AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕೆಲಸ ಮಾಡದಿದ್ರೂ ಸುಸ್ತಾಗುತ್ತಿದ್ದರೆ ಈ ರೋಗ ಬಂದಿದೆ ಎಂದರ್ಥ!

ಕೆಲವೊಮ್ಮೆ ನಾವು ಯಾವುದೇ ರೀತಿಯ ಕೆಲಸ ಮಾಡದಿದ್ದರೂ ದೇಹ ದಣಿಯುತ್ತದೆ. ಯಾವ ಕೆಲಸ ಮಾಡುವುದಕ್ಕೂ ಆಲಸ್ಯ ಬಿಡುವುದಿಲ್ಲ. ಹೀಗೆ ಜೀವನ ಜಿಗುಪ್ಸೆಯ ಹಂತಕ್ಕೆ ಹೋಗಿರುತ್ತದೆ. ನಿಮಗೂ ಹೀಗೆ ಆಗುತ್ತಿದ್ದರೆ ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬೇಡಿ. ಬೇಗ ಸುಸ್ತಾಗುವುದು ನಿಮ್ಮ ದೇಹ ನಿಮಗೆ ನೀಡುತ್ತಿರುವ ಎಚ್ಚರಿಕೆ. ನಿಮಗೂ ಈ ತರನಾದ ಸಮಸ್ಯೆಗಳು ಕಂಡುಬರುತ್ತಿರುವುದರ ಹಿಂದೆ ಕೆಲವು ಆರೋಗ್ಯ ಸಮಸ್ಯೆಗಳಿರುತ್ತವೆ. ಹಾಗಾದರೆ ಯಾವ ರೀತಿಯ ಲಕ್ಷಣ ಒಳ್ಳೆಯದಲ್ಲ? ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಯಾವ ಕೆಲಸ ಮಾಡದಿದ್ರೂ ಸುಸ್ತಾಗುತ್ತಿದ್ದರೆ ಈ ರೋಗ ಬಂದಿದೆ ಎಂದರ್ಥ!
Chronic Fatigue
ಪ್ರೀತಿ ಭಟ್​, ಗುಣವಂತೆ
|

Updated on: Aug 18, 2025 | 4:22 PM

Share

ಪ್ರಸ್ತುತ ದಿನಗಗಳಲ್ಲಿ ಹೆಚ್ಚಿನವರು ಆಯಾಸದಿಂದ (Fatigue) ಬಳಲುತ್ತಿದ್ದಾರೆ. ಸಣ್ಣ ಕೆಲಸ ಮಾಡಿ ಮುಗಿಸುವುದರೊಳಗೆ ಆಲಸ್ಯ ಅನುಭವಕ್ಕೆ ಬರುವಂತಾಗುತ್ತದೆ. ನಾಲ್ಕು ಹೆಜ್ಜೆ ನಡೆದರೆ ಸಾಕು ಸುಸ್ತಾಗುತ್ತೆ. ಸಾಮಾನ್ಯವಾಗಿ ಸರಿಯಾಗಿ ಊಟ ಮಾಡದಿದ್ದಾಗ, ಜ್ವರ ಅಥವಾ ಶೀತದಂತಹ ಕಾರಣಗಳಿಂದ ದಣಿವಾಗುವುದು ಸಾಮಾನ್ಯ. ಆದರೆ ಯಾವುದೇ ಕಾರಣವಿಲ್ಲದೆ ಸುಸ್ತಾಗುತ್ತಿದ್ದರೆ ಅಥವಾ ದೇಹ ದಣಿದ ಅನುಭವವಾಗುತ್ತಿದ್ದಾರೆ, ಆಲಸ್ಯ ಹೆಚ್ಚಾಗಿದ್ದರೆ ಅದು ನಿಮ್ಮ ದೇಹಕ್ಕೆ ಒಳ್ಳೆಯದಲ್ಲ. ಈ ರೀತಿಯ ಲಕ್ಷಣ ಕಂಡುಬಂದಾಗ ಬಹಳ ಜಾಗರೂಕರಾಗಿರಬೇಕು ಮಾತ್ರವಲ್ಲ ಎಷ್ಟು ಬೇಗ ಸಾಧ್ಯವೋ ಅಷ್ಟು ಬೇಗ ವೈದ್ಯರ ಸಲಹೆ ತೆಗೆದುಕೊಳ್ಳಬೇಕು. ನಿಮಗೂ ಆಗಾಗ ಈ ತರನಾದ ಸಮಸ್ಯೆಗಳು ಕಂಡುಬರುತ್ತಿದ್ದರೆ ಕೆಲವು ಆರೋಗ್ಯ (Health) ಸಮಸ್ಯೆಗಳನ್ನು ಎದುರಿಸುತ್ತಿರಬಹುದು. ಹಾಗಾದರೆ ಯಾವ ರೀತಿಯ ಲಕ್ಷಣ ಒಳ್ಳೆಯದಲ್ಲ? ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ರಕ್ತಹೀನತೆ

