AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿನಿತ್ಯ ಬೆಳಿಗ್ಗೆ ಒಂದು ಕಪ್ ಈ ಶಂಖಪುಷ್ಪ ಟೀ ಕುಡಿಯಿರಿ, ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ನೋಡಿ!

ಆಯುರ್ವೇದ ತಜ್ಞರು ಹೇಳುವ ಪ್ರಕಾರ, ಶಂಖಪುಷ್ಪ ಹೂವುಗಳನ್ನು ವಿವಿಧ ಕಾಯಿಲೆಗಳಿಂದ ಮುಕ್ತಿ ಪಡೆಯಲು ಬಳಸಲಾಗುತ್ತದೆ. ಈ ಹೂವಿನ ಚಹಾ ನಮ್ಮ ದೇಹಕ್ಕೆ ಬಹಳ ಪ್ರಯೋಜನಕಾರಿಯಾಗಿರುವುದರಿಂದ ಇದನ್ನು ಯಥೇಚ್ಛವಾಗಿ ಬಳಸಲಾಗುತ್ತದೆ. ಪ್ರಸ್ತುತ ಇದನ್ನು ಬ್ಲೂ ಟೀ ಎಂದು ಕರೆಯಲಾಗುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ . ಹಾಗಾದರೆ ಈ ಸ್ಟೋರಿ ಮೂಲಕ ಬ್ಲೂ ಟೀ ಯಿಂದ ಸಿಗುವಂತಹ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಪ್ರತಿನಿತ್ಯ ಬೆಳಿಗ್ಗೆ ಒಂದು ಕಪ್ ಈ ಶಂಖಪುಷ್ಪ ಟೀ ಕುಡಿಯಿರಿ, ದೇಹದಲ್ಲಿ ಏನೆಲ್ಲಾ ಬದಲಾವಣೆ ಆಗುತ್ತೆ ನೋಡಿ!
Blue Tea
ಪ್ರೀತಿ ಭಟ್​, ಗುಣವಂತೆ
| Edited By: |

Updated on: Jul 24, 2025 | 7:07 AM

Share

ಶಂಖಪುಷ್ಪ (Shankhpushpa) ಹೂವಿನ ಬಗ್ಗೆ ಕೇಳಿರಬಹುದು ಸಾಮಾನ್ಯವಾಗಿ ಇವುಗಳನ್ನು ದೇವರ ಪೂಜೆಯಲ್ಲಿ ಬಳಸಲಾಗುತ್ತದೆ. ಶಂಖಪುಷ್ಪವನ್ನು ಬೇರೆ ಬೇರೆ ಭಾಗದಲ್ಲಿ ನಾನಾ ಹೆಸರುಗಳಿಂದ ಕರೆಯಲಾಗುತ್ತದೆ. ಇದಕ್ಕೆ ಅಪರಾಜಿತ ಹೂವು, ಗಿರಿಕಾರ್ಣಿಕ ಮತ್ತು ಡಿಂಟೆನ್ ಎಂದೂ ಕೂಡ ಕರೆಯುತ್ತಾರೆ. ಆಯುರ್ವೇದದಲ್ಲಿ ಈ ಹೂವಿನ ಬಳಕೆಯನ್ನು ಯಥೇಚ್ಛವಾಗಿ ಮಾಡಲಾಗುತ್ತದೆ, ಅನೇಕ ಕಾಯಿಲೆಗಳಿಗೆ ಮುಕ್ತಿ ನೀಡಲು ಬಳಸಲಾಗುತ್ತದೆ. ಆದರೆ ಈ ಹೂವುಗಳಿಂದ ಕಷಾಯ ಅಥವಾ ಚಹಾ ಮಾಡುತ್ತಾರೆ ಎಂದರೆ ನಂಬುತ್ತೀರಾ? ಹೌದು. ಇತ್ತೀಚಿಗೆ ಈ ಟ್ರೆಂಡ್ ಬಹಳ ಜಾಸ್ತಿಯಾಗಿದ್ದು ಜನ ಪ್ರತಿನಿತ್ಯ ಈ ಹೂವುಗಳಿಂದ ತಯಾರಾಗುವ ಚಹಾವನ್ನು ಕುಡಿಯುತ್ತಿದ್ದಾರೆ. ಪ್ರಸ್ತುತ ಇದನ್ನು ಬ್ಲೂ ಟೀ (blue tea) ಎಂದು ಕರೆಯಲಾಗುತ್ತದೆ. ಇದನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ವಿವಿಧ ರೀತಿಯ ಆರೋಗ್ಯ (Health) ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ಸ್ಟೋರಿ ಮೂಲಕ ಬ್ಲೂ ಟೀ ಯಿಂದ ಸಿಗುವಂತಹ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳಿ.

