AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು

Health Tips in Kannada: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು
Garlic peel
TV9 Web
| Updated By: ಝಾಹಿರ್ ಯೂಸುಫ್|

Updated on: Aug 12, 2021 | 3:48 PM

Share

Health Benefits Of Garlic: ಅಡುಗೆ ರುಚಿಯನ್ನು ಹೆಚ್ಚಿಸುವ ಬೆಳ್ಳುಳ್ಳಿಯಿಂದ ಹಲವು ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಇದಾಗ್ಯೂ ಬೆಳ್ಳುಳ್ಳಿ ಸಿಪ್ಪೆಯಿಂದ ಮತ್ತಷ್ಟು ಆರೋಗ್ಯಕಾರಿ ಲಾಭಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತಿದೆಯಾ? ಹೌದು, ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುವ ಬೆಳ್ಳುಳ್ಳಿ ಸಿಪ್ಪೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ವೈರಲ್ ಮತ್ತು ಶಿಲೀಂಧ್ರ ವಿರೋಧಿ ಗುಣಗಳಿವೆ. ಹಾಗೆಯೇ ಬೆಳ್ಳುಳ್ಳಿಯಂತೆ ಇದರ ಸಿಪ್ಪೆಯೂ ಆರೋಗ್ಯ ಮತ್ತು ಸೌಂದರ್ಯವನ್ನು ಅಂದಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಿದ್ರೆ ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುವ ಪ್ರಯೋಜನಗಳೇನು ನೋಡೋಣ.

ಪಾದಗಳ ಊತವನ್ನು ಕಡಿಮೆ ಮಾಡುತ್ತದೆ: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು. ಆ ಬಳಿಕ ನೀರು ಉಗುರು ಬೆಚ್ಚಗಾದ ನಂತರ, ನಿಮ್ಮ ಪಾದಗಳನ್ನು ಈ ನೀರಿನಲ್ಲಿ ಮುಳುಗಿಸಿ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಇದರಿಂದ ಪಾದಗಳ ಊತ ಕಡಿಮೆಯಾಗುತ್ತದೆ.

ಶೀತಕ್ಕೂ ಪರಿಹಾರ: ಶೀತ ಮತ್ತು ನೆಗಡಿ ಸಮಸ್ಯೆಯಿಂದ ಪಾರಾಗಲು ಬೆಳ್ಳುಳ್ಳಿ ಸಿಪ್ಪೆಯ ಮೊರೆ ಹೋಗಬಹುದು. ಇದಕ್ಕಾಗಿ ನೀವು ನೀರಿನ ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ. ಆ ಬಳಿಕ ಆ ನೀರನ್ನು ಸೇವಿಸುವುದರಿಂದ ಶೀಘ್ರ ನಿಮ್ಮ ಶೀತ ಮತ್ತು ನೆಗಡಿ ನಿವಾರಣೆಯಾಗುತ್ತದೆ.

ಚರ್ಮದ ತುರಿಕೆಗೆ ಮನೆಮದ್ದು: ಚರ್ಮದ ಮೇಲಿನ ತುರಿಕೆಯ ಸಮಸ್ಯೆಯನ್ನು ಕಡಿಮೆ ಮಾಡಲು ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ, ಬೆಳ್ಳುಳ್ಳಿ ಸಿಪ್ಪೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಈ ನೀರನ್ನು ತುರಿಕೆ ಇರುವ ಜಾಗಕ್ಕೆ ಹಚ್ಚಿದರೆ ಸಾಕು.

ಕೂದಲ ಹಾರೈಕೆ: ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ ತಣ್ಣಗಾಗಿಸಿದ ನೀರಿನಿಂದ ಕೂದಲನ್ನು ತೊಳೆಯುವುದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಅಲ್ಲದೆ ಕೂದಲು ಉದುರುವಿಕೆ, ಕೂದಲ ಬೇರು ಸಡಿಲಗೊಳ್ಳುವಿಕೆ ಕಡಿಮೆಯಾಗುತ್ತದೆ.

ನೈಸರ್ಗಿಕ ಗೊಬ್ಬರ: ಬೆಳ್ಳುಳ್ಳಿ ಸಿಪ್ಪೆಯನ್ನು ಸಸ್ಯಗಳಿಗೆ ನೈಸರ್ಗಿಕ ಗೊಬ್ಬರವಾಗಿ ಕೂಡ ಬಳಸಬಹುದು. ಇದರಲ್ಲಿರುವ ಪೋಷಕಾಂಶಗಳು ಮಣ್ಣನ್ನು ಉತ್ಕೃಷ್ಟಗೊಳಿತ್ತವೆ. ಇದು ಸಸ್ಯಗಳನ್ನು ಆರೋಗ್ಯವಾಗಿಡುವಲ್ಲಿ ವಿಶೇಷ ಪಾತ್ರವನ್ನು ನಿಭಾಯಿಸುತ್ತದೆ.

ಆಹಾರದ ರುಚಿ ಹೆಚ್ಚಿಸಲು ಬಳಸಿ: ಕೆಲ ಆಹಾರಗಳಲ್ಲಿ ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸುವುದರಿಂದ ರುಚಿ ಕೂಡ ಹೆಚ್ಚಾಗುತ್ತದೆ. ಅದರ ಜೊತೆಗೆ ಆಹಾರದ ಪೌಷ್ಟಿಕಾಂಶ ವರ್ಧಿಸಹುದು. ಮುಖ್ಯವಾಗಿ ನೀವು ಬೆಳ್ಳುಳ್ಳಿ ಸಿಪ್ಪೆಗಳನ್ನು ಸೂಪ್‌ಗಳು, ಸ್ಟಾಕ್‌ಗಳು ಮತ್ತು ತರಕಾರಿ ಪದಾರ್ಥಗಳಲ್ಲಿ ಬಳಸಿದರೆ ಆಹಾರ ರುಚಿ ಹೆಚ್ಚಾಗುತ್ತದೆ.

ಇದನ್ನೂ ಓದಿ: India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

ಇದನ್ನೂ ಓದಿ: India vs England: 2ನೇ ಟೆಸ್ಟ್ ವೇಳೆ ಮಳೆಯಾಗಲಿದೆಯಾ? ಇಲ್ಲಿದೆ 5 ದಿನಗಳ ಸಂಪೂರ್ಣ ಹವಾಮಾನ ವರದಿ

ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ

(Unknown Health Benefits Of Garlic Peels)

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