AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ರಾತ್ರಿ ಒಂದು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚುವುದರಿಂದ ಎಷ್ಟೆಲ್ಲಾ ಲಾಭವಿದೆ ನೋಡಿ

ಹೊಕ್ಕುಳಿಗೆ ಎಣ್ಣೆ ಹಚ್ಚುವ ಪದ್ಧತಿ ಪ್ರಾಚೀನ ಕಾಲದಿಂದಲೂ ಬಂದಿದೆ. ಅದರಲ್ಲಿಯೂ ಹೊಕ್ಕುಳನ್ನು ದೇಹದ ಶಕ್ತಿ ಕೇಂದ್ರಗಳಲ್ಲಿ ಒಂದು ಎಂದು ಪರಿಗಣಿಸಲಾಗುತ್ತದೆ. ಆಯುರ್ವೇದ ತಜ್ಞರು ಪ್ರತಿದಿನ ರಾತ್ರಿ ಮಲಗುವ ಮುನ್ನ ಹೊಕ್ಕುಳಕ್ಕೆ ಒಂದು ಹನಿ ಹರಳೆಣ್ಣೆಯನ್ನು ಹಚ್ಚಿದರೆ ಅನಿರೀಕ್ಷಿತ ಪ್ರಯೋಜನಗಳನ್ನು ಪಡೆಯಬಹುದು ಎಂದು ಹೇಳುತ್ತಾರೆ. ಹಾಗಾದರೆ ಹೊಕ್ಕುಳಿಗೆ ಯಾಕೆ ಹರಳೆಣ್ಣೆಯನ್ನು ಹಚ್ಚಬೇಕು, ಇದರಿಂದ ಸಿಗುವ ಪ್ರಯೋಜನಗಳೇನು ಎಂಬುದರ ಬಗ್ಗೆ ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಪ್ರತಿದಿನ ರಾತ್ರಿ ಒಂದು ಹನಿ ಈ ಎಣ್ಣೆಯನ್ನು ಹೊಕ್ಕುಳಿಗೆ ಹಚ್ಚುವುದರಿಂದ ಎಷ್ಟೆಲ್ಲಾ ಲಾಭವಿದೆ ನೋಡಿ
Castor Oil On Belly Button
ಪ್ರೀತಿ ಭಟ್​, ಗುಣವಂತೆ
|

Updated on: Sep 29, 2025 | 6:02 PM

Share

ಹೊಕ್ಕುಳಿಗೆ (Belly Button) ಎಣ್ಣೆ ಹಚ್ಚುವ ಕ್ರಮ ಈಗಿನದ್ದಲ್ಲ. ಇದು ಪ್ರಾಚೀನ ಕಾಲದಿಂದಲೂ ನಡೆದುಕೊಂಡು ಬಂದ ಒಂದು ಆರೋಗ್ಯಕರ ಪದ್ದತಿ. ಹೊಕ್ಕುಳನ್ನು ದೇಹದ ಶಕ್ತಿ ಕೇಂದ್ರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದ್ದು ಆ ಭಾಗಕ್ಕೆ ಎಣ್ಣೆ ಹಚ್ಚುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ. ಅದಕ್ಕಾಗಿಯೇ ಪ್ರತಿದಿನ ರಾತ್ರಿ ಮಲಗುವ ಮುನ್ನ ಹೊಕ್ಕುಳಿಗೆ ಒಂದು ಹನಿ ಹರಳೆಣ್ಣೆಯನ್ನು ಹಚ್ಚಿದರೆ ನೀವು ಊಹಿಸಲೂ ಸಾಧ್ಯವಾಗದಂತಹ ಪ್ರಯೋಜನಗಳನ್ನು ಪಡೆಯಬಹುದು. ಹಾಗಾದರೆ ಹೊಕ್ಕುಳಿಗೆ ಯಾಕೆ ಹರಳೆಣ್ಣೆಯನ್ನು ಹಚ್ಚಬೇಕು, ಇದರಿಂದ ಸಿಗುವ ಪ್ರಯೋಜನಗಳೇನು ಎಂಬುದರ ಬಗ್ಗೆ ಈ ಸ್ಟೋರಿ ಮೂಲಕ ತಿಳಿದುಕೊಳ್ಳಿ.

