AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vitamin D: ಮೊದಲು ವಿಟಮಿನ್ ಡಿ ಟೆಸ್ಟ್ ಮಾಡಿಸಿಕೊಳ್ಳಿ, ದೇಹದ ತೂಕ ಕಡಿಮೆ ಮಾಡಿಕೊಳ್ಳುವಲ್ಲಿ ಇದರ ಪಾತ್ರ ಬಹುಮುಖ್ಯ! ಹೇಗೆ?

ವಿಟಮಿನ್ ಡಿ ಪಾತ್ರವು ತೂಕ ನಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಟಮಿನ್ ಡಿ ಕೊರತೆಯು ದುರ್ಬಲ ರೋಗನಿರೋಧಕ ಶಕ್ತಿ, ದುರ್ಬಲ ಮೂಳೆಗಳಂತಹ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಖಿನ್ನತೆ, ಸ್ನಾಯುವಿನ ನಷ್ಟ, ಅಥವಾ ಕ್ಯಾನ್ಸರ್​ ಅಂತಹ ದೀರ್ಘಕಾಲದ ವ್ಯತಿರಿಕ್ತ ಪರಿಸ್ಥಿತಿಗಳು ಎದುರಿಸಬೇಕಾಗುತ್ತದೆ.

Vitamin D: ಮೊದಲು ವಿಟಮಿನ್ ಡಿ ಟೆಸ್ಟ್ ಮಾಡಿಸಿಕೊಳ್ಳಿ, ದೇಹದ ತೂಕ ಕಡಿಮೆ ಮಾಡಿಕೊಳ್ಳುವಲ್ಲಿ ಇದರ ಪಾತ್ರ ಬಹುಮುಖ್ಯ! ಹೇಗೆ?
ದೇಹದ ತೂಕ ಕಡಿಮೆ ಮಾಡಿಕೊಳ್ಳಲು ವಿಟಮಿನ್ ಡಿ ಪಾತ್ರ ಬಹುಮುಖ್ಯ! ಹೇಗೆ?
TV9 Web
| Edited By: |

Updated on:Oct 08, 2022 | 2:50 PM

Share

ವಿಟಮಿನ್ ಡಿ ಅಂದರೆ ಕ್ಯಾಲ್ಸಿಫೆರಾಲ್ ಎಂದು ಕರೆಯುವ ಕೊಬ್ಬನ್ನು ಕರಗಿಸುವ ವಿಟಮಿನ್ (Vitamin D) ಇದಾಗಿದ್ದು, ಕೆಲವು ಆಹಾರಗಳಲ್ಲಿ ನೈಸರ್ಗಿಕವಾಗಿ ಇರುತ್ತದೆ. ವಿಟಮಿನ್ ಡಿ – ತೂಕ ನಷ್ಟಕ್ಕೆ ಅತ್ಯಂತ ಪ್ರಮುಖವಾದ ವಿಟಮಿನ್.

ನಮ್ಮಲ್ಲಿ ಹೆಚ್ಚಿನವರು ನಮ್ಮ ದೇಹ ತೂಕವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು (weight loss) ಬಹಳಷ್ಟು ಕಸರತ್ತು ಮಾಡುತ್ತಾರೆ. ಅದು ಜಿಮ್​ಗೆ (gym) ಹೋಗುವುದರಲಿ ಅಥವಾ ಶುದ್ಧ ಆಹಾರ ಕ್ರಮವನ್ನು ಅನುಸರಿಸುವುದಾಗಲಿ ಸಾಮಾನ್ಯವಾಗಿ ಮಾಡುತ್ತಿರುತ್ತಾರೆ. ಕೆಲವೊಮ್ಮೆ, ಉದ್ಯೋಗ ತಾಪತ್ರಯದಿಂದಾಗಿ ಅಥವಾ ಮತ್ಯಾವುದೋ ಅಂತಹುದೆ ತೊಡಕಿನಿಂದಾಗಿ ಯೋಜಿತ ರೀತಿಯಲ್ಲಿ ವ್ಯಾಯಾಮ ಮಾಡುವುದಿಲ್ಲ. ಹಾಗಾಗಿ ದೇಹ ತೂಕವನ್ನು ಕರಗಿಸಲು ಹೆಣಗಾಡುತ್ತೇವೆ. ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ದೇಹ ತೂಕ ಕಡಿಮೆ ಮಾಡಿಕೊಳ್ಳಲು (fat soluble vitamin) ಆಗದೇ ಹೋದಾಗ ಮತ್ತಷ್ಟು ಹೆಣಗಾಡುತ್ತೇವೆ.

