AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕ್ಷಣದಿಂದಲ್ಲೇ ಕಡಿಮೆ ಸೋಡಿಯಂ ಉಪ್ಪು ಬಳಸಿ, WHO ಎಚ್ಚರಿಕೆ

ವಿಶ್ವ ಆರೋಗ್ಯ ಸಂಸ್ಥೆ ಕಡಿಮೆ ಸೋಡಿಯಂ ಉಪ್ಪು ಬಳಸುವಂತೆ ಸಲಹೆಯನ್ನು ನೀಡಿದೆ. ಹೃದಯದ ಆರೋಗ್ಯ ಕಾಪಾಡಲು ಕಡಿಮೆ ಸೋಡಿಯಂ ಉಪ್ಪು ಬಳಸುವುದು ಉತ್ತಮ ಎಂದು ಹೇಳಿದೆ. ಕಡಿಮೆ-ಸೋಡಿಯಂ ಉಪ್ಪು ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಹೊಂದಿರುತ್ತವೆ, ಇದು ಸೋಡಿಯಂ ಸೇವನೆಯನ್ನು ಕಡಿಮೆ ಮಾಡುತ್ತದೆ ಎಂದು ಹೇಳಿದೆ. ರಕ್ತದೊತ್ತಡಕ್ಕೂ ಇದು ಒಳ್ಳೆಯದು ಎಂದು ಹೇಳಿದೆ. ಕಡಿಮೆ-ಸೋಡಿಯಂ ಉಪ್ಪಿನಿಂದ ಅನೇಕ ಆರೋಗ್ಯ ಸಮಸ್ಯೆಗೆ ಮುಕ್ತಿ ನೀಡುತ್ತದೆ ಎಂದು ಹೇಳಿದೆ. ಆ ಬಗ್ಗೆ ಇಲ್ಲಿದೆ ಮಾಹಿತಿ

ಈ ಕ್ಷಣದಿಂದಲ್ಲೇ ಕಡಿಮೆ ಸೋಡಿಯಂ ಉಪ್ಪು ಬಳಸಿ, WHO ಎಚ್ಚರಿಕೆ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jan 29, 2025 | 12:45 PM

Share

ವಿಶ್ವ ಆರೋಗ್ಯ ಸಂಸ್ಥೆ (WHO) ಇತ್ತೀಚೆಗೆ ಹೃದಯದ ಆರೋಗ್ಯವನ್ನು ಸುಧಾರಿಸಲು ಕಡಿಮೆ ಸೋಡಿಯಂ ಉಪ್ಪುನ್ನು ಬಳಸುಂತೆ ಹೇಳಿದೆ. ಇದರಿಂದ ದೈನಂದಿನ ಸೋಡಿಯಂ ಸೇವನೆಯನ್ನು 2 ಗ್ರಾಂಗಿಂತ ಕಡಿಮೆ ಮಾಡುಬಹುದು. ಏಕೆಂದರೆ ಅತಿಯಾದ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡ ಮತ್ತು ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಡಿಮೆ-ಸೋಡಿಯಂ ಉಪ್ಪು ಪೊಟ್ಯಾಸಿಯಮ್ ಕ್ಲೋರೈಡ್ ಅನ್ನು ಹೊಂದಿರುತ್ತವೆ, ಇದು ಸೋಡಿಯಂ ಸೇವನೆಯನ್ನು ಕಡಿಮೆ ಮಾಡುತ್ತದೆ. ಹೃದಯದ ಆರೋಗ್ಯಕ್ಕೆ ತುಂಬಾ ಉತ್ತಮವಾಗಿದೆ.

ಆಹಾರದಲ್ಲಿ ಕಡಿಮೆ ಸೋಡಿಯಂ ಉಪ್ಪು ಬಳಸುವುದರಿಂದ ಆಗುವ ಪ್ರಯೋಜನ

ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ: ಅಧಿಕ ಸೋಡಿಯಂ ಸೇವನೆಯು ಅಧಿಕ ರಕ್ತದೊತ್ತಡದ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ. ಉಪ್ಪು ಹೆಚ್ಚಿನ ಪ್ರಮಾಣದಲ್ಲಿ ಸೋಡಿಯಂ ಕ್ಲೋರೈಡ್ ಅನ್ನು ಹೊಂದಿರುತ್ತದೆ, ಇದು ದೇಹದಲ್ಲಿ ನೀರಿನ ಅಂಶವನ್ನು ಉಳಿಸುತ್ತದೆ. ಮತ್ತು ರಕ್ತದ ಪ್ರಮಾಣವನ್ನು ಹೆಚ್ಚಿಸುತ್ತದೆ.

ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ: ಹೆಚ್ಚಿನ ಸೋಡಿಯಂ ಆಹಾರವು ಹೃದಯಾಘಾತ ಮತ್ತು ಪಾರ್ಶ್ವವಾಯು ಸೇರಿದಂತೆ ಹೃದಯರಕ್ತನಾಳದ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕಡಿಮೆ ಸೋಡಿಯಂ ಉಪ್ಪಿಗೆ ಬದಲಾಯಿಸುವ ಮೂಲಕ, ಅತಿಯಾದ ಸೋಡಿಯಂ ಸೇವನೆಯಿಂದ ಉಂಟಾಗುವ ನಿಮ್ಮ ಹೃದಯದ ಒತ್ತಡವನ್ನು ನೀವು ಕಡಿಮೆ ಮಾಡಬಹುದು. ಡಿಮೆ-ಸೋಡಿಯಂ ಉಪ್ಪಿನಲ್ಲಿರುವ ಪೊಟ್ಯಾಸಿಯಮ್ ಎಲೆಕ್ಟ್ರೋಲೈಟ್ ಮಟ್ಟವನ್ನು ಸಮತೋಲನಗೊಳಿಸಲು ಸಹಾಯ ಮಾಡುತ್ತದೆ ಮತ್ತು ಹೃದಯ ಸ್ನಾಯುವಿನ ಕಾರ್ಯವನ್ನು ಉತ್ತಮಗೊಳಿಸುತ್ತದೆ. ಹೃದಯ ಬಡಿತಗಳು ಮತ್ತು ಹೃದಯ ವೈಫಲ್ಯದ ಅಪಾಯವನ್ನು ಕಡಿಮೆ ಮಾಡುತ್ತದೆ.

ಮೂತ್ರಪಿಂಡದ ಹಾನಿಯನ್ನು ತಡೆಯುತ್ತದೆ: ದೇಹದಿಂದ ಹೆಚ್ಚುವರಿ ಸೋಡಿಯಂ ಅನ್ನು ಫಿಲ್ಟರ್ ಮಾಡುವಲ್ಲಿ ನಿಮ್ಮ ಮೂತ್ರಪಿಂಡಗಳು ಪ್ರಮುಖ ಪಾತ್ರವಹಿಸುತ್ತವೆ. ಹೆಚ್ಚು ಉಪ್ಪನ್ನು ಸೇವಿಸುವುದರಿಂದ ನಿಮ್ಮ ಮೂತ್ರಪಿಂಡಗಳ ಮೇಲೆ ಹೆಚ್ಚಿನ ಹೊರೆ ಬೀಳುತ್ತದೆ. ಇದು ಮೂತ್ರಪಿಂಡದ ಹಾನಿಗೆ ಕಾರಣವಾಗಬಹುದು. ಮೂತ್ರಪಿಂಡದ ಕಾಯಿಲೆಗಳನ್ನು ಉಲ್ಬಣಗೊಳಿಸುತ್ತದೆ. ಹೀಗಾಗಿ ಮೂತ್ರಪಿಂಡದ ಕಲ್ಲುಗಳು, ದ್ರವದ ಧಾರಣ ಮತ್ತು ದೀರ್ಘಕಾಲದ ಮೂತ್ರಪಿಂಡ ಕಾಯಿಲೆ (CKD) ಅಪಾಯವನ್ನು ಕಡಿಮೆ ಮಾಡುತ್ತದೆ.

ಕೈ, ಕಾಲು ಉಬ್ಬುವಿಕೆಯನ್ನು ಕಡಿಮೆ ಮಾಡುತ್ತದೆ: ಸೋಡಿಯಂ ದೇಹವು ಹೆಚ್ಚು ನೀರನ್ನು ಉಳಿಸಿಕೊಳ್ಳಲು ಕಾರಣವಾಗುತ್ತದೆ, ಇದು ಉಬ್ಬುವುದು ಮತ್ತು ಊತಕ್ಕೆ ಕಾರಣವಾಗುತ್ತದೆ, ವಿಶೇಷವಾಗಿ ಕಾಲುಗಳು, ಪಾದಗಳು ಮತ್ತು ಕೈಗಳಲ್ಲಿ ಇದರ ಪರಿಣಾಮ ಕಾಣುತ್ತದೆ.

ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ: ಹೆಚ್ಚಿನ ಸೋಡಿಯಂ ಸೇವನೆಯು ರಕ್ತನಾಳಗಳ ಕಿರಿದಾಗುವಿಕೆ ಮತ್ತು ಗಟ್ಟಿಯಾಗುವುದಕ್ಕೆ ಕಾರಣವಾಗುತ್ತದೆ. ಇದು ಪಾರ್ಶ್ವವಾಯು ಅಪಾಯವನ್ನು ಹೆಚ್ಚಿಸುತ್ತದೆ. ಕಡಿಮೆ-ಸೋಡಿಯಂ ಉಪ್ಪು ರಕ್ತದೊತ್ತಡವನ್ನು ಕಡಿಮೆ ಮಾಡುವ ಮೂಲಕ ಮತ್ತು ರಕ್ತನಾಳಗಳ ಕಾರ್ಯವನ್ನು ಸುಧಾರಿಸುವ ಮೂಲಕ ಈ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಪೊಟ್ಯಾಸಿಯಮ್ ಆರೋಗ್ಯಕರ ರಕ್ತಪರಿಚಲನೆಯನ್ನು ಉತ್ತಮಗೊಳಿಸುವುದಿ ಮತ್ತು ಅಪಧಮನಿಗಳ ಮೇಲೆ ಅತಿಯಾದ ಸೋಡಿಯಂನ ಹಾನಿಕಾರಕ ಪರಿಣಾಮಗಳನ್ನು ಕಡಿಮೆ ಮಾಡುವ ಮೂಲಕ ಪಾರ್ಶ್ವವಾಯು ತಡೆಗಟ್ಟುವಲ್ಲಿ ಪಾತ್ರವನ್ನು ವಹಿಸುತ್ತದೆ.

ಇದನ್ನೂ ಓದಿ: ಪುರುಷರಲ್ಲಿ ಈ ಲಕ್ಷಣಗಳು ಕಂಡುಬಂದರೆ ಎಂದಿಗೂ ನಿರ್ಲಕ್ಷಿಸಬೇಡಿ

ಮೂಳೆಯ ಆರೋಗ್ಯಕ್ಕೆ ಒಳ್ಳೆಯದು: ಸೋಡಿಯಂನಲ್ಲಿ ಹೆಚ್ಚಿನ ಆಹಾರವು ಮೂಳೆಗಳಿಂದ ಕ್ಯಾಲ್ಸಿಯಂ ನಷ್ಟಕ್ಕೆ ಕಾರಣವಾಗಬಹುದು, ವಿಶೇಷವಾಗಿ ವಯಸ್ಸಾದವರಲ್ಲಿ ಕಡಿಮೆ ಸೋಡಿಯಂ ಉಪ್ಪಿಗೆ ಬದಲಾಯಿಸುವುದು ಕ್ಯಾಲ್ಸಿಯಂ ನಷ್ಟವನ್ನು ಕಡಿಮೆ ಮಾಡುತ್ತದೆ, ಬಲವಾದ ಮೂಳೆಗಳನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ ಮತ್ತು ಆಸ್ಟಿಯೊಪೊರೋಸಿಸ್-ಸಂಬಂಧಿತ ಮುರಿತಗಳ ಅಪಾಯವನ್ನು ಕಡಿಮೆ ಮಾಡುತ್ತದೆ.

ಜೀರ್ಣಕ್ರಿಯೆಯ ಆರೋಗ್ಯವನ್ನು ಸುಧಾರಿಸುತ್ತದೆ: ಹೆಚ್ಚು ಸೋಡಿಯಂ ಇರುವ ಉಪ್ಪು ಆಸಿಡ್ ರಿಫ್ಲಕ್ಸ್, ಜಠರದುರಿತ ಮತ್ತು ಹುಣ್ಣುಗಳಂತಹ ಜೀರ್ಣಕಾರಿ ಸಮಸ್ಯೆಗಳ ಅಪಾಯವನ್ನು ಹೆಚ್ಚಿಸುತ್ತದೆ.ಹೆಚ್ಚಿನ ಸೋಡಿಯಂ ಸೇವನೆಯು ಹೊಟ್ಟೆಯ ಕ್ಯಾನ್ಸರ್ನ ಅಪಾಯವನ್ನು ಹೆಚ್ಚಿಸುತ್ತದೆ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು