Sign In

By signing in or creating an account, you agree with Associated Broadcasting Company's Terms & Conditions and Privacy Policy.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು

Health Tips in Kannada: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು.

Health Tips : ಇದು ನಿಮಗೆ ಗೊತ್ತೇ? ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುತ್ತೆ ಹಲವು ಪ್ರಯೋಜನಗಳು
Garlic peel
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 12, 2021 | 3:48 PM

Health Benefits Of Garlic: ಅಡುಗೆ ರುಚಿಯನ್ನು ಹೆಚ್ಚಿಸುವ ಬೆಳ್ಳುಳ್ಳಿಯಿಂದ ಹಲವು ರೀತಿಯ ಆರೋಗ್ಯಕರ ಪ್ರಯೋಜನಗಳನ್ನು ಪಡೆಯಬಹುದು. ಇದಾಗ್ಯೂ ಬೆಳ್ಳುಳ್ಳಿ ಸಿಪ್ಪೆಯಿಂದ ಮತ್ತಷ್ಟು ಆರೋಗ್ಯಕಾರಿ ಲಾಭಗಳನ್ನು ಪಡೆಯಬಹುದು ಎಂಬುದು ನಿಮಗೆ ಗೊತ್ತಿದೆಯಾ? ಹೌದು, ನಾವೆಲ್ಲರೂ ಕಸದ ಬುಟ್ಟಿಗೆ ಎಸೆಯುವ ಬೆಳ್ಳುಳ್ಳಿ ಸಿಪ್ಪೆಯಲ್ಲಿ ಬ್ಯಾಕ್ಟೀರಿಯಾ ವಿರೋಧಿ, ವೈರಲ್ ಮತ್ತು ಶಿಲೀಂಧ್ರ ವಿರೋಧಿ ಗುಣಗಳಿವೆ. ಹಾಗೆಯೇ ಬೆಳ್ಳುಳ್ಳಿಯಂತೆ ಇದರ ಸಿಪ್ಪೆಯೂ ಆರೋಗ್ಯ ಮತ್ತು ಸೌಂದರ್ಯವನ್ನು ಅಂದಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಾಗಿದ್ರೆ ಬೆಳ್ಳುಳ್ಳಿ ಸಿಪ್ಪೆಯಿಂದ ಸಿಗುವ ಪ್ರಯೋಜನಗಳೇನು ನೋಡೋಣ.

ಪಾದಗಳ ಊತವನ್ನು ಕಡಿಮೆ ಮಾಡುತ್ತದೆ: ಕಾಲುಗಳ ಊತವನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸಿಪ್ಪೆ ಪ್ರಯೋಜನಕಾರಿ. ಇದಕ್ಕಾಗಿ ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ನೀರಿನಲ್ಲಿ ಕುದಿಸಬೇಕು. ಆ ಬಳಿಕ ನೀರು ಉಗುರು ಬೆಚ್ಚಗಾದ ನಂತರ, ನಿಮ್ಮ ಪಾದಗಳನ್ನು ಈ ನೀರಿನಲ್ಲಿ ಮುಳುಗಿಸಿ ಸ್ವಲ್ಪ ಹೊತ್ತು ಕುಳಿತುಕೊಳ್ಳಿ. ಇದರಿಂದ ಪಾದಗಳ ಊತ ಕಡಿಮೆಯಾಗುತ್ತದೆ.

ಶೀತಕ್ಕೂ ಪರಿಹಾರ: ಶೀತ ಮತ್ತು ನೆಗಡಿ ಸಮಸ್ಯೆಯಿಂದ ಪಾರಾಗಲು ಬೆಳ್ಳುಳ್ಳಿ ಸಿಪ್ಪೆಯ ಮೊರೆ ಹೋಗಬಹುದು. ಇದಕ್ಕಾಗಿ ನೀವು ನೀರಿನ ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ. ಆ ಬಳಿಕ ಆ ನೀರನ್ನು ಸೇವಿಸುವುದರಿಂದ ಶೀಘ್ರ ನಿಮ್ಮ ಶೀತ ಮತ್ತು ನೆಗಡಿ ನಿವಾರಣೆಯಾಗುತ್ತದೆ.

