AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಹೆಣ್ಮಕ್ಕಳಲ್ಲಿ ಹೆಚ್ಚುತ್ತಿರುವ ಮೂತ್ರನಾಳದ ಸೋಂಕನ್ನು ತಡೆಯುವುದು ಹೇಗೆ?
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Feb 05, 2025 | 12:27 PM

Share

ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚುತ್ತಿವೆ. ಈ ಸೋಂಕು ಸಾಮಾನ್ಯವಾಗಿ ಮಹಿಳೆಯರಲ್ಲಿ, ಸ್ವಲ್ಪ ಮಟ್ಟಿಗೆ ಪುರುಷರಲ್ಲಿಯೂ ಕಂಡುಬರುತ್ತವೆ. ಆದರೆ ಈಗ ಬಾಲಕಿಯರಲ್ಲಿಯೂ ಇಂತಹ ಪ್ರಕರಣಗಳು ಗಮನಾರ್ಹವಾಗಿ ಹೆಚ್ಚುತ್ತಿವೆ. ಇದು ಗಂಭೀರ ಆರೋಗ್ಯ ಸಮಸ್ಯೆಯಾಗಿದ್ದು ಆರೋಗ್ಯ ತಜ್ಞರು ಇದನ್ನು ನಿರ್ಲಕ್ಷಿಸಬಾರದು ಎಂದಿದ್ದಾರೆ. ಸಾಮಾನ್ಯವಾಗಿ ಈ ಸಮಸ್ಯೆ ಸೋಂಕಿನಿಂದಾಗಿ ಹರಡುತ್ತದೆ. ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದಿದ್ದರೆ, ಇದು ಇತರ ಅನೇಕ ಸಮಸ್ಯೆಗಳಿಗೆ ಕಾರಣವಾಗಬಹುದು. ಹಾಗಾದರೆ ಮಕ್ಕಳಲ್ಲಿ ಈ ಸಮಸ್ಯೆ ಹೆಚ್ಚುತ್ತಿರಲು ಕಾರಣವೇನು? ಈ ಬಗ್ಗೆ ವೈದ್ಯರು ಹೇಳುವುದೇನು ತಿಳಿದುಕೊಳ್ಳಿ.

ಮೂತ್ರನಾಳದ ಸೋಂಕಿನ ಸಮಸ್ಯೆ ಏಕೆ ಹೆಚ್ಚುತ್ತಿದೆ?

ವೈದ್ಯರು ಹೇಳುವ ಪ್ರಕಾರ, ಇತ್ತೀಚಿನ ದಿನಗಳಲ್ಲಿ ಮೂತ್ರನಾಳದ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಲ್ಲಿಯೂ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಬಾಲಕಿಯರಲ್ಲಿ ಕಂಡುಬರುತ್ತಿದೆ. ಇಂತಹ ಪ್ರಕರಣಗಳು ಹೆಚ್ಚಾಗಲು ಹಲವಾರು ಕಾರಣಗಳಿವೆ ಎಂಬುದು ತಿಳಿದು ಬಂದಿದೆ.

ಮೂತ್ರ ಸೋಂಕಿನ ಪ್ರಕರಣಗಳ ಹೆಚ್ಚಳಕ್ಕೆ ಮುಖ್ಯ ಕಾರಣಗಳು ಇಲ್ಲಿವೆ:

1. ನೀರಿನ ಕೊರತೆ: ಶಾಲೆಗೆ ಹೋಗುವ ಮಕ್ಕಳು ಸಾಮಾನ್ಯವಾಗಿ ಶಾಲೆಯಲ್ಲಿ ಹೆಚ್ಚು ನೀರು ಕುಡಿಯುವುದಿಲ್ಲ ಈ ಕಾರಣದಿಂದಾಗಿ, ರೋಗ ಹೆಚ್ಚುತ್ತಿದೆ.

