AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin A: ವಿಟಮಿನ್ ‘ಎ’ ಕೊರತೆಯುಂಟಾದರೆ ದೇಹದಲ್ಲಿ ಈ ಲಕ್ಷಣಗಳು ಗೋಚರಿಸುತ್ತೆ

ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಜೀವಸತ್ವ, ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಈ ಯಾವುದೇ ಅಗತ್ಯ ಪೋಷಕಾಂಶಗಳ ಕೊರತೆಯು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು

Vitamin A: ವಿಟಮಿನ್ 'ಎ' ಕೊರತೆಯುಂಟಾದರೆ ದೇಹದಲ್ಲಿ ಈ ಲಕ್ಷಣಗಳು ಗೋಚರಿಸುತ್ತೆ
Vitamin A
TV9 Web
| Updated By: ನಯನಾ ರಾಜೀವ್|

Updated on: Jul 17, 2022 | 2:35 PM

Share

ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಜೀವಸತ್ವ, ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಈ ಯಾವುದೇ ಅಗತ್ಯ ಪೋಷಕಾಂಶಗಳ ಕೊರತೆಯು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.  ದುರ್ಬಲಗೊಂಡ ರೋಗನಿರೋಧಕ ವ್ಯವಸ್ಥೆಯಿಂದ ಮೂಳೆಗಳು ಕೂಡ ದುರ್ಬಲಗೊಳ್ಳಬಹುದು. ಹಾಗಾಗಿ ನಾವು ಪ್ರೋಟಿನ್, ಫೈಬರ್​ಗಳು ಹಾಗೂ ಎಲ್ಲಾ ಅಗತ್ಯ ಜೀವಸತ್ವಗಳು ಇರುವ ಆಹಾರಗಳ ಸೇವನೆ ಮಾಡಬೇಕು.

ನಿಮ್ಮ ಊಟದಲ್ಲಿ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳು ಇಲ್ಲದಿದ್ದಾಗ, ಇದು ಒಂದು ನಿರ್ದಿಷ್ಟ ಕೊರತೆಗೆ ಕಾರಣವಾಗಬಹುದು ಮತ್ತು ವಿಟಮಿನ್ ಎ ಕೊರತೆಯು ಅವುಗಳಲ್ಲಿ ಒಂದಾಗಿದೆ.

ವಿಟಮಿನ್ ಎ ಕೊರತೆಯು ನಿಮ್ಮ ಕಣ್ಣುಗಳು ಅಥವಾ ನಿಮ್ಮ ಚರ್ಮದ ಮೇಲೆ ಪರಿಣಾಮ ಬೀರಬಹುದು ಅಥವಾ ಮಗುವಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರಬಹುದು. ದೇಹವು ಜೀವಸತ್ವಗಳನ್ನು ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ, ಆಹಾರದಲ್ಲಿ ಅವುಗಳನ್ನು ಸೇರಿಸಿಕೊಳ್ಳಬೇಕು.

ವಿಟಮಿನ್ ಎ ಕೊರತೆಯಿಂದ ಉಂಟಾಗುವ ಕಾರಣಗಳು ಕಣ್ಣಿನ ಸಮಸ್ಯೆ: ವಿಟಮಿನ್ ಎ ಕೊರತೆಯ ಸಾಮಾನ್ಯ ಲಕ್ಷಣವೆಂದರೆ ಕಣ್ಣುಗಳಲ್ಲಿನ ಸಮಸ್ಯೆ. ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ ಅಥವಾ ಕಾರ್ನಿಯಾಗೆ ಹಅನಿಯುಂಟಾಗಬಹುದು.

ಇರುಳುಗಣ್ಣು: ಇದು ಕೂಡ ವಿಟಮಿನ್ ಎ ಕೊರತೆಯ ಸಂಕೇತವಾಗಿದೆ. ದೀರ್ಘಕಾಲದವರೆಗೆ ನಿಮ್ಮ ದೇಹಕ್ಕೆ ವಿಟಮಿನ್ ಕೊರತೆಯುಂಟಾದರೆ ಆಗ ಇರುಳುಗಣ್ಣು ಸಮಸ್ಯೆ ಕಾಡುತ್ತದೆ. ಹಾಗೆಯೇ ನೀವು ವಿಟಮಿನ್ ಎ ಕೊರತೆಯನ್ನು ಹೋಗಲಾಡಿಸಿದರೆ ಈ ಸಮಸ್ಯೆಗಳು ಕೂಡ ದೂರವಾಗಬಹುದು.

ಚರ್ಮದ ಸಮಸ್ಯೆಗಳು: ನಿಮ್ಮ ದೇಹವು ಸಾಕಷ್ಟು ವಿಟಮಿನ್ ಎ ಅನ್ನು ಪಡೆಯದಿದ್ದರೆ, ಚರ್ಮದ ಕೋಶಗಳನ್ನು ಸರಿಪಡಿಸಲು ಸಾಧ್ಯವಾಗುವುದಿಲ್ಲ ಏಕೆಂದರೆ ವಿಟಮಿನ್ ಚರ್ಮಕ್ಕೂ ಮುಖ್ಯವಾಗಿದೆ. ಎಸ್ಜಿಮಾ ಅಥವಾ ಒಣ ಚರ್ಮದಂತಹ ಚರ್ಮದ ಸ್ಥಿತಿಗಳಿಗೆ ಚಿಕಿತ್ಸೆ ನೀಡಲು ವಿಟಮಿನ್ ಎ ಅನ್ನು ಸಹ ಬಳಸಬಹುದು.

ಮಕ್ಕಳ ಬೆಳವಣಿಗೆ ವಿಳಂಬ: ಮಕ್ಕಳಲ್ಲಿ ವಿಟಮಿನ್ ಎ ಕೊರತೆಯಿಂದ ಅವರ ಬೆಳವಣಿಗೆಯ ಮೇಲೆ ಪೆಟ್ಟು ಬೀಳುತ್ತದೆ.

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