AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಹಣ್ಣನ್ನು ಈ ರೀತಿ ಬಳಸಿದರೆ ವಿಟಮಿನ್ ಬಿ12 ಕೊರತೆಯನ್ನು ನೀಗಿಸಿಕೊಳ್ಳಬಹುದು

ವಿಟಮಿನ್ ಬಿ 12: ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ವಿಟಮಿನ್ ಬಿ 12 ಕೊರತೆಯೂ ಒಂದು. ಇದನ್ನು ಹೆಚ್ಚಿಸಿಕೊಳ್ಳಲು ಮಾಂಸಾಹಾರಿಗಳಿಗಿಂತ ಸಸ್ಯಾಹಾರಿಗಳು ಹೆಚ್ಚು ಕಷ್ಟಪಡುತ್ತಾರೆ. ಆದರೆ ಬಾಳೆಹಣ್ಣನ್ನು ಒಂದು ವಿಶೇಷ ರೀತಿಯಲ್ಲಿ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಈ ವಿಟಮಿನ್ ಕೊರತೆಯನ್ನು ನೀಗಿಸಿಕೊಳ್ಳಬಹುದು. ಹೌದು. ಇದು ಕೆಲವರಿಗೆ ಆಶ್ಚರ್ಯ ಹುಟ್ಟಿಸಬಹುದು ಆದರೆ ಇದು ನಿಜ. ಹಾಗಾದರೆ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ಯಾವ ರೀತಿ ವಿಟಮಿನ್ ಬಿ 12 ಕೊರತೆಯನ್ನು ನೀಗಿಸಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಬಾಳೆಹಣ್ಣನ್ನು ಈ ರೀತಿ ಬಳಸಿದರೆ ವಿಟಮಿನ್ ಬಿ12 ಕೊರತೆಯನ್ನು ನೀಗಿಸಿಕೊಳ್ಳಬಹುದು
Vitamin B12
ಪ್ರೀತಿ ಭಟ್​, ಗುಣವಂತೆ
|

