AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಮೂರು ಪದಾರ್ಥ ಅಡುಗೆಯಲ್ಲಿ ಬಳಸಿದರೆ ಗ್ಯಾಸ್ಟ್ರಿಕ್​ ಸಮಸ್ಯೆ ಬರಲ್ಲ

ಸಾಮಾನ್ಯವಾಗಿ ಕೆಲವರಿಗೆ ಜೀರ್ಣಶಕ್ತಿಯ ಕೊರತೆ ಇರುತ್ತದೆ. ಅಂತವರಿಗೆ ಎಲ್ಲಾ ರೀತಿಯ ಆಹಾರಗಳನ್ನು ತಿನ್ನುವುದಕ್ಕೆ ಇಷ್ಟವಿದ್ದರೂ ತಿನ್ನಲು ಸಾಧ್ಯವಾಗುವುದಿಲ್ಲ. ಆದರೆ ಗ್ಯಾಸ್ಟ್ರಿಕ್, ಅಜೀರ್ಣತೆಯನ್ನು ತಡೆಯಲು ನಮ್ಮ ಅಡುಗೆ ಮನೆಗಳಲ್ಲಿಯೇ ಔಷಧವಿದೆ ಎಂಬುದು ನಿಮಗೆ ತಿಳಿದಿದೆಯೇ? ಹೌದು. ಕೇವಲ ಮೂರು ಪದಾರ್ಥಗಳನ್ನು ಬಳಕೆ ಮಾಡುವ ಮೂಲಕ ಇಂತಹ ಸಮಸ್ಯೆಗೆ ಮುಕ್ತಿ ನೀಡಬಹುದು. ಹಾಗಾದರೆ ಆ  ಮೂರು ಪದಾರ್ಥಗಳು ಯಾವವು ಎಂಬುದನ್ನು ತಿಳಿದುಕೊಳ್ಳಿ.

ಈ ಮೂರು ಪದಾರ್ಥ ಅಡುಗೆಯಲ್ಲಿ ಬಳಸಿದರೆ ಗ್ಯಾಸ್ಟ್ರಿಕ್​ ಸಮಸ್ಯೆ ಬರಲ್ಲ
ಸಾಂದರ್ಭಿಕ ಚಿತ್ರ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Apr 14, 2025 | 4:01 PM

Share

ಖರೀದ ಆಹಾರ ಯಾರಿಗೆ ತಾನೇ ಇಷ್ಟ ಇರುವುದಿಲ್ಲ ಹೇಳಿ? ಆದರೆ ಅದನ್ನು ತಿಂದ ಬಳಿಕ ಕಂಡುಬರುವಂತಹ ಸಮಸ್ಯೆ ಸಾಕಷ್ಟಿದೆ. ಹಾಗಾದರೆ ಅದನ್ನು ತಿನ್ನುವುದನ್ನು ಬಿಡಬೇಕೇ ಎಂಬ ಗೊಂದಲ ಆರಂಭವಾಗಬಹುದು. ಈ ರೀತಿ ಸಮಸ್ಯೆಗಳಾಗುತ್ತಿದ್ದಾಗ ನಮ್ಮ ಆಹಾರದಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಸಾಮಾನ್ಯವಾಗಿ ಕೆಲವರಿಗೆ ಜೀರ್ಣಶಕ್ತಿಯ ಕೊರತೆ (Indigestion), ಗ್ಯಾಸ್ಟ್ರಿಕ್ ಸಮಸ್ಯೆ ಇರುತ್ತದೆ ಅಂತವರು ಯಾವುದೇ ರೀತಿಯ ಖರೀದ ಆಹಾರ, ಬಟಾಟೆ, ಬಟಾಣಿ, ಬದನೇಕಾಯಿ ಈ ರೀತಿ ಕೆಲವು ಆಹಾರ ತಿಂದಾಗ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಇನ್ನು ಕೆಲವರಿಗೆ ಕೆಲವು ವಿಟಮಿನ್ ಕೊರತೆಯಿಂದಾಗಿ ಆಹಾರ ತಿಂದಾಗ ಅಲ್ಲಲ್ಲಿ ಹಿಡಿದ ಅನುಭವ ಆಗುತ್ತದೆ ಇದನ್ನು ಆಡು ಭಾಷೆಯಲ್ಲಿ ಕಸು ಎನ್ನುತ್ತಾರೆ. ಈ ರೀತಿ ಆರೋಗ್ಯ ಸಮಸ್ಯೆಗಳಾಗುವುದು ಕೆಲವು ತರಕಾರಿ ಅಥವಾ ಎಣ್ಣೆಯಲ್ಲಿ ಖರೀದ ಆಹಾರಗಳಿಂದಾಗಿದೆ. ಇಂತಹ ಸಮಸ್ಯೆಯನ್ನು ತಡೆಯಲು ಆಹಾರದಲ್ಲಿ ಬೆಳ್ಳುಳ್ಳಿ, ಜೀರಿಗೆ, ಕರಿಮೆಣಸನ್ನು ಸೇರಿಸಿಕೊಳ್ಳಿ. ಈ ರೀತಿ ಮಾಡಿದರೆ ಗ್ಯಾಸ್ಟ್ರಿಕ್ ಸಮಸ್ಯೆ (gastric issues) ನಿಮ್ಮ ಹತ್ತಿರವೂ ಸುಳಿಯುವುದಿಲ್ಲ.