ಯಾವುದೇ ರೀತಿಯ ಕೆಲಸ ಮಾಡದಿದ್ದರೂ ದೇಹ ದಣಿದ ಅನುಭವವಾಗುತ್ತಿದ್ದರೆ ನೀವು ರಕ್ತಹೀನತೆಯಿಂದ ಬಳಲುತ್ತಿದ್ದೀರಿ ಎಂದರ್ಥ. ರಕ್ತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕೆಂಪು ರಕ್ತ ಕಣಗಳು ಇಲ್ಲದಿದ್ದಾಗ, ದೇಹವು ಬೇಗನೆ ದಣಿಯುತ್ತದೆ. ಏಕೆಂದರೆ ಶ್ವಾಸಕೋಶದಿಂದ ದೇಹದ ಎಲ್ಲಾ ಭಾಗಗಳಿಗೆ ಆಮ್ಲಜನಕವನ್ನು ಸಾಗಿಸಲು ಕೆಂಪು ರಕ್ತ ಕಣಗಳು ಅವಶ್ಯಕವಾಗಿರುತ್ತದೆ ಇದು ಇಲ್ಲದಿದ್ದಾಗ ಬೇಗನೆ ಆಯಾಸ ಉಂಟಾಗುತ್ತದೆ.

ಹೈಪೋಥೈರಾಯ್ಡಿಸಮ್

ತಜ್ಞರು ಹೇಳುವಂತೆ ಹೈಪೋಥೈರಾಯ್ಡಿಸಮ್ ಕೂಡ ಬೇಗನೆ ಸುಸ್ತಾಗಲು ಒಂದು ಕಾರಣವಾಗಿರುತ್ತದೆ. ದೇಹದಲ್ಲಿ ಥೈರಾಯ್ಡ್ ಹಾರ್ಮೋನುಗಳು ಕಡಿಮೆಯಾದಾಗ, ಆಯಾಸ ಪ್ರಾರಂಭವಾಗುತ್ತದೆ. ಹಾರ್ಮೋನುಗಳ ಕಡಿಮೆ ಬಿಡುಗಡೆಯಾಗುವುದರಿಂದ, ಚಯಾಪಚಯ ಕ್ರಿಯೆ ನಿಧಾನವಾಗುತ್ತದೆ, ಇದನ್ನೇ ಹೈಪೋಥೈರಾಯ್ಡಿಸಮ್ ಎಂದು ಕರೆಯಲಾಗುತ್ತದೆ. ಪರಿಣಾಮವಾಗಿ, ದೇಹದ ಸ್ನಾಯುಗಳಲ್ಲಿ ಆಯಾಸ ಮತ್ತು ದೌರ್ಬಲ್ಯದಂತಹ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಟೈಪ್ 2 ಮಧುಮೇಹ

ಮಧುಮೇಹದಿಂದ ಬಳಲುತ್ತಿರುವವರು ಬೇಗನೆ ಸುಸ್ತಾಗುವ ಸಾಧ್ಯತೆ ಇರುತ್ತದೆ. ಟೈಪ್ 2 ಮಧುಮೇಹ ಹೊಂದಿರುವವರು ತಮ್ಮ ದೇಹದಲ್ಲಿನ ಗ್ಲೂಕೋಸ್ ಅನ್ನು ಸಂಪೂರ್ಣವಾಗಿ ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ, ಇದು ಆಯಾಸಕ್ಕೆ ಕಾರಣವಾಗುತ್ತದೆ.