2. ದೀರ್ಘಕಾಲದ ವರೆಗೆ ಮೂತ್ರವನ್ನು ಹಿಡಿದಿಟ್ಟುಕೊಳ್ಳುವುದು: ಶಾಲೆಗೆ ಹೋಗುವ ಮಕ್ಕಳು ದೀರ್ಘಕಾಲದ ವರೆಗೆ ಮೂತ್ರ ಹಿಡಿದಿಟ್ಟುಕೊಳ್ಳುವುದರಿಂದ ಈ ಸಮಸ್ಯೆ ಉಂಟಾಗುತ್ತದೆ. ಮಕ್ಕಳು ಈ ರೀತಿ ಮಾಡುವುದರಿಂದ ಮೂತ್ರಕೋಶದಲ್ಲಿ ಬ್ಯಾಕ್ಟೀರಿಯಾ ಹೆಚ್ಚಾಗುತ್ತದೆ ಎಂದು ಹೇಳಲಾಗುತ್ತದೆ.

3. ಕೊಳಕು ಶೌಚಾಲಯಗಳ ಬಳಕೆ: ಸಾಮಾನ್ಯವಾಗಿ ಶಾಲೆಗಳಲ್ಲಿ ಹಲವಾರು ಮಕ್ಕಳು ಒಂದೇ ಶೌಚಾಲಯಗಳನ್ನು ಬಳಕೆ ಮಾಡುವುದರಿಂದ ಕೆಲವೊಮ್ಮೆ ಅದು ಸ್ವಚ್ಛವಾಗಿರುವುದಿಲ್ಲ. ಹಾಗಾಗಿ ಆ ಕೊಳಕು ಆಸನಗಳನ್ನು ಬಳಸುವುದರಿಂದಲೂ ಮೂತ್ರದ ಸೋಂಕಿಗೆ ಕಾರಣವಾಗಬಹುದು ಎಂದು ವೈದ್ಯರು ಹೇಳುತ್ತಾರೆ.

ಇದನ್ನೂ ಓದಿ: ನಿಮ್ಮ ಹೃದಯ ಆರೋಗ್ಯವಾಗಿರಬೇಕು ಎಂದರೆ ಈ ಸಲಹೆಗಳನ್ನು ಅನುಸರಿಸಿ

ಸೋಂಕಿನ ಲಕ್ಷಣಗಳು:

* ಮೂತ್ರ ವಿಸರ್ಜನೆಯ ಸಮಯದಲ್ಲಿ ನೋವು ಮತ್ತು ಉರಿಯೂತ.

* ಆಗಾಗ ಮೂತ್ರ ವಿಸರ್ಜನೆ ಮಾಡುವುದು.

* ಮೂತ್ರದಲ್ಲಿ ರಕ್ತ ಕಂಡುಬರುವುದು.

* ಜ್ವರ ಮತ್ತು ಆಯಾಸ.

* ಹೊಟ್ಟೆಯಲ್ಲಿ ನೋವು.

ಇದನ್ನು ತಡೆಯಲು ಏನು ಮಾಡಬೇಕು?

ಪೋಷಕರು ತಮ್ಮ ಮಕ್ಕಳಿಗೆ ಮನೆಯಲ್ಲಿ ಉತ್ತಮ ಅಭ್ಯಾಸಗಳನ್ನು ಕಲಿಸಬೇಕು ಎಂದು ವೈದ್ಯರು ಹೇಳುತ್ತಾರೆ. ಅವರು ದಿನಕ್ಕೆ ಸರಿಯಾದ ಪ್ರಮಾಣದ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಪ್ರತಿನಿತ್ಯ ಈ ಬಗ್ಗೆ ವಿಚಾರಿಸಬೇಕು. ಶೌಚಾಲಯವನ್ನು ಹೇಗೆ ಬಳಸಬೇಕೆಂದು ಅವರಿಗೆ ಕಲಿಸಬೇಕು. ಸೂಕ್ಷ್ಮ ಪ್ರದೇಶಗಳ ಸ್ವಚ್ಛತೆಯ ಬಗ್ಗೆಯೂ ಅವರಿಗೆ ವಿವರವಾಗಿ ತಿಳಿ ಹೇಳಬೇಕು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:24 pm, Wed, 5 February 25

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