AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin A: ವಿಟಮಿನ್ ‘ಎ’ ಕೊರತೆಯುಂಟಾದರೆ ದೇಹದಲ್ಲಿ ಈ ಲಕ್ಷಣಗಳು ಗೋಚರಿಸುತ್ತೆ

ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಜೀವಸತ್ವ, ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಈ ಯಾವುದೇ ಅಗತ್ಯ ಪೋಷಕಾಂಶಗಳ ಕೊರತೆಯು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು

Vitamin A: ವಿಟಮಿನ್ 'ಎ' ಕೊರತೆಯುಂಟಾದರೆ ದೇಹದಲ್ಲಿ ಈ ಲಕ್ಷಣಗಳು ಗೋಚರಿಸುತ್ತೆ
Vitamin A
TV9 Web
| Edited By: |

Updated on: Jul 17, 2022 | 2:35 PM

Share

ದೇಹವು ಸರಿಯಾಗಿ ಕಾರ್ಯನಿರ್ವಹಿಸಲು ಜೀವಸತ್ವ, ಖನಿಜಗಳಂತಹ ಸಾಕಷ್ಟು ಪೋಷಕಾಂಶಗಳ ಅಗತ್ಯವಿದೆ. ಈ ಯಾವುದೇ ಅಗತ್ಯ ಪೋಷಕಾಂಶಗಳ ಕೊರತೆಯು ಗಂಭೀರವಾದ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.  ದುರ್ಬಲಗೊಂಡ ರೋಗನಿರೋಧಕ ವ್ಯವಸ್ಥೆಯಿಂದ ಮೂಳೆಗಳು ಕೂಡ ದುರ್ಬಲಗೊಳ್ಳಬಹುದು. ಹಾಗಾಗಿ ನಾವು ಪ್ರೋಟಿನ್, ಫೈಬರ್​ಗಳು ಹಾಗೂ ಎಲ್ಲಾ ಅಗತ್ಯ ಜೀವಸತ್ವಗಳು ಇರುವ ಆಹಾರಗಳ ಸೇವನೆ ಮಾಡಬೇಕು.

ನಿಮ್ಮ ಊಟದಲ್ಲಿ ಅಗತ್ಯವಾದ ಜೀವಸತ್ವಗಳು ಮತ್ತು ಖನಿಜಗಳು ಇಲ್ಲದಿದ್ದಾಗ, ಇದು ಒಂದು ನಿರ್ದಿಷ್ಟ ಕೊರತೆಗೆ ಕಾರಣವಾಗಬಹುದು ಮತ್ತು ವಿಟಮಿನ್ ಎ ಕೊರತೆಯು ಅವುಗಳಲ್ಲಿ ಒಂದಾಗಿದೆ.

ವಿಟಮಿನ್ ಎ ಕೊರತೆಯು ನಿಮ್ಮ ಕಣ್ಣುಗಳು ಅಥವಾ ನಿಮ್ಮ ಚರ್ಮದ ಮೇಲೆ ಪರಿಣಾಮ ಬೀರಬಹುದು ಅಥವಾ ಮಗುವಿನ ಬೆಳವಣಿಗೆಯ ಮೇಲೂ ಪರಿಣಾಮ ಬೀರಬಹುದು. ದೇಹವು ಜೀವಸತ್ವಗಳನ್ನು ಉತ್ಪಾದಿಸಲು ಸಾಧ್ಯವಿಲ್ಲದ ಕಾರಣ, ಆಹಾರದಲ್ಲಿ ಅವುಗಳನ್ನು ಸೇರಿಸಿಕೊಳ್ಳಬೇಕು.

ವಿಟಮಿನ್ ಎ ಕೊರತೆಯಿಂದ ಉಂಟಾಗುವ ಕಾರಣಗಳು ಕಣ್ಣಿನ ಸಮಸ್ಯೆ: ವಿಟಮಿನ್ ಎ ಕೊರತೆಯ ಸಾಮಾನ್ಯ ಲಕ್ಷಣವೆಂದರೆ ಕಣ್ಣುಗಳಲ್ಲಿನ ಸಮಸ್ಯೆ. ದೃಷ್ಟಿ ಮಂಜಾಗುವುದು, ಕಣ್ಣುಗಳು ಒಣಗಿದಂತಾಗುವುದು, ಕುರುಡುತನ ಅಥವಾ ಕಾರ್ನಿಯಾಗೆ ಹಅನಿಯುಂಟಾಗಬಹುದು.

ಇರುಳುಗಣ್ಣು: ಇದು ಕೂಡ ವಿಟಮಿನ್ ಎ ಕೊರತೆಯ ಸಂಕೇತವಾಗಿದೆ. ದೀರ್ಘಕಾಲದವರೆಗೆ ನಿಮ್ಮ ದೇಹಕ್ಕೆ ವಿಟಮಿನ್ ಕೊರತೆಯುಂಟಾದರೆ ಆಗ ಇರುಳುಗಣ್ಣು ಸಮಸ್ಯೆ ಕಾಡುತ್ತದೆ. ಹಾಗೆಯೇ ನೀವು ವಿಟಮಿನ್ ಎ ಕೊರತೆಯನ್ನು ಹೋಗಲಾಡಿಸಿದರೆ ಈ ಸಮಸ್ಯೆಗಳು ಕೂಡ ದೂರವಾಗಬಹುದು.

ಚರ್ಮದ ಸಮಸ್ಯೆಗಳು: ನಿಮ್ಮ ದೇಹವು ಸಾಕಷ್ಟು ವಿಟಮಿನ್ ಎ ಅನ್ನು ಪಡೆಯದಿದ್ದರೆ, ಚರ್ಮದ ಕೋಶಗಳನ್ನು ಸರಿಪಡಿಸಲು ಸಾಧ್ಯವಾಗುವುದಿಲ್ಲ ಏಕೆಂದರೆ ವಿಟಮಿನ್ ಚರ್ಮಕ್ಕೂ ಮುಖ್ಯವಾಗಿದೆ. ಎಸ್ಜಿಮಾ ಅಥವಾ ಒಣ ಚರ್ಮದಂತಹ ಚರ್ಮದ ಸ್ಥಿತಿಗಳಿಗೆ ಚಿಕಿತ್ಸೆ ನೀಡಲು ವಿಟಮಿನ್ ಎ ಅನ್ನು ಸಹ ಬಳಸಬಹುದು.

ಮಕ್ಕಳ ಬೆಳವಣಿಗೆ ವಿಳಂಬ: ಮಕ್ಕಳಲ್ಲಿ ವಿಟಮಿನ್ ಎ ಕೊರತೆಯಿಂದ ಅವರ ಬೆಳವಣಿಗೆಯ ಮೇಲೆ ಪೆಟ್ಟು ಬೀಳುತ್ತದೆ.

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