ಖಿನ್ನತೆ

ಬೇಗ ಸುಸ್ತಾಗಲು ಇನ್ನೊಂದು ಕಾರಣ ಖಿನ್ನತೆ. ಇತ್ತೀಚೆಗೆ ಈ ಸಮಸ್ಯೆ ಗಮನಾರ್ಹವಾಗಿ ಹೆಚ್ಚುತ್ತಿದೆ. ದೈಹಿಕ ಪರಿಶ್ರಮಕ್ಕಿಂತ ಹೆಚ್ಚಾಗಿ ಮಾನಸಿಕ ಒತ್ತಡದಿಂದ ಸುಸ್ತಾಗುವವರ ಸಂಖ್ಯೆ ಹೆಚ್ಚುತ್ತಿದೆ. ಒತ್ತಡದಿಂದಾಗಿ ಜನರಿಗೆ ದಣಿದ ಅನುಭವವಾಗುತ್ತದೆ.

ಸಂಧಿವಾತ

ದೇಹವು ಬೇಗನೆ ದಣಿಯಲು ಮತ್ತೊಂದು ಪ್ರಮುಖ ಕಾರಣವೆಂದರೆ ಸಂಧಿವಾತ. ಇದು ದೇಹದ ಆರೋಗ್ಯಕರ ಕೋಶಗಳ ಮೇಲೆ ದಾಳಿ ಮಾಡುತ್ತದೆ ಮತ್ತು ಮೂಳೆಗಳ ಮೇಲೆ ಮಾತ್ರವಲ್ಲದೆ ಜೀವಕೋಶಗಳ ಮೇಲೂ ಪರಿಣಾಮ ಬೀರುವುದರಿಂದ, ದೇಹದಲ್ಲಿ ತ್ವರಿತ ಆಯಾಸದ ಅನುಭವಾಗುತ್ತದೆ.

ಇದನ್ನೂ ಓದಿ: ತುಂಬಾ ಆಯಾಸ, ನಿಶ್ಯಕ್ತಿಯಾಗಿ ದೇಹದಲ್ಲಿ ಹುಮ್ಮಸ್ಸು ಇಲ್ಲದೆ ಇದ್ದರೆ ಈ ಸಲಹೆ ಪಾಲಿಸಿ

ನಿದ್ರಾಹೀನತೆ

ಮನುಷ್ಯನಿಗೆ ನಿದ್ರೆ ಸರಿಯಾಗಿ ಆಗದಿದ್ದರೂ ಕೂಡ ಆರೋಗ್ಯ ಚೆನ್ನಾಗಿರುವುದಿಲ್ಲ. ಹಾಗಾಗಿ ಈ ನಿದ್ರಾಹೀನತೆಯು ಆಯಾಸಕ್ಕೆ ಪ್ರಮುಖ ಕಾರಣ ಎಂದು ತಜ್ಞರು ಹೇಳುತ್ತಾರೆ. ರಾತ್ರಿ ಸರಿಯಾಗಿ ನಿದ್ರೆ ಮಾಡದಿರುವುದು ದಿನವಿಡೀ ನಿಮ್ಮ ಮೇಲೆ ಪರಿಣಾಮ ಬೀರುತ್ತದೆ, ಇದರಿಂದಾಗಿ ನೀವು ಯಾವಾಗಲೂ ದಣಿದಂತೆ ಕಾಣುತ್ತೀರಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?