ಹರಳೆಣ್ಣೆಯನ್ನು ಹಚ್ಚುವುದರಿಂದ ಏಕಕಾಲದಲ್ಲಿಯೇ ಬಹು ಪ್ರಯೋಜನಗಳು ದೊರೆಯುತ್ತವೆ ಎಂದರೆ ನೀವು ನಂಬಲೇ ಬೇಕು. ಹೌದು. ಇದು ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುವುದರ ಜೊತೆಗೆ ಚರ್ಮದ ಆರೋಗ್ಯ ಕಾಪಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲ, ಹೊಟ್ಟೆಯನ್ನು ಸ್ವಚ್ಛಗೊಳಿಸಲು ಸಹ ಇದು ತುಂಬಾ ಪ್ರಯೋಜನಕಾರಿಯಾಗಿದೆ.

ಮಲಬದ್ಧತೆ ಸಮಸ್ಯೆಗೆ ಮುಕ್ತಿ

ಹೊಕ್ಕುಳಿಗೆ ಕ್ಯಾಸ್ಟರ್ ಆಯಿಲ್ ಹಚ್ಚುವುದರಿಂದ ಮಲಬದ್ಧತೆ ನಿಯಂತ್ರಣಕ್ಕೆ ಬರಲು ಸಹಕಾರಿಯಾಗಿದೆ. ಪ್ರತಿದಿನ ತಪ್ಪದೆ ಹೊಕ್ಕುಳಿಗೆ ಒಂದು ಹನಿ ಈ ಎಣ್ಣೆ ಹಚ್ಚುವುದರಿಂದ ಚರ್ಮದ ಸೋಂಕುಗಳಿಂದ ರಕ್ಷಣೆ ಸಿಗುತ್ತದೆ. ಮಹಿಳೆಯ ಮುಟ್ಟಿನ ಸಮಯದಲ್ಲಿ ಉಂಟಾಗುವ ಮುಟ್ಟಿನ ನೋವನ್ನು ನಿವಾರಿಸಲು ಕ್ಯಾಸ್ಟರ್ ಆಯಿಲ್ ಒಂದು ಅದ್ಭುತ ಮನೆಮದ್ದಾಗಿದೆ ಎಂದರೆ ತಪ್ಪಾಗಲಾರದು.

ಇದನ್ನೂ ಓದಿ: ಹೊಕ್ಕಳಿಗೆ ಈ 5 ಎಣ್ಣೆಗಳನ್ನು ಹಚ್ಚಿ, ಮತ್ತೆ ದೇಹದಲ್ಲಾಗುವ ಬದಲಾವಣೆ ನೋಡಿ

ಒತ್ತಡ ಕಡಿಮೆಯಾಗುತ್ತೆ

ಹೊಕ್ಕುಳಿಗೆ ಕ್ಯಾಸ್ಟರ್ ಆಯಿಲ್ ಹಚ್ಚುವುದರಿಂದ ಒತ್ತಡ ಕಡಿಮೆಯಾಗುತ್ತದೆ. ಸಂಧಿವಾತದಿಂದ ಬಳಲುತ್ತಿರುವವರಿಗೆ ಕೂಡ ಇದೊಂದು ಅತ್ಯುತ್ತಮ ಪರಿಹಾರವಾಗಿದೆ. ಮಾತ್ರವಲ್ಲ ಕ್ಯಾಸ್ಟರ್ ಆಯಿಲ್ ಅನ್ನು ಹೊಕ್ಕುಳಿಗೆ ಹಚ್ಚುವುದರಿಂದ ಮೂತ್ರಪಿಂಡದಲ್ಲಿ ಕಂಡುಬರುವ ಕಲ್ಲುಗಳನ್ನು ಸಹ ತಡೆಯಬಹುದು ಎಂದು ತಜ್ಞರು ಹೇಳುತ್ತಾರೆ.