ಮೊದಲು ವಿಟಮಿನ್ ಡಿ ಟೆಸ್ಟ್ ಮಾಡಿಸಿಕೊಳ್ಳಿ

ಇದರ ಹೊರತಾಗಿ ವಿಟಮಿನ್ ಡಿ ಕೊರತೆಯಿಂದಲೂ ದೇಹ ತೂಕ ಕಡಿಮೆ ಮಾಡಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಅಂದರೆ ದೇಹದಲ್ಲಿ ವಿಟಮಿನ್ ಡಿ ಕಡಿಮೆ ಪ್ರಮಾಣದಲ್ಲಿದ್ದಾಗ (Vitamin D deficiency) ದೇಹದ ತೂಕ ಹೆಚ್ಚಾಗುತ್ತಾ ಹೋಗುತ್ತದೆ. ದುರಾದೃಷ್ಟವೆಂದರೆ, ಬಹಳಷ್ಟು ಜನರಿಗೆ ಇದರ ಬಗ್ಗೆ ತಿಳಿದಿಲ್ಲ.

ನಿಮಗಿದು ಗೊತ್ತೆ? ಬಹುಪಾಲು ಭಾರತೀಯರು ವಿಟಮಿನ್ ಡಿ ಕೊರತೆ ಹೊಂದಿದ್ದಾರೆ!

ನಮ್ಮಲ್ಲಿ ಹೆಚ್ಚಿನವರು ನಮ್ಮ ದೇಹದಲ್ಲಿ ವಿಟಮಿನ್ ಡಿ ಪ್ರಮಾಣ ಎಷ್ಟಿದೆ ಎಂಬುದನ್ನು ಎಂದಿಗೂ ಪರೀಕ್ಷಿಸುವುದಿಲ್ಲ. ಮತ್ತು ನಮಗೆ ಅದರ ಕೊರತೆಯಿದೆ ಎಂದು ನಾವು ಎಂದಿಗೂ ತಿಳಿದಿರುವುದಿಲ್ಲ!

ವಿಟಮಿನ್ ಡಿ ನಮ್ಮ ದೇಹದಲ್ಲಿನ ಹಾರ್ಮೋನುಗಳ ಮಟ್ಟವನ್ನು ನಿಯಂತ್ರಣದಲ್ಲಿರಿಸುತ್ತದೆ. ತೂಕ ನಷ್ಟವನ್ನು ಹೆಚ್ಚಿಸಲು ಮತ್ತು ದೇಹದ ಕೊಬ್ಬನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಅದೇ ಸಮಯದಲ್ಲಿ, ನೀವು ತೂಕವನ್ನು ಕಳೆದುಕೊಂಡಾಗ, ವಿಟಮಿನ್ ಡಿ ಅನ್ನು ಹೀರಿಕೊಳ್ಳುವ ನಿಮ್ಮ ದೇಹದ ಸಾಮರ್ಥ್ಯವೂ ಹೆಚ್ಚಾಗುತ್ತದೆ. ಆದ್ದರಿಂದ, ಒಂದು ರೀತಿಯಲ್ಲಿ, ನೀವು ವಿಟಮಿನ್ ಡಿ ಯ ಸರಿಯಾದ ಪ್ರಮಾಣವನ್ನು ಹೊಂದಲು ಪ್ರಾರಂಭಿಸಿದ ನಂತರ ನಿಮ್ಮ ದೇಹದಲ್ಲಿ ಅದು ಹೀರಿಕೊಳ್ಳುವಿಕೆಯ ಪ್ರಮಾಣವೂ ಹೆಚ್ಚಾಗುತ್ತದೆ.

