ್ಸರ್ (Cancer) ವಿರುದ್ಧ ಹೋರಾಡುವ, ಖಿನ್ನತೆಯನ್ನು ಕಡಿಮೆ ಮಾಡುವ ಸೂಪರ್ ಫುಡ್ ಆಗಿದೆ.

ಅರಿಶಿನದಲ್ಲಿರುವ ಹಲವಾರು ಸಂಯುಕ್ತಗಳು ನಮ್ಮ ಆರೋಗ್ಯವನ್ನು ಬೆಂಬಲಿಸುತ್ತದೆ. ಇವುಗಳಲ್ಲಿ ಅತ್ಯಂತ ಪ್ರಸಿದ್ಧವಾದದ್ದು ಕರ್ಕ್ಯುಮಿನ್. ಇದು ಖಿನ್ನತೆಯನ್ನು ತಗ್ಗಿಸಲು ಸಹಾಯ ಮಾಡುತ್ತದೆ. ದಿನವೂ ಬೆಳಗ್ಗೆ ಅರಿಶಿನ ಹಾಕಿದ ನೀರು ಕುಡಿಯವುದರಿಂದ ಆರೋಗ್ಯಕ್ಕೆ ಯಾವ ರೀತಿಯ ಪ್ರಯೋಜನಗಳಾಗುತ್ತವೆ ಎಂಬ ಮಾಹಿತಿ ಇಲ್ಲಿದೆ.

ಇದನ್ನೂ ಓದಿ: Turmeric Side Effects: ಅರಿಶಿನವನ್ನು ಹೆಚ್ಚು ಬಳಸುತ್ತೀರಾ?; ಅದರ ತೊಂದರೆಗಳ ಬಗ್ಗೆಯೂ ನಿಮಗೆ ತಿಳಿದಿರಲಿ

  1. ಅರಿಶಿನದ ನೀರಿನಲ್ಲಿ ಕರ್ಕ್ಯುಮಿನ್ ಎಂಬ ಉತ್ಕರ್ಷಣ ನಿರೋಧಕವಿದೆ. ಇದು ನಮ್ಮ ದೇಹದಲ್ಲಿನ ಸ್ವತಂತ್ರ ರಾಡಿಕಲ್​ಗಳ ವಿರುದ್ಧ ಹೋರಾಡುತ್ತದೆ ಮತ್ತು ದೀರ್ಘಕಾಲದ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
  2. ಇದು ನಮ್ಮ ಜೀರ್ಣಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಮತ್ತು ಉಬ್ಬುವಿಕೆಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ.
  3. ಅರಿಶಿನವು ನಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಹೃದ್ರೋಗದ ಅಪಾಯವನ್ನು ತಡೆಯುತ್ತದೆ.
  4. ಅರಿಶಿನದ ಉರಿಯೂತದ ಗುಣಲಕ್ಷಣಗಳು ಕೀಲು ನೋವು ಮತ್ತು ಸಂಧಿವಾತದಂತಹ ಉರಿಯೂತ ಸಂಬಂಧಿತ ಸಮಸ್ಯೆಗಳನ್ನು ತೊಡೆದುಹಾಕಲು ನೈಸರ್ಗಿಕ ಪರಿಹಾರವಾಗಿದೆ.
  5. ಅರಿಶಿನದಲ್ಲಿರುವ ಆ್ಯಂಟಿಆಕ್ಸಿಡೆಂಟ್‌ಗಳು ನಮ್ಮ ರಕ್ತವನ್ನು ಶುದ್ಧೀಕರಿಸಲು ಮತ್ತು ತ್ವಚೆಯನ್ನು ಕಾಂತಿಯುತವಾಗಿಸಲು ಸಹಾಯಕವಾಗಿದೆ.
  6. ಅರಿಶಿನ ನೀರನ್ನು ನಿಯಮಿತವಾಗಿ ಸೇವಿಸುವುದರಿಂದ ನಮ್ಮ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸಬಹುದು ಮತ್ತು ಸೋಂಕುಗಳನ್ನು ದೂರವಿಡಬಹುದು.
  7. ಅರಿಶಿನ ನೀರಿನ ನಿರ್ವಿಶೀಕರಣ ಗುಣಲಕ್ಷಣಗಳು ದೇಹದಿಂದ ವಿಷವನ್ನು ತೆಗೆದುಹಾಕುತ್ತದೆ, ಒಟ್ಟಾರೆ ಶುದ್ಧೀಕರಣ ಪ್ರಕ್ರಿಯೆಯನ್ನು ಹೆಚ್ಚಿಸುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