ಚರ್ಮದ ತುರಿಕೆಗೆ ಮನೆಮದ್ದು: ಚರ್ಮದ ಮೇಲಿನ ತುರಿಕೆಯ ಸಮಸ್ಯೆಯನ್ನು ಕಡಿಮೆ ಮಾಡಲು ನೀವು ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸಬಹುದು. ಇದಕ್ಕಾಗಿ, ಬೆಳ್ಳುಳ್ಳಿ ಸಿಪ್ಪೆಗಳನ್ನು ನೀರಿನಲ್ಲಿ ಕುದಿಸಿ ಮತ್ತು ಈ ನೀರನ್ನು ತುರಿಕೆ ಇರುವ ಜಾಗಕ್ಕೆ ಹಚ್ಚಿದರೆ ಸಾಕು.

ಕೂದಲ ಹಾರೈಕೆ: ಬೆಳ್ಳುಳ್ಳಿ ಸಿಪ್ಪೆಯನ್ನು ಕುದಿಸಿ ತಣ್ಣಗಾಗಿಸಿದ ನೀರಿನಿಂದ ಕೂದಲನ್ನು ತೊಳೆಯುವುದರಿಂದ ಕೂದಲ ಆರೋಗ್ಯ ಹೆಚ್ಚುತ್ತದೆ. ಅಲ್ಲದೆ ಕೂದಲು ಉದುರುವಿಕೆ, ಕೂದಲ ಬೇರು ಸಡಿಲಗೊಳ್ಳುವಿಕೆ ಕಡಿಮೆಯಾಗುತ್ತದೆ.

ನೈಸರ್ಗಿಕ ಗೊಬ್ಬರ: ಬೆಳ್ಳುಳ್ಳಿ ಸಿಪ್ಪೆಯನ್ನು ಸಸ್ಯಗಳಿಗೆ ನೈಸರ್ಗಿಕ ಗೊಬ್ಬರವಾಗಿ ಕೂಡ ಬಳಸಬಹುದು. ಇದರಲ್ಲಿರುವ ಪೋಷಕಾಂಶಗಳು ಮಣ್ಣನ್ನು ಉತ್ಕೃಷ್ಟಗೊಳಿತ್ತವೆ. ಇದು ಸಸ್ಯಗಳನ್ನು ಆರೋಗ್ಯವಾಗಿಡುವಲ್ಲಿ ವಿಶೇಷ ಪಾತ್ರವನ್ನು ನಿಭಾಯಿಸುತ್ತದೆ.

ಆಹಾರದ ರುಚಿ ಹೆಚ್ಚಿಸಲು ಬಳಸಿ: ಕೆಲ ಆಹಾರಗಳಲ್ಲಿ ಬೆಳ್ಳುಳ್ಳಿ ಸಿಪ್ಪೆಯನ್ನು ಬಳಸುವುದರಿಂದ ರುಚಿ ಕೂಡ ಹೆಚ್ಚಾಗುತ್ತದೆ. ಅದರ ಜೊತೆಗೆ ಆಹಾರದ ಪೌಷ್ಟಿಕಾಂಶ ವರ್ಧಿಸಹುದು. ಮುಖ್ಯವಾಗಿ ನೀವು ಬೆಳ್ಳುಳ್ಳಿ ಸಿಪ್ಪೆಗಳನ್ನು ಸೂಪ್‌ಗಳು, ಸ್ಟಾಕ್‌ಗಳು ಮತ್ತು ತರಕಾರಿ ಪದಾರ್ಥಗಳಲ್ಲಿ ಬಳಸಿದರೆ ಆಹಾರ ರುಚಿ ಹೆಚ್ಚಾಗುತ್ತದೆ.

ಇದನ್ನೂ ಓದಿ: India vs England 2nd Test: ಟೀಮ್ ಇಂಡಿಯಾದಲ್ಲಿ 2 ಬದಲಾವಣೆ ಸಾಧ್ಯತೆ: ಪ್ಲೇಯಿಂಗ್ 11 ಹೀಗಿರಲಿದೆ

ಇದನ್ನೂ ಓದಿ: India vs England: 2ನೇ ಟೆಸ್ಟ್ ವೇಳೆ ಮಳೆಯಾಗಲಿದೆಯಾ? ಇಲ್ಲಿದೆ 5 ದಿನಗಳ ಸಂಪೂರ್ಣ ಹವಾಮಾನ ವರದಿ

ಇದನ್ನೂ ಓದಿ: Toyota Cars: ಜೋಳ ನೀಡಿ ಟೊಯೋಟಾ ಕಾರು ಖರೀದಿಸುವ ಅವಕಾಶ

(Unknown Health Benefits Of Garlic Peels)

ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