ಬೆಳ್ಳುಳ್ಳಿ, ಜೀರಿಗೆ, ಕರಿಮೆಣಸಿನಲ್ಲಿದೆ ಆರೋಗ್ಯದ ಗುಟ್ಟು

ಬಟಾಟೆ ಸಾಂಬಾರ್ ಮಾಡಿ ತಿನ್ನಬೇಕು ಅನಿಸುತ್ತಾ? ಬಟಾಣಿ ಪಲ್ಯ ಮಾಡಬೇಕು ಅನಿಸುತ್ತಾ? ಇವೆಲ್ಲಾ ತಿಂದರೆ ಗ್ಯಾಸ್ಟ್ರಿಕ್ ಆಗುತ್ತೆ ಅಂತ ಭಯ ಇದ್ಯಾ? ಚಿಂತೆ ಬೇಡ. ನಿಮ್ಮ ಆಹಾರದಲ್ಲಿ ಬೆಳ್ಳುಳ್ಳಿ, ಜೀರಿಗೆ, ಕರಿಮೆಣಸನ್ನು ಸೇರಿಸಿಕೊಳ್ಳಿ. ಇವುಗಳನ್ನು ಸಮ ಪ್ರಮಾಣದಲ್ಲಿ ತೆಗೆದುಕೊಂಡು ಅದನ್ನು ಚೆನ್ನಾಗಿ ಜಜ್ಜಿ ಆ ಬಳಿಕ ನೀವು ಸೇವನೆ ಮಾಡುವ ಆಹಾರದಲ್ಲಿ ಬಳಕೆ ಮಾಡಿ ಇದರಿಂದ ಗ್ಯಾಸ್ಟ್ರಿಕ್ ಸಮಸ್ಯೆ ಬರುವುದಿಲ್ಲ. ಈ ಮೂರರಲ್ಲಿಯೂ ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಇದ್ದು, ನೀವು ತಿಂದ ಆಹಾರ ಸರಿಯಾಗಿ ಜೀರ್ಣವಾಗಲು ಇದು ಸಹಾಯ ಮಾಡುತ್ತದೆ. ಜೊತೆಗೆ ಹೊಟ್ಟೆ ಉಬ್ಬರ, ಅಜೀರ್ಣತೆ, ವಾಕರಿಕೆ, ಸಣ್ಣ ಸಣ್ಣ ನೋವುಗಳನ್ನು ಕೂಡ ಶಮನ ಮಾಡುವಂತಹ ಶಕ್ತಿಯನ್ನು ಹೊಂದಿದೆ.

