AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಹದಲ್ಲಿ ವಿಟಮಿನ್, ಮಿನರಲ್ಸ್ ಕೊರತೆ ಇದೆಯೇ? ಈ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸಬೇಡಿ!

ದೇಹವನ್ನು ಆರೋಗ್ಯವಾಗಿಡಲು ಜೀವಸತ್ವಗಳು ಮತ್ತು ಖನಿಜಗಳು ಅತ್ಯಗತ್ಯ. ಅವುಗಳ ಕೊರತೆಯು ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ದೇಹದಲ್ಲಿ ಅವುಗಳ ಕೊರತೆಯನ್ನು ಹೇಗೆ ಗುರುತಿಸುವುದು, ಯಾವ ಕೊರತೆಗೆ ಯಾವ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಮತ್ತು ಯಾವ ರೀತಿಯ ಪರೀಕ್ಷೆ ಮಾಡಿಸಬೇಕು ಜೊತೆಗೆ ಆಹಾರದ ಮೂಲಕ ಇದನ್ನು ಹೇಗೆ ತಡೆಯಬಹುದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ದೇಹದಲ್ಲಿ ವಿಟಮಿನ್, ಮಿನರಲ್ಸ್ ಕೊರತೆ ಇದೆಯೇ? ಈ ಲಕ್ಷಣಗಳು ಕಾಣಿಸಿದರೆ ನಿರ್ಲಕ್ಷಿಸಬೇಡಿ!
Vitamin And Mineral DeficiencyImage Credit source: Getty Images
ಪ್ರೀತಿ ಭಟ್​, ಗುಣವಂತೆ
|

Updated on: Aug 16, 2026 | 3:51 PM

Share

ದೇಹ ಆರೋಗ್ಯವಾಗಿರಲು ವಿಟಮಿನ್‌ಗಳು ಮತ್ತು ಮಿನರಲ್ಸ್‌ಗಳು ಅತ್ಯಗತ್ಯ. ಆದರೆ ಆಹಾರದಲ್ಲಿ ಪೌಷ್ಟಿಕಾಂಶದ ಕೊರತೆ, ಕೆಲವು ಆರೋಗ್ಯ ಸಮಸ್ಯೆಗಳು ಅಥವಾ ಜೀವನಶೈಲಿಯಲ್ಲಿ ಮಾಡಿಕೊಂಡ ಕೆಲವು ಬದಲಾವಣೆಗಳಿಂದ ದೇಹದಲ್ಲಿ ಅಗತ್ಯ ಪೋಷಕಾಂಶಗಳ ಮಟ್ಟ ಕಡಿಮೆಯಾಗಬಹುದು. ಆರಂಭದಲ್ಲಿ ಇದರ ಲಕ್ಷಣಗಳು ಸಾಮಾನ್ಯ ದಣಿವು ಅಥವಾ ದುರ್ಬಲತೆಯಂತೆ ಕಾಣಿಸಿಕೊಳ್ಳಬಹುದು. ಆದರೆ ಪದೇಪದೇ ದಣಿವು, ತಲೆಸುತ್ತುವಿಕೆ, ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ, ಕೂದಲು ಉದುರುವುದು ಅಥವಾ ಸ್ನಾಯುಗಳ ದುರ್ಬಲತೆ ಕಂಡುಬಂದರೆ ದೇಹದಲ್ಲಿ ಯಾವುದಾದರೂ ವಿಟಮಿನ್ ಅಥವಾ ಮಿನರಲ್ ಕೊರತೆ ಇರಬಹುದೇ ಎಂಬುದನ್ನು ಪರಿಶೀಲಿಸುವುದು ಅಗತ್ಯ. ಹಾಗಾದರೆ ಯಾವ ಕೊರತೆಗೆ ಯಾವ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಮತ್ತು ಯಾವ ರೀತಿಯ ಪರೀಕ್ಷೆ ಮಾಡಿಸಬೇಕು ಜೊತೆಗೆ ಆಹಾರದ ಮೂಲಕ ಇದನ್ನು ಹೇಗೆ ತಡೆಯಬಹುದು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ದೇಹದಲ್ಲಿ ವಿಟಮಿನ್ ಮತ್ತು ಮಿನರಲ್ಸ್ ಕೊರತೆಯಾದರೆ ಕಾಣಿಸಿಕೊಳ್ಳುವ ಲಕ್ಷಣಗಳು

Cleveland Clinic ಪ್ರಕಾರ, ದೇಹದಲ್ಲಿ ಪೋಷಕಾಂಶಗಳ ಕೊರತೆಯಾದಾಗ ವಿವಿಧ ರೀತಿಯ ಲಕ್ಷಣಗಳು ಕಾಣಿಸಿಕೊಳ್ಳಬಹುದು. ವಿಟಮಿನ್ ಬಿ12 ಕೊರತೆ ಇದ್ದರೆ ದಣಿವು, ದುರ್ಬಲತೆ, ಕೈ-ಕಾಲುಗಳಲ್ಲಿ ಜುಮ್ಮೆನಿಸುವಿಕೆ ಅಥವಾ ಮರಗಟ್ಟುವಿಕೆ ಕಾಣಿಸಬಹುದು. Iron deficiency ಇದ್ದಾಗ ದಣಿವು, ತಲೆಸುತ್ತುವಿಕೆ, ದುರ್ಬಲತೆ ಮತ್ತು ಚರ್ಮ ಬಿಳಿಚಿಕೊಳ್ಳುವಂತಹ ಲಕ್ಷಣಗಳು ಕಾಣಿಸಬಹುದು. ವಿಟಮಿನ್ ಡಿ ಕೊರತೆಯಿಂದ ಮೂಳೆ ಮತ್ತು ಸ್ನಾಯುಗಳಲ್ಲಿ ನೋವು ಅಥವಾ ದುರ್ಬಲತೆ ಉಂಟಾಗಬಹುದು. ಜಿಂಕ್ ಕೊರತೆ ಇದ್ದರೆ ಕೂದಲು ಉದುರುವಿಕೆ ಹಾಗೂ ಗಾಯಗಳು ನಿಧಾನವಾಗಿ ಗುಣವಾಗುವ ಸಮಸ್ಯೆ ಕಾಣಿಸಬಹುದು. ಇದರ ಜೊತೆಗೆ ಕ್ಯಾಲ್ಸಿಯಂ, ಮೆಗ್ನೀಷಿಯಂ ಮತ್ತು ವಿಟಮಿನ್ ಸಿ ಕೊರತೆಯೂ ದೇಹದ ಮೇಲೆ ಪರಿಣಾಮ ಬೀರಬಹುದು. ಆದರೆ ಇದೇ ಲಕ್ಷಣಗಳು ಇತರ ಆರೋಗ್ಯ ಸಮಸ್ಯೆಗಳಲ್ಲಿಯೂ ಕಾಣಿಸಿಕೊಳ್ಳಬಹುದು.

ಕೊರತೆ ಪತ್ತೆಹಚ್ಚಲು ಯಾವ ಪರೀಕ್ಷೆ ಮಾಡಿಸಬೇಕು?

ವಿಟಮಿನ್ ಮತ್ತು ಮಿನರಲ್ಸ್ ಕೊರತೆಯನ್ನು ಪತ್ತೆಹಚ್ಚಲು ಸಾಮಾನ್ಯವಾಗಿ ಬ್ಲಡ್ ಟೆಸ್ಟ್ ಮಾಡಲಾಗುತ್ತದೆ. ವ್ಯಕ್ತಿಯ ಲಕ್ಷಣಗಳು ಮತ್ತು ಆರೋಗ್ಯದ ಇತಿಹಾಸವನ್ನು ಆಧರಿಸಿ ವೈದ್ಯರು ಅಗತ್ಯವಿರುವ ಪರೀಕ್ಷೆಗಳನ್ನು ಸೂಚಿಸುತ್ತಾರೆ. ವೈದ್ಯರ ಸಲಹೆಯಿಲ್ಲದೆ ಅನಗತ್ಯ ಪರೀಕ್ಷೆಗಳು ಅಥವಾ ಸಪ್ಲಿಮೆಂಟ್‌ಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ.

ಆಹಾರದ ಮೂಲಕ ವಿಟಮಿನ್ ಮತ್ತು ಮಿನರಲ್ಸ್ ಕೊರತೆ ತಡೆಯುವುದು ಹೇಗೆ?

ಪೋಷಕಾಂಶಗಳ ಕೊರತೆ ತಪ್ಪಿಸಲು ಒಂದೇ ಆಹಾರವನ್ನು ಅವಲಂಬಿಸುವ ಬದಲು ಸಮತೋಲಿತ ಆಹಾರ ಸೇವಿಸುವುದು ಮುಖ್ಯ. ಹಣ್ಣು, ತರಕಾರಿ, ಬೇಳೆಕಾಳುಗಳು, ಬೀನ್ಸ್, ಸಂಪೂರ್ಣ ಧಾನ್ಯಗಳು, ನಟ್ಸ್, ಸೀಡ್ಸ್, ಮೊಟ್ಟೆ, ಮೀನು ಮತ್ತು ಹಾಲಿನ ಉತ್ಪನ್ನಗಳನ್ನು ಆಹಾರದಲ್ಲಿ ಸೇರಿಸಬಹುದು. ಸಪ್ಲಿಮೆಂಟ್‌ಗಳ ಅಗತ್ಯ ಎಲ್ಲರಿಗೂ ಇರುವುದಿಲ್ಲ. ಯಾವುದೇ ವಿಟಮಿನ್ ಅಥವಾ ಮಿನರಲ್ ಸಪ್ಲಿಮೆಂಟ್‌ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ತೆಗೆದುಕೊಳ್ಳುವುದು ಉತ್ತಮ. ಕೆಲವು ಪೋಷಕಾಂಶಗಳನ್ನು ಅಗತ್ಯಕ್ಕಿಂತ ಹೆಚ್ಚು ತೆಗೆದುಕೊಂಡರೂ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು.

ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ರವಿಚಂದ್ರನ್ ಮನೆ ಮಾರಿದ್ದು ನಿಜವೇ? ಅಸಲಿ ವಿಷಯ ತೆರೆದಿಟ್ಟ ದಿಲ್ ಸೇ ದಿಲೀಪ್
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಅರಣ್ಯ ಸಿಬ್ಬಂದಿ ವಿರುದ್ಧ ಕೊಲೆ ಪ್ರಕರಣ; ಯಾರ ಹೆಸರೂ ಉಲ್ಲೇಖವಿಲ್ಲ!
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಇಂದು ವಿನಾಯಕಿ ಚತುರ್ಥಿ; ಆಸೆ ಆಕಾಂಕ್ಷೆಗಳ ಸಿದ್ಧಿಗಾಗಿ ವಿಶೇಷ ವ್ರತದ ದಿನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ಸ್ವಾತಂತ್ರ್ಯೋತ್ಸವ; HMT ನೂತನ ವಾಚ್ ಬಿಡುಗಡೆ: ಖರೀದಿಗೆ ಮುಗಿಬಿದ್ದ ಜನ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ
ದರ್ಶನ್ ಮತ್ತೆ ಜೈಲು ಸೇರಿ 1 ವರ್ಷ, ಏನೇನಾಯ್ತು? ವಿವರ ಇಲ್ಲಿದೆ