ಫಲವತ್ತತೆಯ ಸಮಸ್ಯೆಗಳು ನಿವಾರಣೆಯಾಗುತ್ತೆ

ಸಂತತಿಯ ವಿಷಯದಲ್ಲಿಯೂ ಸಹ, ಆಮ್ಲಾ ತುಂಬಾ ಪ್ರಯೋಜನಕಾರಿಯಾಗಿದೆ. ಅದರ ಔಷಧೀಯ ಗುಣಗಳಿಂದಾಗಿ ಆಮ್ಲಾದೊಂದಿಗೆ ಬರೆಯುವುದರಿಂದ ಫಲವತ್ತತೆಯ ಸಾಧ್ಯತೆಗಳು ಹೆಚ್ಚಾಗುತ್ತವೆ ಎಂದು ತಜ್ಞರು ಹೇಳುತ್ತಾರೆ. ಇದರಲ್ಲಿರುವ ಗುಣಗಳು ರಕ್ತ ಪರಿಚಲನೆಯನ್ನು ಹೆಚ್ಚಿಸುತ್ತವೆ. ಸಂತಾನೋತ್ಪತ್ತಿ ಅಂಗಗಳು ಸರಿಯಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಫಲವತ್ತತೆಯ ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂದು ಹೇಳಲಾಗುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್​ನ ಬಂದರು ತಲುಪಿದ ಭಾರತದ LPG ಟ್ಯಾಂಕರ್
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
‘ಬಾಸ್’ ಸಿನಿಮಾಗೆ ದರ್ಶನ್ ಲಾಯರ್ ನೋಟಿಸ್: ನಿರ್ದೇಶಕರ ಖಡಕ್ ಪ್ರತಿಕ್ರಿಯೆ
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಬಾವಿಗೆ ಬಿದ್ದರೂ ಪವಾಡ ಸದೃಶ್ಯವಾಗಿ ಬದುಕುಳಿದ 2 ವರ್ಷದ ಮಗು
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ಸರ್ಕಾರಕ್ಕೆ ಮುಜುಗರ ಆಗ್ತಿದೆ: ಗೃಹ ಸಚಿವರು ಸದನದಲ್ಲೇ ಹೀಗಂದಿದ್ದೇಕೆ?
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ದಾವಣಗೆರೆ ಬೈ ಎಲೆಕ್ಷನ್: ಹೊಸ ಬಾಂಬ್ ಸಿಡಿಸಿದ ಜೆಡಿಎಸ್ ಮುಖಂಡ
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಹೊಟ್ಟೆ ಆಯ್ತು ಈಗ ಬಟ್ಟೆಗೂ ತಟ್ಟಿದ ಯುದ್ಧದ ಎಫೆಕ್ಟ್​​!
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಡೆಡ್ಲಿ ರೋಡ್​ರೇಜ್, ಕಾರು ಬಾನೆಟ್​ನಲ್ಲಿ ನೇತಾಡಿದ ಪೊಲೀಸ್! ವಿಡಿಯೋ ವೈರಲ್
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಕ್ಯೂ ನೆಟ್, ವಿಹಾನ್ ಬಗ್ಗೆ ಸುಳ್ಳು ಸುದ್ದಿ ಬೇಡ: ಹೈಕೋರ್ಟ್ ತಡೆಯಾಜ್ಞೆ!
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಸೆಲ್ಫಿಗೆ ಕಾಜೋಲ್ ಮೇಲೆ ಮುಗಿಬಿದ್ದ ಫ್ಯಾನ್ಸ್; ಭಯಪಡುತ್ತಾ ಸಾಗಿದ ನಟಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ
ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಟಿಕೆಟ್​​ಗಾಗಿ ಹೈಕಮಾಂಡ್​​ ಮಟ್ಟದಲ್ಲಿ ಲಾಭಿ