ಇದನ್ನೂ ಓದಿ: ಐವಿಎಫ್ ನಲ್ಲಿ ಎಐ ಕೈಚಳಕ! ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಇದನ್ನೂ ಓದಿ
Image
ಬೇಸಿಗೆಯ ಧಗೆಯಿಂದ ಕಷ್ಟ ಆಗುತ್ತಾ? ಚಿಂತೆ ಬಿಟ್ಟು ಹಸಿ ಈರುಳ್ಳಿ ಸೇವನೆ ಮಾಡಿ
Image
ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಾ? ಬುಧವಾರ, ಶನಿವಾರ ಸಂಜೆ ಈ ರೀತಿ ಮಾಡಿ
Image
ಹಾಸಿಗೆ ಬಿಟ್ಟು ನೆಲದ ಮೇಲೆ ಮಲಗುವ ಅಭ್ಯಾಸ ಆರೋಗ್ಯಕ್ಕೆ ಒಳ್ಳೆಯದೋ, ಅಲ್ಲವೋ?
Image
ನಿಮ್ಮ ನಾಲಿಗೆ ನೀಡುವ ಈ ರೀತಿಯ ಸಂದೇಶಗಳನ್ನು ಎಂದಿಗೂ ಕಡೆಗಣಿಸಬೇಡಿ

ಇಂಗು ಒಳ್ಳೆಯದಲ್ಲವೇ?

ಆಹಾರದ ರುಚಿಯನ್ನು ಹೆಚ್ಚಿಸಲು ಮತ್ತು ಗ್ಯಾಸ್ಟ್ರಿಕ್ ಸಮಸ್ಯೆ, ಅಜೀರ್ಣತೆಯನ್ನು ತಡೆಯಲು ಇಂಗನ್ನು ಬಳಕೆ ಮಾಡಲಾಗುತ್ತದೆ. ಆದರೆ ಕೆಲವರಿಗೆ ಇಂಗು ಆಗಿಬರುವುದಿಲ್ಲ. ಕಿಡ್ನಿಯಲ್ಲಿ ಕಲ್ಲುಗಳಾಗಿದ್ದರೆ ಅಂತವರಿಗೆ ಇಂಗಿನ ಸೇವನೆ ಮಾಡಬಾರದು ಎಂದು ನಾಟಿ ವೈದ್ಯರು ಹೇಳುತ್ತಾರೆ. ಹಾಗಾಗಿ ಇಂಗು ಎಲ್ಲಾ ಸಮಯದಲ್ಲಿಯೂ ಒಳ್ಳೆಯದಲ್ಲ. ಆದರೆ ಬೆಳ್ಳುಳ್ಳಿ, ಜೀರಿಗೆ, ಕರಿಮೆಣಸು ಹಾಗಲ್ಲ ಇದನ್ನು ಚಿಕ್ಕವರಿಂದ, ವಯಸ್ಸಾದವರ ವರೆಗೆ ಯಾರೂ ಬೇಕಾದರೂ ಸೇವನೆ ಮಾಡಬಹುದು. ಬೆಳ್ಳುಳ್ಳಿ ಸೇವನೆ ಮಾಡದವರು ಶುಂಠಿ ಮತ್ತು ಸ್ವಲ್ಪ ಅರಿಶಿನ ಸೇರಿಸಿ ಅಡುಗೆಯಲ್ಲಿ ಬಳಕೆ ಮಾಡಬಹುದು. ಇದರಿಂದ ಮಲಬದ್ಧತೆಯ ಸಮಸ್ಯೆ, ಅಜೀರ್ಣತೆ ಸೇರಿದಂತೆ ಹೊಟ್ಟೆಗೆ ಸಂಬಂಧಿಸಿದ ಖಾಯಿಲೆಗಳು ನಿವಾರಣೆಯಾಗುತ್ತದೆ. ಮನೆಯಲ್ಲಿ ಸಿಗುವ ಇಂತಹ ಪದಾರ್ಥಗಳು ನಮ್ಮ ಆರೋಗ್ಯ ಕಾಪಾಡಬಹುದು ಹಾಗಾಗಿ ಸಣ್ಣ ಸಣ್ಣದಕ್ಕೂ ಮಾತ್ರೆಗಳ ಮೊರೆ ಹೋಗುವ ಬದಲು ಆಹಾರದಲ್ಲಿಯೇ ಕೆಲವು ಬದಲಾವಣೆ ಮಾಡುವ ಮೂಲಕ ಪದೇ ಪದೇ ಕಾಡುವ ಅನಾರೋಗ್ಯ ಸಮಸ್ಯೆಗಳಿಂದ ದೂರವಿರಿ.

ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಯಾವುದೇ ರೀತಿಯಲ್ಲಿ ಅರ್ಹ ವೈದ್ಯಕೀಯ ಸಲಹೆಗೆ ಪರ್ಯಾಯವಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞರನ್ನು ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Mon, 14 April 25

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