ವಿಟಮಿನ್ ಡಿ ಪಾತ್ರವು ತೂಕ ನಷ್ಟಕ್ಕೆ ಮಾತ್ರ ಸೀಮಿತವಾಗಿಲ್ಲ. ವಿಟಮಿನ್ ಡಿ ಕೊರತೆಯು ದುರ್ಬಲ ರೋಗನಿರೋಧಕ ಶಕ್ತಿ, ದುರ್ಬಲ ಮೂಳೆಗಳಂತಹ ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಖಿನ್ನತೆ, ಸ್ನಾಯುವಿನ ನಷ್ಟ, ಅಥವಾ ಕ್ಯಾನ್ಸರ್​ ಅಂತಹ ದೀರ್ಘಕಾಲದ ವ್ಯತಿರಿಕ್ತ ಪರಿಸ್ಥಿತಿಗಳು ಎದುರಿಸಬೇಕಾಗುತ್ತದೆ.

ಹಾಗಾದರೆ ದೈನಂದಿನ ಡೋಸ್ ಪ್ರಮಾಣದಲ್ಲಿ ವಿಟಮಿನ್ ಡಿ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ಉತ್ತಮ ಮಾರ್ಗ ಯಾವುದು?

ಸರಳವಾಗಿ ಹೊರಗೆ ಹೋಗಿ ಪ್ರತಿದಿನ 10 ನಿಮಿಷಗಳ ಕಾಲ ಸೂರ್ಯನ ಕಿರಣಗಳನ್ನು ಹೀರಿಕೊಳ್ಳಿ. ಇದು ನಿಮ್ಮ ದೈನಂದಿನ ಅಗತ್ಯಕ್ಕೆ ತಕ್ಕಂತೆ ವಿಟಮಿನ್ ಡಿ ಪ್ರಮಾಣವನ್ನು ಪೂರೈಸುತ್ತದೆ.

ಈ ಅವಶ್ಯಕತೆಯನ್ನು ಪೂರೈಸಿಕೊಳ್ಳಲು ನಿಮಗೆ ವಿಟಮಿನ್ ಡಿ ಮಾತ್ರೆಗಳ ಅಗತ್ಯವಿಲ್ಲ. ನೀವು 10 ನಿಮಿಷಗಳ ಕಾಲ ಸೂರ್ಯನ ಕಿರಣಗಳಲ್ಲಿ ಹೋಗಬಹುದಾದರೆ ವಾರದಲ್ಲಿ 3 ದಿನಗಳ ಕಾಲ ಬೆಳಿಗ್ಗೆ ಅಥವಾ ಸಂಜೆ ಕಾಲದಲ್ಲಿ ಇದು ನಿಮ್ಮ ದೈನಂದಿನ ಡೋಸೇಜ್ ವಿಟಮಿನ್ ಡಿ (ದಿನಕ್ಕೆ 400-600 IU) ನೀಡುತ್ತದೆ.

ವಿಟಮಿನ್ ಡಿ ನಿಮ್ಮ ದೈನಂದಿನ ಪ್ರಮಾಣವನ್ನು ಪಡೆಯಲು ಇತರೆ ಅನೇಕ ಮಾರ್ಗಗಳಿವೆ. ಮೊಟ್ಟೆಗಳು, ಮಾಂಸದಂತಹ ನೈಸರ್ಗಿಕ ಆಹಾರಗಳು, ಅಣಬೆಗಳು, ಕಾಡ್ ಲಿವರ್ ಎಣ್ಣೆ ಇತ್ಯಾದಿ.

Published On - 4:33 pm, Wed, 5 October 22

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು