AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ.

ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಮಾಡುವ ಕಾಂಟ್ಯಾಕ್ಟ್​ ಲೆನ್ಸ್ , ಹೇಗೆ ಕೆಲಸ ಮಾಡುತ್ತೆ?
Cancer
TV9 Web
| Edited By: |

Updated on: Aug 20, 2022 | 8:30 AM

Share

ಕ್ಯಾನ್ಸರ್ ಎಂಬುದು ಮಾರಣಾಂತಿಕ ಕಾಯಿಲೆಯಾಗಿದ್ದು, ಆರಂಭದಲ್ಲೇ ಪತ್ತೆ ಹಚ್ಚಿಸದರೆ ಸ್ವಲ್ಪ ಮಟ್ಟಿಗೆ ಗುಣಪಡಿಸಬಹುದು ಆದರೆ ಕಾಲ ಮೀರಿದರೆ ರೋಗಿ ಬದುಕುಳಿಯುವುದು ಕಷ್ಟ. ಅಮೆರಿಕದ ವಿಜ್ಞಾನಿಗಳು ಹೊಸ ಆವಿಷ್ಕಾರ ಮಾಡಿದ್ದು, ಕಣ್ಣೀರಿನಿಂದ ಕ್ಯಾನ್ಸರ್ ಪತ್ತೆ ಹಚ್ಚುವ ಲೆನ್ಸ್​ ಅನ್ನು ಕಂಡು ಹಿಡಿದಿದ್ದಾರೆ.

ಕ್ಯಾಲಿಫೋರ್ನಿಯಾದ ಟೆರಾಸಾಕಿ ಇನ್​ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಇನ್ನೋವೇಷನ್ ತಂಡವು ಅಭಿವೃದ್ಧಿಪಡಿಸಿದ ನೋವರಲ್ ಲೆನ್ಸ್ ಎಕ್ಸೋಸೋಮ್​ಗಳನ್ನು ಪತ್ತೆ ಹಚ್ಚಲು ಸಹಾಯ ಮಾಡುತ್ತದೆ.

ಕಣ್ಣೀರಿನಲ್ಲಿ ಬಿಡುಗಡೆಗೊಳ್ಳುವ ಅತಿಸೂಕ್ಷ್ಮ ಎಕ್ಸೋಸೋಮ್​ಗಳನ್ನು ಹಿಡಿದಿಡುವಂಥ ಅತ್ಯಂತ ಸೂಕ್ಷ್ಮ ಕಣಗಳನ್ನು ಈ ಮಸೂರಗಳು ಹೊಂದಿವೆ. ಇದರಿಂದಾಗಿ ಸುಲಭ ಹಾಗೂ ಕ್ಷಿಪ್ರವಾಗಿ ಕ್ಯಾನ್ಸರ್ ಕಾಯಿಲೆಗಳನ್ನು ಪ್ರಾರಂಭದ ಹಂತದಲ್ಲಿಯೇ ಪತ್ತೆಹಚ್ಚಬಹುದು .

ಶರೀರವು ತನಗೆ ಬೇಡದ ವಸ್ತುಗಳನ್ನು ಕೋಶಗಳ ಮೂಲಕ ಹೊರ ಹಾಕುವ ಎಲ್ಲಾ ವಸ್ತುಗಳಲ್ಲೂ ಎಕ್ಸೋಸೋಮ್​ಗಳು ಧಾರಾಳವಾಗಿವೆ. ಆಯಾ ದೇಹದ ಜೈವಿಕ ಗುರುತುಗಳಿಂದ ಸಮೃದ್ಧವಾಗಿರುವ ಈ ಎಕ್ಸೋಸೋಮ್​ಗಳು ದೇಹಕ್ಕೆ ಮುಂದಾಗಬಹುದಾದ ವಿಷಯಗಳ ಮುನ್ಸೂಚನೆ ನೀಡಬಲ್ಲದು.

ಎಕ್ಸೋಸೋಮ್​ಗಳು ಹೆಚ್ಚಿನ ಜೀವಕೋಶಗಳಲ್ಲಿ ರೂಪುಗೊಳ್ಳುತ್ತವೆ, ಪ್ಲಾಸ್ಮಾ, ಲಾಲಾರಸ, ಮೂತ್ರ ಮತ್ತು ಕಣ್ಣೀರು ಮುಂತಾದ ಅನೇಕ ದೈಹಿಕ ದ್ರವಗಳಾಗಿ ಸ್ರವಿಸುತ್ತದೆ. ತಂಡ ಅಭಿವೃದ್ಧಿಪಡಿಸಿದ ವಿಧಾನವು ಈ ಮೂಲವನ್ನು ಸ್ಪರ್ಶಿಸುವ ನಮ್ಮ ಸಾಮರ್ಥ್ಯವನ್ನು ಹೆಚ್ಚು ಸುಗಮಗೊಳಿಸುತ್ತದೆ ಎಂದು ಸಂಶೋಧಕರ ತಂಡ ಹೇಳಿದೆ.

ಆರೋಗ್ಯಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್