AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 05, 2025 | 12:27 PM

Share

ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಈ ಸೋಂಕು ಸಾಮಾನ್ಯವಾಗಿ ಮಹಿಳೆಯರಲ್ಲಿ, ಸ್ವಲ್ಪ ಮಟ್ಟಿಗೆ ಪುರುಷರಲ್ಲಿಯೂ ಕಂಡುಬರುತ್ತವೆ. ಆದರೆ ಈಗ ಬಾಲಕಿಯರಲ್ಲಿಯೂ ಇಂತಹ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು ಆರೋಗ್ಯ ತಜ್ಞರು ಇದನ್ನು ನಿರ್ಲಕ್ಷಿಸಬಾರದು ಎಂದಿದ್ದಾರೆ. ಸಾಮಾನ್ಯವಾಗಿ ಈ ಸಮಸ್ಯೆ ಸೋಂಕಿನಿಂದಾಗಿ ಹರಡುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಇದು ಇತರ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಮೂತ್ರನಾಳದ ಸೋಂಕಿನ ಸಮಸ್ಯೆ ಏಕೆ ಹೆಚ್ಚುತ್ತಿದೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ.

ಮೂತ್ರ ಸೋಂಕಿನ ಪ್ರಕರಣಗಳ ಹೆಚ್ಚಳಕ್ಕೆ ಮುಖ್ಯ ಕಾರಣಗಳು ಇಲ್ಲಿವೆ:

1. ನೀರಿನ ಕೊರತೆ: ಶಾಲೆಗೆ ಹೋಗುವ ಮಕ್ಕಳು ಸಾಮಾನ್ಯವಾಗಿ ಶಾಲೆಯಲ್ಲಿ ಹೆಚ್ಚು ನೀರು ಕುಡಿಯುವುದಿಲ್ಲ ಈ ಕಾರಣದಿಂದಾಗಿ, ರೋಗ ಹೆಚ್ಚುತ್ತಿದೆ.

2. ದೀರ್ಘಕಾಲದ ವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು: ಶಾಲೆಗೆ ಹೋಗುವ ಮಕ್ಕಳು ದೀರ್ಘಕಾಲದ ವರೆಗೆ ಮೂತ್ರ ಹಿಡಿದಿಟ್ಟುಕೊಳ್ಳುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಮಕ್ಕಳು ಈ ರೀತಿ ಮಾಡುವುದರಿಂದ ಮೂತ್ರಕೋಶದಲ್ಲಿ ಬ್ಯಾಕ್ಟೀರಿಯಾ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.

3. ಕೊಳಕು ಶೌಚಾಲಯಗಳ ಬಳಕೆ: ಸಾಮಾನ್ಯವಾಗಿ ಶಾಲೆಗಳಲ್ಲಿ ಹಲವಾರು ಮಕ್ಕಳು ಒಂದೇ ಶೌಚಾಲಯಗಳನ್ನು ಬಳಕೆ ಮಾಡುವುದರಿಂದ ಕೆಲವೊಮ್ಮೆ ಅದು ಸ್ವಚ್ಛವಾಗಿರುವುದಿಲ್ಲ. ಹಾಗಾಗಿ ಆ ಕೊಳಕು ಆಸನಗಳನ್ನು ಬಳಸುವುದರಿಂದಲೂ ಮೂತ್ರದ ಸೋಂಕಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ನಿಮ್ಮ ಹೃದಯ ಆರೋಗ್ಯವಾಗಿರಬೇಕು ಎಂದರೆ ಈ ಸಲಹೆಗಳನ್ನು ಅನುಸರಿಸಿ

ಸೋಂಕಿನ ಲಕ್ಷಣಗಳು:

* ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ಉರಿಯೂತ.

* ಆಗಾಗ ಮೂತ್ರ ವಿಸರ್ಜನೆ ಮಾಡುವುದು.

* ಮೂತ್ರದಲ್ಲಿ ರಕ್ತ ಕಂಡುಬರುವುದು.

* ಜ್ವರ ಮತ್ತು ಆಯಾಸ.

* ಹೊಟ್ಟೆಯಲ್ಲಿ ನೋವು.

ಇದನ್ನು ತಡೆಯಲು ಏನು ಮಾಡಬೇಕು?

ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಉತ್ತಮ ಅಭ್ಯಾಸಗಳನ್ನು ಕಲಿಸಬೇಕು ಎಂದು ವೈದ್ಯರು ಹೇಳುತ್ತಾರೆ. ಅವರು ದಿನಕ್ಕೆ ಸರಿಯಾದ ಪ್ರಮಾಣದ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಪ್ರತಿನಿತ್ಯ ಈ ಬಗ್ಗೆ ವಿಚಾರಿಸಬೇಕು. ಶೌಚಾಲಯವನ್ನು ಹೇಗೆ ಬಳಸಬೇಕೆಂದು ಅವರಿಗೆ ಕಲಿಸಬೇಕು. ಸೂಕ್ಷ್ಮ ಪ್ರದೇಶಗಳ ಸ್ವಚ್ಛತೆಯ ಬಗ್ಗೆಯೂ ಅವರಿಗೆ ವಿವರವಾಗಿ ತಿಳಿ ಹೇಳಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Wed, 5 February 25

Follow Us
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಕೊಡಗು: ಪ್ರವಾಸಿಗರ ಬಸ್ ಪಲ್ಟಿ; 22ಕ್ಕೂ ಹೆಚ್ಚು ಜನರಿಗೆ ಗಾಯ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ
ಜೆಡಿಎಸ್ ಪಾದಯಾತ್ರೆ ತಡೆದ ಪೊಲೀಸರು: ಭಾರಿ ಹೈಡ್ರಾಮಾ