ಜೀರ್ಣಕಾರಿ ಸಮಸ್ಯೆಗಳಿಂದ ಮುಕ್ತಿ ನೀಡುತ್ತದೆ

ಶಂಖಪುಷ್ಪ ಹೂವುಗಳಿಂದ ಆರೋಗ್ಯಕರವಾದ ಚಹಾವನ್ನು ತಯಾರಿಸಬಹುದು. ಇದು ವಿಶಿಷ್ಟವಾದ ನೀಲಿ ಬಣ್ಣದಿಂದ ಕೂಡಿರುವುದರಿಂದ ಇದನ್ನು ಬ್ಲೂ ಟೀ ಎನ್ನಲಾಗುತ್ತದೆ. ಈ ಚಹಾ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು, ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಕಪ್ ಬ್ಲೂ ಟೀ ಕುಡಿಯುವುದರಿಂದ ಜೀರ್ಣಕ್ರಿಯೆಯಲ್ಲಿ ಸಂಗ್ರಹವಾದ ವಿಷವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ ಮತ್ತು ಜೀರ್ಣಕಾರಿ ಸಮಸ್ಯೆಗಳನ್ನು ಪರಿಹರಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದಲ್ಲದೆ, ಆಮ್ಲೀಯತೆ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳು ಕೂಡ ಸುಲಭವಾಗಿ ಕಡಿಮೆಯಾಗುತ್ತವೆ.

ತೂಕ ಕಡಿಮೆ ಮಾಡುತ್ತದೆ

ಬ್ಲೂ ಟೀ ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿರುವವರಿಗೆ ಬಹಳ ಒಳ್ಳೆಯದು. ಅದಲ್ಲದೆ ಈ ಚಹಾದಲ್ಲಿ ಕೆಫೀನ್ ಇರುವುದಿಲ್ಲ. ಇದರಲ್ಲಿ ಕಾರ್ಬೋಹೈಡ್ರೇಟ್‌ಗಳು, ಕೊಬ್ಬುಗಳು ಅಥವಾ ಕೊಲೆಸ್ಟ್ರಾಲ್ ಕೂಡ ಇರುವುದಿಲ್ಲ. ಹಾಗಾಗಿ ಇದು ಹಸಿವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಮತ್ತು ಆಗಾಗ ತಿಂಡಿ ತಿನ್ನುವ ಬಯಕೆಯನ್ನು ಕೂಡ ಕಡಿಮೆ ಮಾಡುತ್ತದೆ. ಪರಿಣಾಮವಾಗಿ, ಇದು ತೂಕ ಇಳಿಸಿಕೊಳ್ಳಲು ಸಹಾಯ ಮಾಡುತ್ತದೆ. ಹೆಚ್ಚುವರಿಯಾಗಿ, ಪ್ರತಿದಿನ ಶಂಖಪುಷ್ಪ ಹೂವಿನ ಚಹಾವನ್ನು ಕುಡಿಯುವುದು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟ ಹಠಾತ್ತನೆ ಹೆಚ್ಚಾಗುವುದನ್ನು ತಡೆಯುತ್ತದೆ ಎಂದು ಆರೋಗ್ಯ ತಜ್ಞರು ಹೇಳುತ್ತಾರೆ.

