AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Healthy food: ಸಂಸತ್ತಿಗೆ ಸೈಕಲ್ಲಿನಲ್ಲಿ ಬರುವ ಆರೋಗ್ಯ ಸಚಿವ ತಮ್ಮ ಕ್ಯಾಂಟೀನ್​​ನಲ್ಲಿ ಇನ್ನು ಆರೋಗ್ಯಕರ ಆಹಾರವಷ್ಟೇ ಲಭ್ಯ ಎಂದರು!

Mansukh Mandaviya: ಸ್ವತಃ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಅವರೇ ಆರೋಗ್ಯಕ್ಕೆ ಹೆಚ್ಚು ನೀಡುವ ವ್ಯಕ್ತಿ. ಅವರು ಸಂಸತ್ತಿಗೆ ಸೈಕಲ್ಲಿನಲ್ಲಿ ಬರುತ್ತಾರೆ. ನಿಯಮಿತ ಆರೋಗ್ಯ ವ್ಯಾಯಾಮಗಳು, ಯೋಗ ಅವರ ದಿನಚರಿಯಲ್ಲಿದೆ. ಹಾಗಾಗಿ ಮನೆಯೇ ಪಾಠಶಾಲೆ ಎಂಬಂತೆ ತಮ್ಮ ಸಚಿವಾಲಯದಿಂದಲೇ ಬದಲಾವಣೆ ಬಯಸಿ, Healthy foodಗೆ ಮಣೆ ಹಾಕಿದ್ದಾರೆ.

Healthy food: ಸಂಸತ್ತಿಗೆ ಸೈಕಲ್ಲಿನಲ್ಲಿ ಬರುವ ಆರೋಗ್ಯ ಸಚಿವ ತಮ್ಮ ಕ್ಯಾಂಟೀನ್​​ನಲ್ಲಿ ಇನ್ನು ಆರೋಗ್ಯಕರ ಆಹಾರವಷ್ಟೇ ಲಭ್ಯ ಎಂದರು!
ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ತಮ್ಮ ಕ್ಯಾಂಟೀನ್​​ನಲ್ಲಿ ಇನ್ನು ಆರೋಗ್ಯಕರ ಆಹಾರವಷ್ಟೇ ಲಭ್ಯ ಎಂದರು!
TV9 Web
| Edited By: ಸಾಧು ಶ್ರೀನಾಥ್​|

Updated on: Feb 09, 2022 | 6:58 AM

Share

ನವದೆಹಲಿ: ಕೇಂದ್ರ ಸರ್ಕಾರ ಕಾಲಕಾಲಕ್ಕೆ ದೇಶೀಯ ಸಂಪ್ರದಾಯ ಪಾಲನೆಗೆ ಒತ್ತುನೀಡುತ್ತಾ ಬಂದಿದೆ. ಆಗಾಗ್ಗೆ ಈ ನಿಟ್ಟಿನಲ್ಲಿ ಅನೇಕ ಮಾರ್ಪಾಡುಗಳನ್ನು ತರುವುದು ಸಹಜವಾಗಿದೆ. ಮುಂದುವರಿದ ಭಾಗವಾಗಿ ಇದೀಗ ಕೇಂದ್ರ ಆರೋಗ್ಯ ಸಚಿವಾಲಯದ (Union Health Ministry) ಕ್ಯಾಂಟೀನ್​​ನಲ್ಲಿ (canteen) ಆರೋಗ್ಯಕರ ಆಹಾರ ಸರಬರಾಜಿಗಷ್ಟೇ ಪ್ರಾಮುಖ್ಯತೆ ನೀಡಿದೆ. ಕರಿದ ಆಹಾರ ಪದಾರ್ಥ ಮತ್ತು ಕುರುಕುಲು ತಿಂಡಿಗೆ ಕೊಕ್​ ನೀಡಲಾಗಿದೆ. ಸಮೋಸಾ (samosas), ಬ್ರೆಡ್​ ಪಕೋಡಾಗಳಿಗೆ ಗುಡ್​ಬೈ ಹೇಳಲಾಗಿದೆ. ದಾಲ್​, ದಾಲ್​ ದೋಸೆ, ಗ್ರೀನ್​ ಪೀ, ಸಾಂಬಾರು, ಮಿಲೆಟ್​ ರೊಟ್ಟಿ (millet rotis), ಮಿಲೆಟ್​ ಪಲಾವ್ ಇವೇ ಮುಂತಾದ ಆರೋಗ್ಯಕರ ಆಹಾರಕ್ಕೆ ಮಣೆ ಹಾಕಲಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದಲ್ಲಿ ಇನ್ನು ಕರಿದ, ಕುರುಕುಲು ತಿಂಡಿ ಸಿಗುವುದಿಲ್ಲ! ಕೇಂದ್ರ ಆರೋಗ್ಯ ಸಚಿವಾಲಯದ ಮೂಲಗಳ ಪ್ರಕಾರ ಈ ವ್ಯವಸ್ಥೆ ಅದಾಗಲೇ ಪ್ರಯೋಗಾರ್ಥ ಚಾಲ್ತಿಯಲ್ಲಿದೆ. ಗ್ರಾಹಕರ ಪ್ರತಿಕ್ರಿಯೆ ನೋಡಿಕೊಂಡು ಅಲ್ಪಸ್ವಲ್ಪ ಏರ್ಪಾಡುಗಳೊಂದಿಗೆ ಇದನ್ನೇ ಕಾಯಂ ವ್ಯವಸ್ಥೆಯನ್ನಾಗಿಸಲಾಗುವುದು ಎಂದು ತಿಳಿದುಬಂದಿದೆ. ದಾಲ್​ ದೋಸೆ ಸದ್ಯಕ್ಕೆ 10 ರೂಪಾಯಿ ದರ ನಿಗದಿಪಡಿಸಲಾಗಿದೆ. ಅಪ್ಪಟ ದೇಶೀಯ ಬೆಳಗಿನ ತಿಂಡಿ 25 ರೂಪಾಯಿಗೆ ಸಿಗಲಿದೆ. ಇನ್ನು ಮಧ್ಯಾಹ್ನದ ವೇಳೆಗೆ ಊಟ 40 ರೂಪಾಯಿಗೆ ಸಿಗಲಿದೆ.

ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಅವರ ಒತ್ತಾಸೆಯ ಫಲವಾಗಿ ಈ ವ್ಯವಸ್ಥೆ ಏರ್ಪಾಡಾಗಿದೆ. ಕಳೆದ ವರ್ಷ ಅಕ್ಟೋಬರ್​ ತಿಂಗಳಲ್ಲಿ ತಾವು ಅಧಿಕಾರಕ್ಕೆ ಬಂದಾಗಲೇ ಇಂತಹ ದಾಲ್​, ದಾಲ್​ ದೋಸೆ, ಗ್ರೀನ್​ ಪೀ, ಸಾಂಬಾರು, ಮಿಲೆಟ್​ ರೊಟ್ಟಿ, ಮಿಲೆಟ್​ ಪಲಾವ್ ದೇಶೀಯ ಆಹಾರಕ್ಕೆ ಒತ್ತು ನೀಡುವುದಾಗಿ ಅವರು ಘೋಷಿಸಿದ್ದರು. ಹಾಗಂತ ಕಳೆದ ಅಕ್ಟೋಬರ್​ ತಿಂಗಳಿಂದಲೇ ಈ ವ್ಯವಸ್ಥೆ ಜಾರಿಗೆ ಬಂದಿದೆ. ಗ್ರಾಹಕರೂ ದನ್ನುಇಷ್ಟಪಟ್ಟಿದ್ದಾರೆ. ಹಾಗಾಗಿ ಇದನ್ನು ಮುಂದುವರಿಸಲಾಗುವುದು ಆರೋಗ್ಯಕ್ಕೆ ಕುತ್ತು ತರುವಂತಹ ಕರಿದ ಆಹಾರ ಪದಾರ್ಥ ಮತ್ತು ಕುರುಕುಲು ತಿಂಡಿಗಳಿಗೆ ಗುಡ್​ಬೈ ಹೇಳಲಾಗಿದೆ.

ಸ್ವತಃ ಆರೋಗ್ಯ ಸಚಿವ ಮನಸುಖ್ ಮಾಂಡವೀಯಾ ಅವರೇ ಆರೋಗ್ಯಕ್ಕೆ ಹೆಚ್ಚು ನೀಡುವ ವ್ಯಕ್ತಿ. ಅವರು ಸಂಸತ್ತಿಗೆ ಸೈಕಲ್ಲಿನಲ್ಲಿ ಬರುತ್ತಾರೆ. ಪ್ರತಿ ದಿನಾ 20 ಕಿಮೀ ಸೈಕ್ಲಿಂಗ್​ ಮಾಡುವ ಅಭ್ಯಾಸ ಅವರಿಗಿದೆ. ನಿಯಮಿತ ಆರೋಗ್ಯ ವ್ಯಾಯಾಮಗಳು, ಯೋಗ ಅವರ ದಿನಚರಿಯಲ್ಲಿದೆ. ಹಾಗಾಗಿ ಮನೆಯೇ ಪಾಠಶಾಲೆ ಎಂಬಂತೆ ತಮ್ಮ ಸಚಿವಾಲಯದಿಂದಲೇ ಬದಲಾವಣೆ ಬಯಸಿ, Healthy foodಗೆ ಮಣೆ ಹಾಕಿದ್ದಾರೆ. (ANI)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