Updated on: Oct 07, 2025 | 5:10 PM

Share

ಜೀವನಶೈಲಿಯಲ್ಲಿ ಅನೇಕ ರೀತಿಯ ಬದಲಾವಣೆಗಳಾಗುತ್ತಿದ್ದು ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿದೆ. ಇವುಗಳಲ್ಲಿ ವಿಟಮಿನ್ ಬಿ 12 ಕೊರತೆಯೂ ಒಂದು. ದೇಹಕ್ಕೆ ಅಗತ್ಯವಾಗಿರುವ ಈ ವಿಟಮಿನ್ ಕಡಿಮೆಯಾದಾಗ, ದೇಹದಲ್ಲಿ ತೀವ್ರ ಆಯಾಸ ಮತ್ತು ನರ ದೌರ್ಬಲ್ಯದಂತಹ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಆದರೆ ನೈಸರ್ಗಿಕವಾಗಿ ಮತ್ತು ತ್ವರಿತವಾಗಿ ಈ ಕೊರತೆಯನ್ನು ಕಡಿಮೆ ಮಾಡಲು ಸುಲಭವಾದ ಪರಿಹಾರವಿದೆ. ಅಂದರೆ, ಬಾಳೆಹಣ್ಣನ್ನು (Banana) ಒಂದು ವಿಶೇಷ ರೀತಿಯಲ್ಲಿ ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ವಿಟಮಿನ್ ಕೊರತೆಯನ್ನು ನೀಗಿಸಿಕೊಳ್ಳಬಹುದು. ಆದರೆ ಈ ಹಣ್ಣಿನಲ್ಲಿ ವಿಟಮಿನ್ ಬಿ 12 (Vitamin B12) ನೇರವಾಗಿ ಸಿಗುವುದಿಲ್ಲವಾದರೂ ಕೂಡ ಆ ವಿಟಮಿನ್ ಅನ್ನು ಹೀರಿಕೊಳ್ಳುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ಹಾಗಾದರೆ ಬಾಳೆಹಣ್ಣನ್ನು ಸೇವನೆ ಮಾಡುವುದರಿಂದ ಯಾವ ರೀತಿಯಾವ ರೀತಿ ವಿಟಮಿನ್ ಬಿ 12 ಕೊರತೆಯನ್ನು ನೀಗಿಸಬಹುದು ಎಂಬುದನ್ನು ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಇತ್ತೀಚಿನ ದಿನಗಳಲ್ಲಿ, ಅನೇಕರನ್ನು ಕಾಡುತ್ತಿರುವ ಸಮಸ್ಯೆಗಳಲ್ಲಿ ವಿಟಮಿನ್ ಬಿ 12 ಕೊರತೆಯೂ ಒಂದು. ಈ ವಿಟಮಿನ್ ನಮ್ಮ ದೇಹಕ್ಕೆ ಬಹಳ ಮುಖ್ಯವಾಗಿದ್ದು ಇದರ ಕೊರತೆಯು ಆಯಾಸ, ಆಲಸ್ಯ, ಮೆದುಳಿನ ಗೊಂದಲ, ನರಮಂಡಲದ ಸಮಸ್ಯೆಗಳು ಮತ್ತು ರಕ್ತಹೀನತೆಗೆ ಕಾರಣವಾಗಬಹುದು. ಮಾತ್ರವಲ್ಲ ಇನ್ನು ಅನೇಕ ರೀತಿಯ ಸಮಸ್ಯೆಗಳಿಗೆ ಕಾರಣವಾಗಬಹುದು. ಅದರಲ್ಲಿಯೂ ಈ ವಿಟಮಿನ್ ಕೊರತೆಯು ಮಾಂಸಾಹಾರಿಗಳಿಗಿಂತ ಸಸ್ಯಾಹಾರಿಗಳಲ್ಲಿ ಹೆಚ್ಚಾಗಿ ಕಂಡುಬರುವುದರಿಂದ ಇದನ್ನು ತ್ವರಿತವಾಗಿ ನೀಗಿಸಲು, ಈ ಇಂದು ಹಣ್ಣನ್ನು ಆಹಾರದಲ್ಲಿ ಸೇರಿಸಿಕೊಳ್ಳಬಹುದು. ಆ ಮೂಲಕ ವಿಟಮಿನ್ ಬಿ 12 ಕೊರತೆಯಾಗದಂತೆ ನೋಡಿಕೊಳ್ಳಬಹುದು.

ಬಾಳೆಹಣ್ಣು ಅತ್ಯಂತ ಆರೋಗ್ಯಕರ ಹಣ್ಣುಗಳಲ್ಲಿ ಒಂದೆಂದು ಪರಿಗಣಿಸಲಾಗುತ್ತದೆ. ಆದರೆ ಈ ಹಣ್ಣಿನಲ್ಲಿ ವಿಟಮಿನ್ ಬಿ 12 ನೇರವಾಗಿ ಸಿಗುವುದಿಲ್ಲ. ಆದರೆ ಇವು ನಿಮ್ಮ ದೇಹ ವಿಟಮಿನ್ ಬಿ 12 ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಬಾಳೆಹಣ್ಣುಗಳು ಪೊಟ್ಯಾಸಿಯಮ್, ವಿಟಮಿನ್ ಬಿ 6 ಮತ್ತು ಫೈಬರ್‌ನಂತಹ ಪೋಷಕಾಂಶಗಳಿಂದ ಸಮೃದ್ಧವಾಗಿವೆ. ಇವು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಮಾತ್ರವಲ್ಲ ವಿಟಮಿನ್ ಬಿ 12 ಹೀರಿಕೊಳ್ಳುವಿಕೆಯನ್ನು ಹೆಚ್ಚಿಸಿ ಅದರ ಕೊರತೆಯನ್ನು ನೀಗಿಸಲು, ಬಾಳೆಹಣ್ಣನ್ನು ಎರಡು ರೀತಿಯಲ್ಲಿ ಬಳಕೆ ಮಾಡಬಹುದು.

ಇದನ್ನೂ ಓದಿ: ವಿಟಮಿನ್ ಬಿ12 ಪ್ರಯೋಜನಗಳೇನು? ಭಾರತದ 70% ಜನರಲ್ಲಿ ಇದರ ಕೊರತೆಯಾಗುವುದಕ್ಕೆ ಕಾರಣವೇನು?

ಬಾಳೆಹಣ್ಣಿನ ಮಿಲ್ಕ್‌ಶೇಕ್ : ಹಾಲು ವಿಟಮಿನ್ ಬಿ 12 ರ ಉತ್ತಮ ಮೂಲ ಎಂಬುದು ತಿಳಿದ ವಿಚಾರ. ಬಾಳೆಹಣ್ಣಿನೊಂದಿಗೆ ಹಾಲನ್ನು ಬೆರೆಸಿ ಕುಡಿಯುವುದರಿಂದ ವಿಟಮಿನ್ ಬಿ 12ನ ಕೊರತೆಯನ್ನು ಕಡಿಮೆ ಮಾಡುತ್ತೆ. ಮಾತ್ರವಲ್ಲದೆ ತೂಕ ಹೆಚ್ಚಿಸಲು ಸಹ ಇದು ಸಹಾಯ ಮಾಡುತ್ತದೆ.

ತಯಾರಿಸುವ ವಿಧಾನ: ಬಾಳೆಹಣ್ಣನ್ನು ಸಿಪ್ಪೆ ತೆಗೆದು ಬ್ಲೆಂಡರ್‌ನಲ್ಲಿ ಹಾಕಿ. ಹಾಲು ಮತ್ತು ಸಕ್ಕರೆ ಸೇರಿಸಿ. ನಯವಾದ ಮಿಶ್ರಣ ಸಿಕ್ಕ ಮೇಲೆ, ನೀವು ಅದನ್ನು ತಂಪು ತಂಪಾಗಿ ಕುಡಿಯಲು ಬಯಸಿದರೆ, ನೀವು ಐಸ್ ಕ್ಯೂಬ್‌ಗಳನ್ನು ಸೇರಿಸಿ ಮಿಶ್ರಣ ಮಾಡಬಹುದು.

ಬಾಳೆಹಣ್ಣಿನ ಮೊಸರು: ಸಾಮಾನ್ಯವಾಗಿ ಪ್ರತಿನಿತ್ಯ ಸೇವನೆ ಮಾಡುವ ಮೊಸರಿನಲ್ಲಿ ಹೆಚ್ಚಿನ ಪ್ರಮಾಣದ ವಿಟಮಿನ್ ಬಿ 12 ಇರುತ್ತದೆ. ಬಾಳೆಹಣ್ಣು ಮತ್ತು ಮೊಸರಿನ ಮಿಶ್ರಣವು ಅದರ ಪ್ರಯೋಜನಗಳನ್ನು ಇನ್ನಷ್ಟು ಹೆಚ್ಚಿಸುತ್ತದೆ.

ತಯಾರಿಸುವ ವಿಧಾನ: ಮೊಸರನ್ನು ಒಂದು ಬಟ್ಟಲಿನಲ್ಲಿ ಚೆನ್ನಾಗಿ ಮ್ಯಾಶ್ ಮಾಡಿ. ಕತ್ತರಿಸಿದ ಬಾಳೆಹಣ್ಣಿಗೆ ಸೇರಿಸಿ. ಬಳಿಕ ಆ ಮಿಶ್ರಣಕ್ಕೆ ಜೀರಿಗೆ ಪುಡಿ, ಕೊತ್ತಂಬರಿ ಪುಡಿ ಮತ್ತು ಉಪ್ಪನ್ನು ಹಾಕಿ ಸರಿಯಾಗಿ ಮಿಕ್ಸ್ ಮಾಡಿ. ಬೇಕಾದರೆ ಕೊತ್ತಂಬರಿ ಸೊಪ್ಪನ್ನು ಕೂಡ ಸೇರಿಸಬಹುದು. ಈ ರೀತಿ ಮಾಡಿಕೊಂಡರೆ ಬಾಳೆಹಣ್ಣಿನ ಮೊಸರು ತಿನ್ನಲು ಸಿದ್ದವಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್