ಇದನ್ನೂ ಓದಿ
Image
ಪ್ರತಿ ರಾತ್ರಿ ಎರಡು ಬೆಳ್ಳುಳ್ಳಿ ಎಸಳು ತಿಂದರೆ, ಈ ಎಲ್ಲಾ ಕಾಯಿಲೆಗಳು ಮಾಯ
Image
ನೆನೆಸಿಟ್ಟ ವಾಲ್ನಟ್ಸ್ ತಿನ್ನುವ ಅಭ್ಯಾಸ ನಿಮಗಿದ್ರೆ ಈ ಸ್ಟೋರಿ ಓದಿ
Image
ಪ್ರತಿನಿತ್ಯ  ಒಂದು ಲವಂಗ ಸೇವನೆ ಮಾಡಿದರೆ ನಿಮ್ಮ ಜೀವನವೇ ಬದಲಾಗುತ್ತೆ!
Image
ಮೆದುಳು ಚುರುಕಾಗಿ ಕೆಲಸ ಮಾಡಲು ತಪ್ಪದೆ ಈ ಆಹಾರಗಳನ್ನು ಸೇವನೆ ಮಾಡಿ

ಇದನ್ನೂ ಓದಿ: Shankhpushpa: ನಿಮ್ಮ ಮಕ್ಕಳ ಜ್ಞಾಪಕಶಕ್ತಿಯನ್ನು ಹೆಚ್ಚಿಸಲು ಬಯಸಿದರೆ ಈ ಹೂವು ಉತ್ತಮ ಫಲಿತಾಂಶ ನೀಡಬಲ್ಲದು

ಆಲ್ಝೈಮರ್ ಕಾಯಿಲೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ

ಈ ನೀಲಿ ಚಹಾದಲ್ಲಿ ಫೀನಾಲಿಕ್ ಆಮ್ಲ, ಫೀನಾಲಿಕ್ ಅಮೈಡ್ ಉತ್ಕರ್ಷಣ ನಿರೋಧಕಗಳು ಮತ್ತು ಆಂಟಿ- ಹೈಪರ್ಗ್ಲೈಸೆಮಿಕ್ ಗುಣಲಕ್ಷಣಗಳಿರುತ್ತವೆ. ಅವು ಇನ್ಸುಲಿನ್ ಸ್ರವಿಸುವಿಕೆಯನ್ನು ಹೆಚ್ಚಿಸುತ್ತವೆ. ಅವು ಗ್ಲೂಕೋಸ್ ಚಯಾಪಚಯ ಕ್ರಿಯೆಯನ್ನು ನಿಯಂತ್ರಿಸುತ್ತವೆ. ಇದು ಸಕ್ಕರೆ ರೋಗಿಗಳಿಗೆ ಒಳ್ಳೆಯದು. ಶಂಖಪುಷ್ಪ ಹೂವುಗಳ ಚಹಾವು ಬಯೋಫ್ಲವೊನೈಡ್‌ಗಳಿಂದ ಸಂಯೋಜನೆಗೊಂಡಿರುತ್ತದೆ. ಅವು ಹೃದಯದ ಆರೋಗ್ಯವನ್ನು ರಕ್ಷಿಸುತ್ತವೆ. ಆಂಟಿ- ಹೈಪರ್ಲಿಪಿಡೆಮಿಕ್ ಗುಣಲಕ್ಷಣಗಳು ಕೊಲೆಸ್ಟ್ರಾಲ್ ಮಟ್ಟ ಮತ್ತು ಕೊಬ್ಬನ್ನು ಕಡಿಮೆ ಮಾಡುತ್ತದೆ. ಇದು ಅಧಿಕ ರಕ್ತದೊತ್ತಡದಂತಹ ಗಂಭೀರ ಕಾಯಿಲೆಗಳಿಂದ ರಕ್ಷಿಸುತ್ತದೆ. ಮಾತ್ರವಲ್ಲ ಮೆದುಳಿನ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಆಲ್ಝೈಮರ್ ಕಾಯಿಲೆಗಳ ವಿರುದ್ಧ ಹೋರಾಡುವುದಕ್ಕೆ ಕೂಡ ಸಹಾಯ ಮಾಡುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